<p><strong>ಮಸ್ಕಿ: </strong>ದೀಪಾವಳಿಯ ಬಲಿಪಾಡ್ಯಮಿಯನ್ನು ಶುಕ್ರವಾರ ಪಟ್ಟಣದ ಭ್ರಮರಾಂಬಾ ದೇವಸ್ಥಾನದಲ್ಲಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರು ಗೋವಿಗೆ ಪೂಜೆ ಸಲ್ಲಿಸುವ ಮೂಲಕ ಆಚರಿಸಿದರು.</p>.<p>ಬೆಳಿಗ್ಗೆ ದೇವಸ್ಥಾನಕ್ಕೆ ಆಗಮಿಸಿದ ಶಾಸಕರು, ಭ್ರಮರಾಂಬಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗೋವಿಗೆ ವಿಭೂತಿ, ಕುಂಕಮ ಹಚ್ಚಿ ಪೂಜೆ ಸಲ್ಲಿಸಿದರು.</p>.<p>ದೀಪಾವಳಿಯು ಸರ್ವರ ಬಾಳಿನಲ್ಲಿ ಬೆಳಕು ತರಲಿ ಎಂದು ಇದೇ ಶುಭ ಹಾರೈಸಿದರು. ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಿವಣ್ಣ ನಾಯಕ ಸೇರಿದಂತೆ ಮುಖಂಡರು ಹಾಗೂ ದೇವಸ್ಥಾನ ಸಮಿತಿ ಅರ್ಚಕರು ಇದ್ದರು.</p>.<p><span class="bold"><strong>ಉದ್ಬಾಳದಲ್ಲಿ ಗೋವು ಪೂಜೆ :</strong></span> ತಾಲ್ಲೂಕಿನ ಉದ್ಬಾಳ ಗ್ರಾಮದಲ್ಲಿ ಮುಜುರಾಯಿ ಇಲಾಖೆಗೆ ಸೇರಿದ ದೇವಸ್ಥಾನದಲ್ಲಿ ಗೋ ಪೂಜೆ ನಡೆಸಲಾಯಿತು. ಬಳಗಾನೂರು ಪಟ್ಟಣದ ಮಾರುತಿ ದೇವಸ್ಥಾನದಲ್ಲಿ ಗೋವು ಪೂಜಾ ಕಾರ್ಯಕ್ರಮ ನಡೆಯಿತು. ತಹಶೀಲ್ದಾರ್ (ಗ್ರೇಡ್-2) ಪ್ರಭಾಕರ್ ಭಟ್, ದೇವಸ್ಥಾನ ಸಮಿತಿ ಅರ್ಚಕ ರಂಗನಾಥ ಪೂಜಾರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ: </strong>ದೀಪಾವಳಿಯ ಬಲಿಪಾಡ್ಯಮಿಯನ್ನು ಶುಕ್ರವಾರ ಪಟ್ಟಣದ ಭ್ರಮರಾಂಬಾ ದೇವಸ್ಥಾನದಲ್ಲಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರು ಗೋವಿಗೆ ಪೂಜೆ ಸಲ್ಲಿಸುವ ಮೂಲಕ ಆಚರಿಸಿದರು.</p>.<p>ಬೆಳಿಗ್ಗೆ ದೇವಸ್ಥಾನಕ್ಕೆ ಆಗಮಿಸಿದ ಶಾಸಕರು, ಭ್ರಮರಾಂಬಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗೋವಿಗೆ ವಿಭೂತಿ, ಕುಂಕಮ ಹಚ್ಚಿ ಪೂಜೆ ಸಲ್ಲಿಸಿದರು.</p>.<p>ದೀಪಾವಳಿಯು ಸರ್ವರ ಬಾಳಿನಲ್ಲಿ ಬೆಳಕು ತರಲಿ ಎಂದು ಇದೇ ಶುಭ ಹಾರೈಸಿದರು. ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಿವಣ್ಣ ನಾಯಕ ಸೇರಿದಂತೆ ಮುಖಂಡರು ಹಾಗೂ ದೇವಸ್ಥಾನ ಸಮಿತಿ ಅರ್ಚಕರು ಇದ್ದರು.</p>.<p><span class="bold"><strong>ಉದ್ಬಾಳದಲ್ಲಿ ಗೋವು ಪೂಜೆ :</strong></span> ತಾಲ್ಲೂಕಿನ ಉದ್ಬಾಳ ಗ್ರಾಮದಲ್ಲಿ ಮುಜುರಾಯಿ ಇಲಾಖೆಗೆ ಸೇರಿದ ದೇವಸ್ಥಾನದಲ್ಲಿ ಗೋ ಪೂಜೆ ನಡೆಸಲಾಯಿತು. ಬಳಗಾನೂರು ಪಟ್ಟಣದ ಮಾರುತಿ ದೇವಸ್ಥಾನದಲ್ಲಿ ಗೋವು ಪೂಜಾ ಕಾರ್ಯಕ್ರಮ ನಡೆಯಿತು. ತಹಶೀಲ್ದಾರ್ (ಗ್ರೇಡ್-2) ಪ್ರಭಾಕರ್ ಭಟ್, ದೇವಸ್ಥಾನ ಸಮಿತಿ ಅರ್ಚಕ ರಂಗನಾಥ ಪೂಜಾರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>