<p><strong>ಮಸ್ಕಿ: </strong>ಪಟ್ಟಣದ ಕೃಷಿ ಕೇಂದ್ರದಲ್ಲಿ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಸಮಯಕ್ಕೆ ಸರಿಯಾಗಿ ವಿತರಣೆ ಮಾಡುತ್ತಿಲ್ಲವೆಂದು ಆರೋಪಿಸಿ, ರೈತರು ರಾಷ್ಟ್ರೀಯ ಹೆದ್ದಾರಿ (150) ಎ ತಡೆದು ಪ್ರತಿಭಟನೆ ನಡೆಸಿದ ಘಟನೆ ಶನಿವಾರ ಸಂಜೆ ಪಟ್ಟಣದಲ್ಲಿ ನಡೆಯಿತು.</p>.<p>ಲಿಂಗಸುಗೂರು ರಸ್ತೆಯ ಹೊರವಲಯದಲ್ಲಿರುವ ಕೃಷಿ ಕೇಂದ್ರದಲ್ಲಿ ಬೆಳಿಗ್ಗೆಯಿಂದ ರೈತರು ಕಡಲೇ ಬಿತ್ತನೆ ಬೀಜಕ್ಕಾಗಿ ಕಾಯ್ದು ಕುಳಿತ್ತಿದ್ದರು. ಸಂಜೆಯಾದರೂ ಬಿತ್ತನೆ ಬೀಜಗಳನ್ನು ವಿತರಿಸದೆ ಇಲಾಖೆಯ ಸಿಬ್ಬಂದಿ ವಿಳಂಬ ಮಾಡಿದ್ದರಿಂದ ರೊಚ್ಚಿಗೆದ್ದ ರೈತರು ರಾಷ್ಟ್ರೀಯ ಹೆದ್ದಾರಿ 150 (ಎ) ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.</p>.<p>ಟೈರ್ಗಳಿಗೆ ಬೆಂಕಿಹಚ್ಚಿ ಕೃಷಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಹೆದ್ದಾರಿ ಮೇಲೆ ಕೆಲ ಕಾಲ ಸಾರಿಗೆ ಸಂಚಾರ ಅವ್ಯವಸ್ಥೆಯಾಯಿತು.</p>.<p>ಎರಡು ದಿನಗಳಿಂದ ರೈತರಿಗೆ ಶನಿವಾರ ಕಡಲೇ ಬೀಜ ವಿತರಣೆ ಮಾಡುವುದಾಗಿ ಹೇಳಿ ಗ್ರಾಮೀಣ ಭಾಗದ ರೈತರಿಗೆ ಟೊಕನ್ ಕೊಟ್ಟಿದ್ದರು. ಬಿತ್ತನೆ ಬೀಜ ತರುವುದಕ್ಕಾಗಿ ರೈತರು ಹಳ್ಳಿಗಳಿಂದ ಟಾಟ್ ಏಸ್, ಟಾಂಟಾಂ ವಾಹನದಲ್ಲಿ ಬಂದು ಜಮಾಯಿಸಿದ್ದರು. ಬೆಳಿಗ್ಗೆಯಿಂದ ಬಿತ್ತನೆ ಬೀಜಕ್ಕಾಗಿ<br />ಕಾಯ್ದು ಕುಳಿತ ರೈತರಿಗೆ ಕೃಷಿ ಅಧಿಕಾರಿಗಳು ಸರಿಯಾಗಿ ಸ್ಪಂದಿಸದಿರುವುದಕ್ಕೆ ಆಕ್ರೋಶಗೊಂಡ 100ಕ್ಕೂ ಅಧಿಕ ರೈತರು ಪ್ರತಿಭಟನೆ ಮಾಡಿ ಬೀಜಗಳನ್ನು ವಿತರಿಸುವಂತೆ ಪಟ್ಟು ಹಿಡಿದರು.</p>.<p>ಸ್ಥಳಕ್ಕೆ ಆಗಮಿಸಿದ ಕೃಷಿ ಇಲಾಖೆಯ ಅಧಿಕಾರಿ ಮಹಾಂತೇಶ ಹವಲ್ದಾರ್ ರೈತರನ್ನು ಸಮಧಾನಪಡಿಸಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿ, ನಂತರ ತಾವೇ ಬಿತ್ತನೆ ಬೀಜವನ್ನು ರೈತರಿಗೆ ವಿತರಿಸುವ ವ್ಯವಸ್ಥೆ ಮಾಡಿದರು.</p>.<p>ರಸ್ತೆ ತಡೆ ನಡೆಸಿದ್ದರಿಂದ ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ನಡೆಯಿತು.</p>.<p>ಪ್ರತಿಭಟನೆಯಲ್ಲಿ ರೈತರಾದ ಶರಣಪ್ಪ ಹಳ್ಳಿ ಕುಣಿಕೆಲ್ಲೂರು, ಬಸವರಾಜ ಮಿಂಚೇರಿ, ಮಲ್ಲಣ್ಣ ಖಜಾನೆ, ಮಲ್ಲಣ್ಣ ನೀರಲಕೇರಿ, ಸಿದ್ದಪ್ಪ ಹೂವಿನಬಾವಿ, ಮೌನೇಶ ಮುರಾರಿ, ಖಾಸಿಂ ಮುರಾರಿ ಹಾಗೂ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ: </strong>ಪಟ್ಟಣದ ಕೃಷಿ ಕೇಂದ್ರದಲ್ಲಿ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಸಮಯಕ್ಕೆ ಸರಿಯಾಗಿ ವಿತರಣೆ ಮಾಡುತ್ತಿಲ್ಲವೆಂದು ಆರೋಪಿಸಿ, ರೈತರು ರಾಷ್ಟ್ರೀಯ ಹೆದ್ದಾರಿ (150) ಎ ತಡೆದು ಪ್ರತಿಭಟನೆ ನಡೆಸಿದ ಘಟನೆ ಶನಿವಾರ ಸಂಜೆ ಪಟ್ಟಣದಲ್ಲಿ ನಡೆಯಿತು.</p>.<p>ಲಿಂಗಸುಗೂರು ರಸ್ತೆಯ ಹೊರವಲಯದಲ್ಲಿರುವ ಕೃಷಿ ಕೇಂದ್ರದಲ್ಲಿ ಬೆಳಿಗ್ಗೆಯಿಂದ ರೈತರು ಕಡಲೇ ಬಿತ್ತನೆ ಬೀಜಕ್ಕಾಗಿ ಕಾಯ್ದು ಕುಳಿತ್ತಿದ್ದರು. ಸಂಜೆಯಾದರೂ ಬಿತ್ತನೆ ಬೀಜಗಳನ್ನು ವಿತರಿಸದೆ ಇಲಾಖೆಯ ಸಿಬ್ಬಂದಿ ವಿಳಂಬ ಮಾಡಿದ್ದರಿಂದ ರೊಚ್ಚಿಗೆದ್ದ ರೈತರು ರಾಷ್ಟ್ರೀಯ ಹೆದ್ದಾರಿ 150 (ಎ) ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.</p>.<p>ಟೈರ್ಗಳಿಗೆ ಬೆಂಕಿಹಚ್ಚಿ ಕೃಷಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಹೆದ್ದಾರಿ ಮೇಲೆ ಕೆಲ ಕಾಲ ಸಾರಿಗೆ ಸಂಚಾರ ಅವ್ಯವಸ್ಥೆಯಾಯಿತು.</p>.<p>ಎರಡು ದಿನಗಳಿಂದ ರೈತರಿಗೆ ಶನಿವಾರ ಕಡಲೇ ಬೀಜ ವಿತರಣೆ ಮಾಡುವುದಾಗಿ ಹೇಳಿ ಗ್ರಾಮೀಣ ಭಾಗದ ರೈತರಿಗೆ ಟೊಕನ್ ಕೊಟ್ಟಿದ್ದರು. ಬಿತ್ತನೆ ಬೀಜ ತರುವುದಕ್ಕಾಗಿ ರೈತರು ಹಳ್ಳಿಗಳಿಂದ ಟಾಟ್ ಏಸ್, ಟಾಂಟಾಂ ವಾಹನದಲ್ಲಿ ಬಂದು ಜಮಾಯಿಸಿದ್ದರು. ಬೆಳಿಗ್ಗೆಯಿಂದ ಬಿತ್ತನೆ ಬೀಜಕ್ಕಾಗಿ<br />ಕಾಯ್ದು ಕುಳಿತ ರೈತರಿಗೆ ಕೃಷಿ ಅಧಿಕಾರಿಗಳು ಸರಿಯಾಗಿ ಸ್ಪಂದಿಸದಿರುವುದಕ್ಕೆ ಆಕ್ರೋಶಗೊಂಡ 100ಕ್ಕೂ ಅಧಿಕ ರೈತರು ಪ್ರತಿಭಟನೆ ಮಾಡಿ ಬೀಜಗಳನ್ನು ವಿತರಿಸುವಂತೆ ಪಟ್ಟು ಹಿಡಿದರು.</p>.<p>ಸ್ಥಳಕ್ಕೆ ಆಗಮಿಸಿದ ಕೃಷಿ ಇಲಾಖೆಯ ಅಧಿಕಾರಿ ಮಹಾಂತೇಶ ಹವಲ್ದಾರ್ ರೈತರನ್ನು ಸಮಧಾನಪಡಿಸಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿ, ನಂತರ ತಾವೇ ಬಿತ್ತನೆ ಬೀಜವನ್ನು ರೈತರಿಗೆ ವಿತರಿಸುವ ವ್ಯವಸ್ಥೆ ಮಾಡಿದರು.</p>.<p>ರಸ್ತೆ ತಡೆ ನಡೆಸಿದ್ದರಿಂದ ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ನಡೆಯಿತು.</p>.<p>ಪ್ರತಿಭಟನೆಯಲ್ಲಿ ರೈತರಾದ ಶರಣಪ್ಪ ಹಳ್ಳಿ ಕುಣಿಕೆಲ್ಲೂರು, ಬಸವರಾಜ ಮಿಂಚೇರಿ, ಮಲ್ಲಣ್ಣ ಖಜಾನೆ, ಮಲ್ಲಣ್ಣ ನೀರಲಕೇರಿ, ಸಿದ್ದಪ್ಪ ಹೂವಿನಬಾವಿ, ಮೌನೇಶ ಮುರಾರಿ, ಖಾಸಿಂ ಮುರಾರಿ ಹಾಗೂ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>