ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಮಾನ್ವಿ: ಶಾಸಕರಿಂದ ಗೋವು ಪೂಜೆ

Last Updated 6 ನವೆಂಬರ್ 2021, 11:46 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ನೀರಮಾನ್ವಿ(ಮಾನ್ವಿ): ತಾಲ್ಲೂಕಿನ ನೀರಮಾನ್ವಿ ಗ್ರಾಮದ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಶಾಸಕ ರಾಜಾ ವೆಂಕಟಪ್ಪ ನಾಯಕ ಗೋವು ಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಪವಿತ್ರವಾದ ಗೋವಿನಲ್ಲಿ ಮುಕ್ಕೋಟಿ ದೇವತೆಗಳು ನೆಲೆಸಿರುವ ಬಗ್ಗೆ ನಂಬಿಕೆ ಇದೆ. ದೀಪಾವಳಿ ಸಂದರ್ಭದಲ್ಲಿ ಗೋವುಗಳನ್ನು ಪೂಜಿಸುವುದು ಮಹತ್ವದ ಧಾರ್ಮಿಕ ಕಾರ್ಯ. ಇದರೊಂದಿಗೆ ಗೋವುಗಳ ಸಂರಕ್ಷಣೆಯೂ ಅಗತ್ಯ’ ಎಂದು ಹೇಳಿದರು.

ದೇವಸ್ಥಾನದ ಸಮಿತಿ ವತಿಯಿಂದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಸನ್ಮಾನಿಸಲಾಯಿತು.

ತಹಶೀಲ್ದಾರ್ ಅಬ್ದುಲ್ ವಾಹಿದ್, ಮುಖಂಡರಾದ ರಾಜಾ ರಾಮಚಂದ್ರ ನಾಯಕ, ಶ್ರೀನಿವಾಸ ನಾಯಕ, ಈರಣ್ಣ ಮರ್ಲಟ್ಟಿ, ಶರಣಪ್ಪಗೌಡ ಮದ್ಲಾಪುರ, ಹಂಪನಗೌಡ ನೀರಮಾನ್ವಿ, ಗೋಪಾಲನಾಯಕ ಹರವಿ , ಕಂದಾಯ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT