<p><strong>ಮಾನ್ವಿ:</strong> ತಾಲ್ಲೂಕಿನಲ್ಲಿ ಈಚೆಗೆ ಸುರಿದ ಅಕಾಲಿಕ ಮಳೆಯಿಂದ ಬೆಳೆ ಹಾನಿಗೀಡಾದ ಜಮೀನುಗಳಿಗೆ ಶಾಸಕ ರಾಜಾ ವೆಂಕಟಪ್ಪ ನಾಯಕ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಸರ್ಕಾರದ ವತಿಯಿಂದ ಅಗತ್ಯ ಪರಿಹಾರ ದೊರಕಿಸಿಕೊಡಲು ಶ್ರಮಿಸುವುದಾಗಿ ಅವರು ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಆತ್ಮಸ್ಥೈರ್ಯ ತುಂಬಿ ಮಾತನಾಡಿದರು.</p>.<p>‘ಈಚೆಗೆ ಸುರಿದ ಮಳೆಯಿಂದ ಮಾನ್ವಿ ತಾಲ್ಲೂಕಿನಲ್ಲಿ 6,435 ಎಕರೆ ಹಾಗೂ ಸಿರವಾರ ತಾಲ್ಲೂಕಿನ 2,158ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತಕ್ಕೆ ಹಾನಿಯಾಗಿದೆ. ಸರ್ಕಾರ ಕೂಡಲೇ ಪ್ರತಿ ಎಕರೆಗೆ ₹ 35ಸಾವಿರ ಪರಿಹಾರ ಘೋಷಿಸಬೇಕು. ಹತ್ತಿ ಮತ್ತು ತೊಗರಿ ಬೆಳೆಗಳು ಕೂಡ ಹಾನಿಗೊಳಗಾಗಿದ್ದು ಹತ್ತಿಗೆ ಪ್ರತಿ ಎಕರೆಗೆ ₹ 25ಸಾವಿರ, ತೊಗರಿ ಪ್ರತಿ ಎಕರೆಗೆ ₹ 15ಸಾವಿರ ಹಾಗೂ ಮೆಣಸಿನಕಾಯಿಗೆ ಪ್ರತಿ ಎಕರೆಗೆ ₹ 10 ಸಾವಿರ ಪರಿಹಾರ ಧನ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಬೆಳೆಹಾನಿಯ ಸಮರ್ಪಕ ವರದಿ ತಯಾರಿಸಿ ಕೂಡಲೇ ಸರ್ಕಾರಕ್ಕೆ ಸಲ್ಲಿಸಲು ಅವರು ಕಂದಾಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜೆಡಿಎಸ್ ಪಕ್ಷದ ಮುಖಂಡರಾದ ರಾಜಾ ರಾಮಚಂದ್ರನಾಯಕ, ಮಲ್ಲಿಕಾರ್ಜುನ ಪಾಟೀಲ್, ಇಬ್ರಾಹಿಂ ಬಾಷಾ, ಹನುಮಂತ ಭೋವಿ, ಅಮರೇಶಗೌಡ, ಪಂಪನಗೌಡ, ಬಸನಗೌಡ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ:</strong> ತಾಲ್ಲೂಕಿನಲ್ಲಿ ಈಚೆಗೆ ಸುರಿದ ಅಕಾಲಿಕ ಮಳೆಯಿಂದ ಬೆಳೆ ಹಾನಿಗೀಡಾದ ಜಮೀನುಗಳಿಗೆ ಶಾಸಕ ರಾಜಾ ವೆಂಕಟಪ್ಪ ನಾಯಕ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಸರ್ಕಾರದ ವತಿಯಿಂದ ಅಗತ್ಯ ಪರಿಹಾರ ದೊರಕಿಸಿಕೊಡಲು ಶ್ರಮಿಸುವುದಾಗಿ ಅವರು ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಆತ್ಮಸ್ಥೈರ್ಯ ತುಂಬಿ ಮಾತನಾಡಿದರು.</p>.<p>‘ಈಚೆಗೆ ಸುರಿದ ಮಳೆಯಿಂದ ಮಾನ್ವಿ ತಾಲ್ಲೂಕಿನಲ್ಲಿ 6,435 ಎಕರೆ ಹಾಗೂ ಸಿರವಾರ ತಾಲ್ಲೂಕಿನ 2,158ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತಕ್ಕೆ ಹಾನಿಯಾಗಿದೆ. ಸರ್ಕಾರ ಕೂಡಲೇ ಪ್ರತಿ ಎಕರೆಗೆ ₹ 35ಸಾವಿರ ಪರಿಹಾರ ಘೋಷಿಸಬೇಕು. ಹತ್ತಿ ಮತ್ತು ತೊಗರಿ ಬೆಳೆಗಳು ಕೂಡ ಹಾನಿಗೊಳಗಾಗಿದ್ದು ಹತ್ತಿಗೆ ಪ್ರತಿ ಎಕರೆಗೆ ₹ 25ಸಾವಿರ, ತೊಗರಿ ಪ್ರತಿ ಎಕರೆಗೆ ₹ 15ಸಾವಿರ ಹಾಗೂ ಮೆಣಸಿನಕಾಯಿಗೆ ಪ್ರತಿ ಎಕರೆಗೆ ₹ 10 ಸಾವಿರ ಪರಿಹಾರ ಧನ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಬೆಳೆಹಾನಿಯ ಸಮರ್ಪಕ ವರದಿ ತಯಾರಿಸಿ ಕೂಡಲೇ ಸರ್ಕಾರಕ್ಕೆ ಸಲ್ಲಿಸಲು ಅವರು ಕಂದಾಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜೆಡಿಎಸ್ ಪಕ್ಷದ ಮುಖಂಡರಾದ ರಾಜಾ ರಾಮಚಂದ್ರನಾಯಕ, ಮಲ್ಲಿಕಾರ್ಜುನ ಪಾಟೀಲ್, ಇಬ್ರಾಹಿಂ ಬಾಷಾ, ಹನುಮಂತ ಭೋವಿ, ಅಮರೇಶಗೌಡ, ಪಂಪನಗೌಡ, ಬಸನಗೌಡ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>