<p><strong>ರಾಯಚೂರು</strong>: ಅಪಾಯದ ಅಂಚಿನಲ್ಲಿರುವ ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ತ್ವರಿತವಾಗಿ ಸ್ಥಳಾಂತರ ಮಾಡಬೇಕೆಂದು ಒತ್ತಾಯಿಸಿ ವಿಶ್ವ ಮಾನವ ಹಕ್ಕುಗಳ ಸಂಘದ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಹಲವು ದಶಕಗಳ ಹಿಂದೆ ನಿರ್ಮಾಣವಾದ ಕಟ್ಟಡ ಶಿಥಿಲಗೊಂಡಿದೆ. ಚಾವಣಿ ಬೀಳುವ ಆತಂಕ ಎದುರಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಯಂತ್ರಗಳು ಇಲಾಖೆಯಲ್ಲಿ ಇವೆ. ಇವೆಲ್ಲವನ್ನೂ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಈಗಾಗಲೇ ಮಳೆಗಾಲ ಆರಂಭವಾಗಿದೆ. ದುರಸ್ತಿ ಮಾಡದೇ ಇರುವುದರಿಂದ ಚಾವಣಿ ಸೋರುತ್ತಿದೆ. ಇದರಿಂದ ಸಿಬ್ಬಂದಿ ಆತಂಕದಲ್ಲಿ ಕೆಲಸ ಮಾಡುವ ಪರಿಸ್ಥಿತಿ ಇದೆ. ಕೂಡಲೇ ಜಿಲ್ಲಾಧಿಕಾರಿಗಳು ಹಾಗೂ ಸಂಭಂದಿಪಟ್ಟ ಅಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿದರು.</p>.<p>ವಿಶ್ವ ಮಾನವ ಹಕ್ಕುಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನರಸಪ್ಪ, ಪವನ ಪಾಟೀಲ, ಕೆ. ರಂಗನಾಥ, ಎಂ. ಕೆ. ನರೇಂದ್ರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಅಪಾಯದ ಅಂಚಿನಲ್ಲಿರುವ ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ತ್ವರಿತವಾಗಿ ಸ್ಥಳಾಂತರ ಮಾಡಬೇಕೆಂದು ಒತ್ತಾಯಿಸಿ ವಿಶ್ವ ಮಾನವ ಹಕ್ಕುಗಳ ಸಂಘದ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಹಲವು ದಶಕಗಳ ಹಿಂದೆ ನಿರ್ಮಾಣವಾದ ಕಟ್ಟಡ ಶಿಥಿಲಗೊಂಡಿದೆ. ಚಾವಣಿ ಬೀಳುವ ಆತಂಕ ಎದುರಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಯಂತ್ರಗಳು ಇಲಾಖೆಯಲ್ಲಿ ಇವೆ. ಇವೆಲ್ಲವನ್ನೂ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಈಗಾಗಲೇ ಮಳೆಗಾಲ ಆರಂಭವಾಗಿದೆ. ದುರಸ್ತಿ ಮಾಡದೇ ಇರುವುದರಿಂದ ಚಾವಣಿ ಸೋರುತ್ತಿದೆ. ಇದರಿಂದ ಸಿಬ್ಬಂದಿ ಆತಂಕದಲ್ಲಿ ಕೆಲಸ ಮಾಡುವ ಪರಿಸ್ಥಿತಿ ಇದೆ. ಕೂಡಲೇ ಜಿಲ್ಲಾಧಿಕಾರಿಗಳು ಹಾಗೂ ಸಂಭಂದಿಪಟ್ಟ ಅಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿದರು.</p>.<p>ವಿಶ್ವ ಮಾನವ ಹಕ್ಕುಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನರಸಪ್ಪ, ಪವನ ಪಾಟೀಲ, ಕೆ. ರಂಗನಾಥ, ಎಂ. ಕೆ. ನರೇಂದ್ರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>