<p><strong>ಲಿಂಗಸುಗೂರು: </strong>‘ಪುರಸಭೆ ವ್ಯಾಪ್ತಿಯ 23 ವಾರ್ಡ್ಗಳಲ್ಲಿ ಕೊಳಗೇರಿ ಪ್ರದೇಶಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಅಂಥ ಪ್ರದೇಶಗಳ ಅಭಿವೃದ್ಧಿ ಮತ್ತು ನಾಗರಿಕರಿಗೆ ಮೂಲ ಸೌಲಭ್ಯ ಒದಗಿಸಲು ಅನುದಾನ ಬಿಡುಗಡೆ ಮಾಡಬೇಕು’ ಎಂದು ಸರ್ವ ಸದಸ್ಯರು ಶಾಸಕ ಡಿ.ಎಸ್ ಹೂಲಗೇರಿಗೆ ಮನವಿ ಮಾಡಿದರು.</p>.<p>ಸೋಮವಾರ ನಗರೋತ್ಥಾನ ಯೋಜನೆ ಕುರಿತು ಪುರಸಭೆ ಮುಖ್ಯಾಧಿಕಾರಿಗಳ ಜತೆಗೆ ಚರ್ಚಿಸಲು ಆಗಮಿಸಿದ್ದ ಶಾಸಕ ಡಿ.ಎಸ್ ಹೂಲಗೇರಿ ಅವರನ್ನು ಖುದ್ದು ಭೇಟಿ ಮಾಡಿದ ಸದಸ್ಯರು, ನಗರೋತ್ಥಾನ ಯೋಜನೆಯಡಿ ತಮ್ಮ ವಾರ್ಡ್ಗಳಲ್ಲಿ ಅಗತ್ಯ ಇರುವ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಪಟ್ಟಣ ಸೇರಿದಂತೆ ಕರಡಕಲ್ಲ, ಕಸಬಾ ಲಿಂಗಸುಗೂರು, ಹುಲಿಗುಡ್ಡ ಹಾಗೂ ಸುತ್ತಮುತ್ತ 300ಕ್ಕೂ ಹೆಚ್ಚು ಹೊಸ ಬಡಾವಣೆಗಳು ತಲೆ ಎತ್ತಿವೆ. ಬಹುತೇಕ ಬಡಾವಣೆಗಳಲ್ಲಿ ರಸ್ತೆ, ಚರಂಡಿ, ವಿದ್ಯುತ್ ಸೇರಿ ಅಗತ್ಯ ಸೌಲಭ್ಯಗಳ ಕೊರತೆ ಇದೆ. ನಾಗರಿಕರು ಪರದಾಡುವಂತಾಗಿದೆ ಎಂದು ಗಮನ ಸೆಳೆಯಲಾಯಿತು.</p>.<p>ಶಾಸಕ ಡಿ.ಎಸ್ ಹೂಲಗೇರಿ ಮಾತನಾಡಿ,‘ನಗ ರೋತ್ಥಾನ ಯೋಜನೆಯಡಿ ₹10 ಕೋಟಿ ಅನುದಾನ ಬಿಡುಗಡೆಯಾಗಿದೆ. ಈ ಯೋಜನೆಯ ನಿಯಮಗಳನ್ನು ಆಧರಿಸಿ ಸಾಮೂಹಿಕವಾಗಿ ಕಾಮಗಾರಿ ಕೈಗೆತ್ತಿಕೊಳ್ಳುವುದು ಉತ್ತಮ. ವಾರ್ಡ್ಗೆ ಹಂಚಿಕೆ ಮಾಡುವುದರಿಂದ ಅಭಿವೃದ್ಧಿ ಆಗುವುದಿಲ್ಲ. ಸದಸ್ಯರು ಸಹಕರಿಸಬೇಕು’ ಎಂದು ಕೋರಿದರು.</p>.<p>ಪುರಸಭೆ ಅಧ್ಯಕ್ಷೆ ಸುನಿತಾ ಕೆಂಭಾವಿ, ಉಪಾಧ್ಯಕ್ಷ ಎಂ.ಡಿ.ರಫಿ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಮೋದ ಕುಲಕರ್ಣಿ, ಮುಖ್ಯಾಧಿಕಾರಿ ನರಸಪ್ಪ ತಹಶೀಲ್ದಾರ್ ಸೇರಿದಂತೆ ಪುರಸಭೆ ಸದಸ್ಯರು, ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು: </strong>‘ಪುರಸಭೆ ವ್ಯಾಪ್ತಿಯ 23 ವಾರ್ಡ್ಗಳಲ್ಲಿ ಕೊಳಗೇರಿ ಪ್ರದೇಶಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಅಂಥ ಪ್ರದೇಶಗಳ ಅಭಿವೃದ್ಧಿ ಮತ್ತು ನಾಗರಿಕರಿಗೆ ಮೂಲ ಸೌಲಭ್ಯ ಒದಗಿಸಲು ಅನುದಾನ ಬಿಡುಗಡೆ ಮಾಡಬೇಕು’ ಎಂದು ಸರ್ವ ಸದಸ್ಯರು ಶಾಸಕ ಡಿ.ಎಸ್ ಹೂಲಗೇರಿಗೆ ಮನವಿ ಮಾಡಿದರು.</p>.<p>ಸೋಮವಾರ ನಗರೋತ್ಥಾನ ಯೋಜನೆ ಕುರಿತು ಪುರಸಭೆ ಮುಖ್ಯಾಧಿಕಾರಿಗಳ ಜತೆಗೆ ಚರ್ಚಿಸಲು ಆಗಮಿಸಿದ್ದ ಶಾಸಕ ಡಿ.ಎಸ್ ಹೂಲಗೇರಿ ಅವರನ್ನು ಖುದ್ದು ಭೇಟಿ ಮಾಡಿದ ಸದಸ್ಯರು, ನಗರೋತ್ಥಾನ ಯೋಜನೆಯಡಿ ತಮ್ಮ ವಾರ್ಡ್ಗಳಲ್ಲಿ ಅಗತ್ಯ ಇರುವ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಪಟ್ಟಣ ಸೇರಿದಂತೆ ಕರಡಕಲ್ಲ, ಕಸಬಾ ಲಿಂಗಸುಗೂರು, ಹುಲಿಗುಡ್ಡ ಹಾಗೂ ಸುತ್ತಮುತ್ತ 300ಕ್ಕೂ ಹೆಚ್ಚು ಹೊಸ ಬಡಾವಣೆಗಳು ತಲೆ ಎತ್ತಿವೆ. ಬಹುತೇಕ ಬಡಾವಣೆಗಳಲ್ಲಿ ರಸ್ತೆ, ಚರಂಡಿ, ವಿದ್ಯುತ್ ಸೇರಿ ಅಗತ್ಯ ಸೌಲಭ್ಯಗಳ ಕೊರತೆ ಇದೆ. ನಾಗರಿಕರು ಪರದಾಡುವಂತಾಗಿದೆ ಎಂದು ಗಮನ ಸೆಳೆಯಲಾಯಿತು.</p>.<p>ಶಾಸಕ ಡಿ.ಎಸ್ ಹೂಲಗೇರಿ ಮಾತನಾಡಿ,‘ನಗ ರೋತ್ಥಾನ ಯೋಜನೆಯಡಿ ₹10 ಕೋಟಿ ಅನುದಾನ ಬಿಡುಗಡೆಯಾಗಿದೆ. ಈ ಯೋಜನೆಯ ನಿಯಮಗಳನ್ನು ಆಧರಿಸಿ ಸಾಮೂಹಿಕವಾಗಿ ಕಾಮಗಾರಿ ಕೈಗೆತ್ತಿಕೊಳ್ಳುವುದು ಉತ್ತಮ. ವಾರ್ಡ್ಗೆ ಹಂಚಿಕೆ ಮಾಡುವುದರಿಂದ ಅಭಿವೃದ್ಧಿ ಆಗುವುದಿಲ್ಲ. ಸದಸ್ಯರು ಸಹಕರಿಸಬೇಕು’ ಎಂದು ಕೋರಿದರು.</p>.<p>ಪುರಸಭೆ ಅಧ್ಯಕ್ಷೆ ಸುನಿತಾ ಕೆಂಭಾವಿ, ಉಪಾಧ್ಯಕ್ಷ ಎಂ.ಡಿ.ರಫಿ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಮೋದ ಕುಲಕರ್ಣಿ, ಮುಖ್ಯಾಧಿಕಾರಿ ನರಸಪ್ಪ ತಹಶೀಲ್ದಾರ್ ಸೇರಿದಂತೆ ಪುರಸಭೆ ಸದಸ್ಯರು, ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>