ಅಕ್ಕಿ, ಜೋಳ, ರಾಗಿ, ಹಾಲು, ಮೊಸರು ಮುಂತಾದ ಆಹಾರ ಪದಾರ್ಥಗಳನ್ನು ಕಾರ್ಮಿಕರು, ಬಡವರು, ಮಧ್ಯಮ ವರ್ಗದವರು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಬಳಸುವ ಅವಶ್ಯಕ ಪದಾರ್ಥಗಳಾಗಿವೆ. ಇವುಗಳ ಮೇಲಿನ ತೆರಿಗೆಯಿಂದ ಜನ ಸಾಮಾನ್ಯರ ಜೀವನ ವೆಚ್ಚ ದುಬಾರಿಯಾಗುತ್ತದೆ. ಈಗಾಗಲೇ ಬೆಲೆ ಏರಿಕೆ, ಹಣ ದುಬ್ಬರಗಳಿಂದ ಜನ ತತ್ತರಿಸಿದ್ದಾರೆ. ಬೆಲೆ ಏರಿಕೆಗೆ ತಕ್ಕಂತೆ ಜನ ಸಾಮಾನ್ಯರ ಆದಾಯ ಹೆಚ್ಚಳವಾಗಿಲ್ಲ. ಇಂಥ ಸಂದರ್ಭದಲ್ಲಿ ತಿನ್ನುವ ಆಹಾರದ ಮೇಲೆ ತೆರಿಗೆ ವಿಧಿಸಿದ ಕೇಂದ್ರ ಸರ್ಕಾರದ ಕ್ರಮ ಖಂಡನೀಯ ಎಂದರು.