<p><strong>ಮಾನ್ವಿ:</strong> ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ದಲಿತಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಪಟ್ಟಣದಲ್ಲಿ ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.</p>.<p>ಜವಾಬ್ದಾರಿಯುತ ಸ್ಥಾನದಲ್ಲಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದು ಹೇಳಿಕೆ ನೀಡುವ ಮೂಲಕ ಸಂವಿಧಾನ ವಿರೋಧಿ ನೀತಿಯನ್ನು ಅನುಸರಿಸಿದ್ದಾರೆ. ಸರ್ಕಾರದ ಘನತೆ ಗೌರವಕ್ಕೆ ಧಕ್ಕೆ ಬರುವಂತೆ ಹೇಳಿಕೆ ನೀಡಿರುವುದು ಖಂಡನೀಯ ಎಂದು ಒಕ್ಕೂಟದ ಮುಖಂಡರು ದೂರಿದರು. </p>.<p>ಡಿ.ಕೆ.ಶಿವಕುಮಾರ್ ಅವರನ್ನು ಉಪ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಲು ಸೂಚಿಸಬೇಕು ಎಂದು ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಒತ್ತಾಯಿಸಲಾಯಿತು.<br /><br />ಒಕ್ಕೂಟದ ಮುಖಂಡರಾದ ಬಸವರಾಜ ನಕ್ಕುಂದಿ, ಪರಶುರಾಮ ಬಾಗಲವಾಡ, ಚಂದ್ರು ಜಾನೇಕಲ್, ಯಲ್ಲಪ್ಪ ಬಾದರದಿನ್ನಿ, ಚಂದ್ರು ನಾಯಕ ಮಾನ್ವಿ, ವೆಂಕಟೇಶ.ಕೆ., ಪಿ.ರವಿಕುಮಾರ, ಜಗದೀಶ ಕುರ್ಡಿ, ಶಾಂತಪ್ಪ ಮುಷ್ಟೂರು, ಸಿದ್ದಪ್ಪ ಅಮರಾವತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ:</strong> ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ದಲಿತಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಪಟ್ಟಣದಲ್ಲಿ ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.</p>.<p>ಜವಾಬ್ದಾರಿಯುತ ಸ್ಥಾನದಲ್ಲಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದು ಹೇಳಿಕೆ ನೀಡುವ ಮೂಲಕ ಸಂವಿಧಾನ ವಿರೋಧಿ ನೀತಿಯನ್ನು ಅನುಸರಿಸಿದ್ದಾರೆ. ಸರ್ಕಾರದ ಘನತೆ ಗೌರವಕ್ಕೆ ಧಕ್ಕೆ ಬರುವಂತೆ ಹೇಳಿಕೆ ನೀಡಿರುವುದು ಖಂಡನೀಯ ಎಂದು ಒಕ್ಕೂಟದ ಮುಖಂಡರು ದೂರಿದರು. </p>.<p>ಡಿ.ಕೆ.ಶಿವಕುಮಾರ್ ಅವರನ್ನು ಉಪ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಲು ಸೂಚಿಸಬೇಕು ಎಂದು ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಒತ್ತಾಯಿಸಲಾಯಿತು.<br /><br />ಒಕ್ಕೂಟದ ಮುಖಂಡರಾದ ಬಸವರಾಜ ನಕ್ಕುಂದಿ, ಪರಶುರಾಮ ಬಾಗಲವಾಡ, ಚಂದ್ರು ಜಾನೇಕಲ್, ಯಲ್ಲಪ್ಪ ಬಾದರದಿನ್ನಿ, ಚಂದ್ರು ನಾಯಕ ಮಾನ್ವಿ, ವೆಂಕಟೇಶ.ಕೆ., ಪಿ.ರವಿಕುಮಾರ, ಜಗದೀಶ ಕುರ್ಡಿ, ಶಾಂತಪ್ಪ ಮುಷ್ಟೂರು, ಸಿದ್ದಪ್ಪ ಅಮರಾವತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>