<p><strong>ರಾಯಚೂರು:</strong> ಏತ ನೀರಾವರಿಗಾಗಿ ರೈತರ ಭೂ ಸ್ವಾಧೀನಪಡಿಸಿಕೊಂಡು ರೈತರಿಗೆ ನೀಡಬೇಕಾದ ಪರಿಹಾರ ಹಣ ನೀಡದ ಕಾರಣ ರಾಯಚೂರು ಉಪ ವಿಭಾಗಾಧಿಕಾರಿ ಕಚೇರಿ ಜಪ್ತಿಗೆ ನ್ಯಾಯಾಲಯ ಆದೇಶಿಸಿದೆ.</p>.<p>ಕೋರ್ಟ್ ಆದೇಶದ ಅನ್ವಯ ಶನಿವಾರ ಜಿಲ್ಲಾ ನ್ಯಾಯಾಲಯದ ಸಿಬ್ಬಂದಿ ಎಸಿ ಕಚೇರಿಯ ಪೀಠೋಪಕರಣಗಳನ್ನು ಜಪ್ತಿಗೆ ಮುಂದಾದರು.</p>.<p>ಆಗ ಎಚ್ಚೆತ್ತುಕೊಂಡು ಉಪ ವಿಭಾಗಾಧಿಕಾರಿ ಗಜಾನನ ಬಾಳೆ, ‘ಶೀಘ್ರವೇ ರೈತರ ಪರಿಹಾರ ಹಣ ಜಮಾ ಮಾಡಲಾಗುವುದು’ ಎಂದು ಭರವಸೆ ನೀಡಿದರು. ಬಳಿಕ ನ್ಯಾಯಾಲಯದ ಸಿಬ್ಬಂದಿ ಇನ್ನಷ್ಟು ಕಾಲಾವಕಾಶ ನೀಡಿ ಮರಳಿದರು.</p>.<p>ಹಿನ್ನೆಲೆ: ಸಿರವಾರ ತಾಲ್ಲೂಕಿನ ಮಾಡಗಿರಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 2009ರಲ್ಲಿ ಹಳ್ಳದಿಂದ ಏತ ನೀರಾವರಿ ಯೋಜನೆಗಾಗಿ ಸುಮಾರು 33 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಅಂದಿನ ಪರಿಹಾರ ಕಡಿಮೆಯಾಗಿದೆ ಎಂದು ರೈತರು ಕೋರ್ಟ್ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್, ಪ್ರತಿ ಎಕರೆಗೆ ₹2.50 ಲಕ್ಷ ನಿಗದಿಪಡಿಸಿ 2009ರಿಂದ ಅನ್ವಯವಾಗುವಂತೆ ಬಡ್ಡಿಯೊಂದಿಗೆ ರೈತರಿಗೆ ಪರಿಹಾರ ನೀಡಬೇಕು’ ಎಂದು ಆದೇಶಿಸಿತ್ತು. </p>.<p>ಈ ಆದೇಶಕ್ಕೆ ಉಪ ವಿಭಾಗಾಧಿಕಾರಿ ಅಥವಾ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಸ್ಪಂದಿಸಿರಲಿಲ್ಲ. ಹೀಗಾಗಿ ರೈತರ ಪರ ವಕಾಲತು ವಹಿಸಿದ್ದ ವಕೀಲ ಮತ್ತೆ ನ್ಯಾಯಾಲಯಕ್ಕೆ ಗಮನಕ್ಕೆ ತಂದಿದ್ದರು. ಆಗ ಕೋರ್ಟ್ ಕಚೇರಿ ಜಪ್ತಿಗೆ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಏತ ನೀರಾವರಿಗಾಗಿ ರೈತರ ಭೂ ಸ್ವಾಧೀನಪಡಿಸಿಕೊಂಡು ರೈತರಿಗೆ ನೀಡಬೇಕಾದ ಪರಿಹಾರ ಹಣ ನೀಡದ ಕಾರಣ ರಾಯಚೂರು ಉಪ ವಿಭಾಗಾಧಿಕಾರಿ ಕಚೇರಿ ಜಪ್ತಿಗೆ ನ್ಯಾಯಾಲಯ ಆದೇಶಿಸಿದೆ.</p>.<p>ಕೋರ್ಟ್ ಆದೇಶದ ಅನ್ವಯ ಶನಿವಾರ ಜಿಲ್ಲಾ ನ್ಯಾಯಾಲಯದ ಸಿಬ್ಬಂದಿ ಎಸಿ ಕಚೇರಿಯ ಪೀಠೋಪಕರಣಗಳನ್ನು ಜಪ್ತಿಗೆ ಮುಂದಾದರು.</p>.<p>ಆಗ ಎಚ್ಚೆತ್ತುಕೊಂಡು ಉಪ ವಿಭಾಗಾಧಿಕಾರಿ ಗಜಾನನ ಬಾಳೆ, ‘ಶೀಘ್ರವೇ ರೈತರ ಪರಿಹಾರ ಹಣ ಜಮಾ ಮಾಡಲಾಗುವುದು’ ಎಂದು ಭರವಸೆ ನೀಡಿದರು. ಬಳಿಕ ನ್ಯಾಯಾಲಯದ ಸಿಬ್ಬಂದಿ ಇನ್ನಷ್ಟು ಕಾಲಾವಕಾಶ ನೀಡಿ ಮರಳಿದರು.</p>.<p>ಹಿನ್ನೆಲೆ: ಸಿರವಾರ ತಾಲ್ಲೂಕಿನ ಮಾಡಗಿರಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 2009ರಲ್ಲಿ ಹಳ್ಳದಿಂದ ಏತ ನೀರಾವರಿ ಯೋಜನೆಗಾಗಿ ಸುಮಾರು 33 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಅಂದಿನ ಪರಿಹಾರ ಕಡಿಮೆಯಾಗಿದೆ ಎಂದು ರೈತರು ಕೋರ್ಟ್ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್, ಪ್ರತಿ ಎಕರೆಗೆ ₹2.50 ಲಕ್ಷ ನಿಗದಿಪಡಿಸಿ 2009ರಿಂದ ಅನ್ವಯವಾಗುವಂತೆ ಬಡ್ಡಿಯೊಂದಿಗೆ ರೈತರಿಗೆ ಪರಿಹಾರ ನೀಡಬೇಕು’ ಎಂದು ಆದೇಶಿಸಿತ್ತು. </p>.<p>ಈ ಆದೇಶಕ್ಕೆ ಉಪ ವಿಭಾಗಾಧಿಕಾರಿ ಅಥವಾ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಸ್ಪಂದಿಸಿರಲಿಲ್ಲ. ಹೀಗಾಗಿ ರೈತರ ಪರ ವಕಾಲತು ವಹಿಸಿದ್ದ ವಕೀಲ ಮತ್ತೆ ನ್ಯಾಯಾಲಯಕ್ಕೆ ಗಮನಕ್ಕೆ ತಂದಿದ್ದರು. ಆಗ ಕೋರ್ಟ್ ಕಚೇರಿ ಜಪ್ತಿಗೆ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>