<p>ಸಿಂಧನೂರು: ‘ಕಳೆದ ವರ್ಷ ಸಿಂಧನೂರಿನಲ್ಲಿ ದಸರಾವನ್ನು ಮೈಸೂರು ಮಾದರಿಯಲ್ಲಿ ವಿಜೃಂಭಣೆಯಿಂದ ಆಚರಿಸುವ ಮೂಲಕ ರಾಜ್ಯದಲ್ಲಿಯೇ ಮೈಲುಗಲ್ಲು ಸ್ಥಾಪಿಸಲಾಯಿತು. ಅದರಂತೆ ಈ ವರ್ಷವೂ ವಿಜೃಂಭಣೆಯಿಂದ ಆಚರಿಸಲು ಸಿದ್ದತೆ ಮಾಡಿಕೊಳ್ಳಬೇಕು’ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.</p>.<p>ನಗರಸಭೆ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮೂರನೇ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ,‘ಎಲ್ಲ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲರ ಸಹಭಾಗಿತ್ವದಲ್ಲಿ ಸಿದ್ದತಾ ಕಾರ್ಯ ನಡೆಸಬೇಕು’ ಎಂದರು.</p>.<p>ತಹಶೀಲ್ದಾರ್ ಅರುಣ್ ಎಚ್.ದೇಸಾಯಿ ಮಾತನಾಡಿ,‘ಸೆ.22ರಂದು ವಿಧಾನಸಭೆ ಮತ್ತು ವಿಧಾನ ಪರಿಷತ್ ಸಭಾಪತಿಗಳಿಂದ ದಸರಾ ಉತ್ಸವ ಉದ್ಘಾಟನೆಯಾಗಲಿದ್ದು, ಕಳೆದ ವರ್ಷಕ್ಕಿಂತ ಭಿನ್ನವಾಗಿ ಈ ಬಾರಿ ಗ್ರಾಮೀಣ ಪ್ರದೇಶದ ಕಲೆ, ಸಾಹಿತ್ಯ, ಕ್ರೀಡೆಗಳಿಗೆ ಉತ್ತೇಜನೆ ನೀಡುವ ನಿಟ್ಟಿನಲ್ಲಿ ಐದು ಪಂಚಾಯಿತಿ ಒಳಗೊಂಡು ಒಂದು ಸ್ಥಳದಲ್ಲಿ ಕಾರ್ಯಕ್ರಮ ಆಯೋಜಿಸಬೇಕು’ ಎಂದು ಹೇಳಿದರು.</p>.<p>‘ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ 25 ಗ್ರಾಮ ಪಂಚಾಯಿತಿಗಳನ್ನು ಒಳಗೊಳ್ಳುವಂತೆ ಐದು ಕಡೆಗಳಲ್ಲಿ ಸಭೆ ಮಾಡಿ ಅಲ್ಲಿಯೇ ಕಾರ್ಯಕ್ರಮವನ್ನು ಆಯೋಜಿಸುವ ಕುರಿತು ರೂಪುರೇಷ ತಯಾರಿಸಲಾಗುವುದು. ಒಟ್ಟಾರೆ ತಾಲ್ಲೂಕಿನ 240 ಜನವಸತಿ ಗ್ರಾಮಗಳಿಗೆ ಹಬ್ಬದ ಸಂದೇಶ ತಲುಪಿಸಬೇಕಾಗಿದೆ’ ಎಂದರು.</p>.<p>‘ಸೆ.29ರಿಂದ ಅಕ್ಟೋಬರ್ 2 ರವರೆಗೆ ನಗರದ ಆರ್ಜಿಎಂ ಶಾಲಾ ಮೈದಾನದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಗ್ರಾಮೀಣ ಮಟ್ಟದಲ್ಲಿ ವಿಜೇತರಾದವರಿಗೆ ಪ್ರಶಸ್ತಿ ನೀಡಲಾಗುವುದು. ಅ.2ರಂದು ಅಂಬಾರಿಯಲ್ಲಿ ಬಗಳಾಮುಖಿಯ ಮೂರ್ತಿಯ ಮೆರವಣಿಗೆ ನಡೆಸಲಾಗುವುದು’ ಎಂದು ಹೇಳಿದರು.</p>.<p>‘ಕಳೆದ ವರ್ಷ ಆಗಿರುವ ಸಣ್ಣಪುಟ್ಟ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ಈ ಬಾರಿ ಇನ್ನೂ ಉತ್ತಮವಾಗಿ ದಸರಾ ಆಚರಿಸಬೇಕಾಗಿದೆ’ ಎಂದು ಮಾಜಿ ಶಾಸಕ ವೆಂಕಟರಾವ್ ನಾಡಗೌಡ ತಿಳಿಸಿದರು.</p>.<p>‘ದಸರಾ ಉತ್ಸವದಲ್ಲಿ ಎಲ್ಲ ಧರ್ಮೀಯರು ಭಾಗವಹಿಸಿ ಸಹಕಾರ ನೀಡಬೇಕು’ ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹೇಳಿದರು.</p>.<p>ಹಿರಿಯ ಕಲಾವಿದರು, ಸಂಗೀತಗಾರರು, ರಂಗ ಕರ್ಮಿಗಳು, ಸಮಾಜ ಸೇವಕರು ಹೀಗೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರನ್ನು ಗುರುತಿಸಿ ಸನ್ಮಾನಿಸಬೇಕು ಎಂದು ನಗರಸಭೆ ಸದಸ್ಯ ಚಂದ್ರಶೇಖರ ಮೈಲಾರ ತಿಳಿಸಿದರು.</p>.<p>ಉತ್ಸವದಲ್ಲಿ ಭಾವೈಕ್ಯ ಸಾರುವ ಲೋಗೊ ನಿರ್ಮಿಸಿ, ಸಾಮರಸ್ಯ ಉಂಟು ಮಾಡುವ ಕಾರ್ಯ ಈ ಕಾರ್ಯಕ್ರಮದಲ್ಲಿ ಆಗುವುದು ಸೂಕ್ತ ಎಂದು ಮುಖಂಡ ಅಯ್ಯೂಬ್ಖಾನ್ ಹೇಳಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ಡಿವೈಎಸ್ಪಿ ಬಿ.ಎಸ್.ತಳವಾರ, ನಗರಸಭೆ ಪ್ರಭಾರ ಪೌರಾಯುಕ್ತೆ ಶೃತಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂಧನೂರು: ‘ಕಳೆದ ವರ್ಷ ಸಿಂಧನೂರಿನಲ್ಲಿ ದಸರಾವನ್ನು ಮೈಸೂರು ಮಾದರಿಯಲ್ಲಿ ವಿಜೃಂಭಣೆಯಿಂದ ಆಚರಿಸುವ ಮೂಲಕ ರಾಜ್ಯದಲ್ಲಿಯೇ ಮೈಲುಗಲ್ಲು ಸ್ಥಾಪಿಸಲಾಯಿತು. ಅದರಂತೆ ಈ ವರ್ಷವೂ ವಿಜೃಂಭಣೆಯಿಂದ ಆಚರಿಸಲು ಸಿದ್ದತೆ ಮಾಡಿಕೊಳ್ಳಬೇಕು’ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.</p>.<p>ನಗರಸಭೆ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮೂರನೇ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ,‘ಎಲ್ಲ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲರ ಸಹಭಾಗಿತ್ವದಲ್ಲಿ ಸಿದ್ದತಾ ಕಾರ್ಯ ನಡೆಸಬೇಕು’ ಎಂದರು.</p>.<p>ತಹಶೀಲ್ದಾರ್ ಅರುಣ್ ಎಚ್.ದೇಸಾಯಿ ಮಾತನಾಡಿ,‘ಸೆ.22ರಂದು ವಿಧಾನಸಭೆ ಮತ್ತು ವಿಧಾನ ಪರಿಷತ್ ಸಭಾಪತಿಗಳಿಂದ ದಸರಾ ಉತ್ಸವ ಉದ್ಘಾಟನೆಯಾಗಲಿದ್ದು, ಕಳೆದ ವರ್ಷಕ್ಕಿಂತ ಭಿನ್ನವಾಗಿ ಈ ಬಾರಿ ಗ್ರಾಮೀಣ ಪ್ರದೇಶದ ಕಲೆ, ಸಾಹಿತ್ಯ, ಕ್ರೀಡೆಗಳಿಗೆ ಉತ್ತೇಜನೆ ನೀಡುವ ನಿಟ್ಟಿನಲ್ಲಿ ಐದು ಪಂಚಾಯಿತಿ ಒಳಗೊಂಡು ಒಂದು ಸ್ಥಳದಲ್ಲಿ ಕಾರ್ಯಕ್ರಮ ಆಯೋಜಿಸಬೇಕು’ ಎಂದು ಹೇಳಿದರು.</p>.<p>‘ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ 25 ಗ್ರಾಮ ಪಂಚಾಯಿತಿಗಳನ್ನು ಒಳಗೊಳ್ಳುವಂತೆ ಐದು ಕಡೆಗಳಲ್ಲಿ ಸಭೆ ಮಾಡಿ ಅಲ್ಲಿಯೇ ಕಾರ್ಯಕ್ರಮವನ್ನು ಆಯೋಜಿಸುವ ಕುರಿತು ರೂಪುರೇಷ ತಯಾರಿಸಲಾಗುವುದು. ಒಟ್ಟಾರೆ ತಾಲ್ಲೂಕಿನ 240 ಜನವಸತಿ ಗ್ರಾಮಗಳಿಗೆ ಹಬ್ಬದ ಸಂದೇಶ ತಲುಪಿಸಬೇಕಾಗಿದೆ’ ಎಂದರು.</p>.<p>‘ಸೆ.29ರಿಂದ ಅಕ್ಟೋಬರ್ 2 ರವರೆಗೆ ನಗರದ ಆರ್ಜಿಎಂ ಶಾಲಾ ಮೈದಾನದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಗ್ರಾಮೀಣ ಮಟ್ಟದಲ್ಲಿ ವಿಜೇತರಾದವರಿಗೆ ಪ್ರಶಸ್ತಿ ನೀಡಲಾಗುವುದು. ಅ.2ರಂದು ಅಂಬಾರಿಯಲ್ಲಿ ಬಗಳಾಮುಖಿಯ ಮೂರ್ತಿಯ ಮೆರವಣಿಗೆ ನಡೆಸಲಾಗುವುದು’ ಎಂದು ಹೇಳಿದರು.</p>.<p>‘ಕಳೆದ ವರ್ಷ ಆಗಿರುವ ಸಣ್ಣಪುಟ್ಟ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ಈ ಬಾರಿ ಇನ್ನೂ ಉತ್ತಮವಾಗಿ ದಸರಾ ಆಚರಿಸಬೇಕಾಗಿದೆ’ ಎಂದು ಮಾಜಿ ಶಾಸಕ ವೆಂಕಟರಾವ್ ನಾಡಗೌಡ ತಿಳಿಸಿದರು.</p>.<p>‘ದಸರಾ ಉತ್ಸವದಲ್ಲಿ ಎಲ್ಲ ಧರ್ಮೀಯರು ಭಾಗವಹಿಸಿ ಸಹಕಾರ ನೀಡಬೇಕು’ ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹೇಳಿದರು.</p>.<p>ಹಿರಿಯ ಕಲಾವಿದರು, ಸಂಗೀತಗಾರರು, ರಂಗ ಕರ್ಮಿಗಳು, ಸಮಾಜ ಸೇವಕರು ಹೀಗೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರನ್ನು ಗುರುತಿಸಿ ಸನ್ಮಾನಿಸಬೇಕು ಎಂದು ನಗರಸಭೆ ಸದಸ್ಯ ಚಂದ್ರಶೇಖರ ಮೈಲಾರ ತಿಳಿಸಿದರು.</p>.<p>ಉತ್ಸವದಲ್ಲಿ ಭಾವೈಕ್ಯ ಸಾರುವ ಲೋಗೊ ನಿರ್ಮಿಸಿ, ಸಾಮರಸ್ಯ ಉಂಟು ಮಾಡುವ ಕಾರ್ಯ ಈ ಕಾರ್ಯಕ್ರಮದಲ್ಲಿ ಆಗುವುದು ಸೂಕ್ತ ಎಂದು ಮುಖಂಡ ಅಯ್ಯೂಬ್ಖಾನ್ ಹೇಳಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ಡಿವೈಎಸ್ಪಿ ಬಿ.ಎಸ್.ತಳವಾರ, ನಗರಸಭೆ ಪ್ರಭಾರ ಪೌರಾಯುಕ್ತೆ ಶೃತಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>