<p><strong>ರಾಯಚೂರು:</strong> ‘ರಾಷ್ಟ್ರದ ಸುರಕ್ಷತೆ ಹಾಗೂ ರಕ್ಷಣೆ ವಿಷಯವಾಗಿ ಚರ್ಚಿಸಲು ಸಂಸತ್ ವಿಶೇಷ ಅಧಿವೇಶನ ಕರೆಯಬೇಕು’ ಎಂದು ಸಂಸದ ಜಿ.ಕುಮಾರ ನಾಯಕ ಆಗ್ರಹಿಸಿದ್ದಾರೆ.</p>.<p>‘ಪಹಲ್ಗಾಮ್ನಲ್ಲಿ ನಡೆದ ದಾಳಿ ಮತ್ತು ಆಪರೇಷನ್ ಸಿಂಧೂರದ ಕುರಿತು ಕೇಂದ್ರದ ಸಚಿವರು, ವಿವಿಧ ಪಕ್ಷಗಳ ನಾಯಕ, ಗಣ್ಯರು ಸಾರ್ವಜನಿಕವಾಗಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಆದರೆ, ಸಂಸತ್ತಿನಲ್ಲಿ ಗಂಭೀರವಾಗಿ ಚರ್ಚೆಗೆ ಅವಕಾಶ ಕಲ್ಪಿಸಿಲ್ಲ’ ಎಂದು ಹೇಳಿದ್ದಾರೆ.</p>.<p>‘ಭಾರತದ ಸಂಸತ್ ಕೇವಲ ಇಟ್ಟಿಗೆ ಮತ್ತು ಕಲ್ಲಿನ ಕಟ್ಟಡವಲ್ಲ. ಅದು ನಮ್ಮ ಪ್ರಜಾಪ್ರಭುತ್ವದ ಪವಿತ್ರ ಆಲಯ. 140 ಕೋಟಿ ಭಾರತೀಯರ ಚುನಾಯಿತ ಪ್ರತಿನಿಧಿಗಳ ಕೇಂದ್ರವಾಗಿದೆ. ಇದು ಭಾರತೀಯರ ಧ್ವನಿಯನ್ನು ಪ್ರತಿನಿಧಿಸುವ ಮನೆಯಾಗಿದೆ. ಇದು ಮೂಕವಾಗಬಾರದು’ ಎಂದು ತಿಳಿಸಿದ್ದಾರೆ.</p>.<p>‘ರಾಜ್ಯಕ್ಕೆ ಸ್ಪಷ್ಟತೆ, ಭರವಸೆ ಮತ್ತು ಏಕತೆಯ ಸಂದೇಶ ಬೇಕಾಗಿರುವ ಈ ಸಮಯದಲ್ಲಿ ಸಂಸತ್ತು ಮೌನವಾಗಿರುವುದು ಸರಿಯಲ್ಲ’ ಎಂದು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ರಾಷ್ಟ್ರದ ಸುರಕ್ಷತೆ ಹಾಗೂ ರಕ್ಷಣೆ ವಿಷಯವಾಗಿ ಚರ್ಚಿಸಲು ಸಂಸತ್ ವಿಶೇಷ ಅಧಿವೇಶನ ಕರೆಯಬೇಕು’ ಎಂದು ಸಂಸದ ಜಿ.ಕುಮಾರ ನಾಯಕ ಆಗ್ರಹಿಸಿದ್ದಾರೆ.</p>.<p>‘ಪಹಲ್ಗಾಮ್ನಲ್ಲಿ ನಡೆದ ದಾಳಿ ಮತ್ತು ಆಪರೇಷನ್ ಸಿಂಧೂರದ ಕುರಿತು ಕೇಂದ್ರದ ಸಚಿವರು, ವಿವಿಧ ಪಕ್ಷಗಳ ನಾಯಕ, ಗಣ್ಯರು ಸಾರ್ವಜನಿಕವಾಗಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಆದರೆ, ಸಂಸತ್ತಿನಲ್ಲಿ ಗಂಭೀರವಾಗಿ ಚರ್ಚೆಗೆ ಅವಕಾಶ ಕಲ್ಪಿಸಿಲ್ಲ’ ಎಂದು ಹೇಳಿದ್ದಾರೆ.</p>.<p>‘ಭಾರತದ ಸಂಸತ್ ಕೇವಲ ಇಟ್ಟಿಗೆ ಮತ್ತು ಕಲ್ಲಿನ ಕಟ್ಟಡವಲ್ಲ. ಅದು ನಮ್ಮ ಪ್ರಜಾಪ್ರಭುತ್ವದ ಪವಿತ್ರ ಆಲಯ. 140 ಕೋಟಿ ಭಾರತೀಯರ ಚುನಾಯಿತ ಪ್ರತಿನಿಧಿಗಳ ಕೇಂದ್ರವಾಗಿದೆ. ಇದು ಭಾರತೀಯರ ಧ್ವನಿಯನ್ನು ಪ್ರತಿನಿಧಿಸುವ ಮನೆಯಾಗಿದೆ. ಇದು ಮೂಕವಾಗಬಾರದು’ ಎಂದು ತಿಳಿಸಿದ್ದಾರೆ.</p>.<p>‘ರಾಜ್ಯಕ್ಕೆ ಸ್ಪಷ್ಟತೆ, ಭರವಸೆ ಮತ್ತು ಏಕತೆಯ ಸಂದೇಶ ಬೇಕಾಗಿರುವ ಈ ಸಮಯದಲ್ಲಿ ಸಂಸತ್ತು ಮೌನವಾಗಿರುವುದು ಸರಿಯಲ್ಲ’ ಎಂದು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>