<p><strong>ರಾಯಚೂರು</strong>: ಮಸಣ ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮಸಣ ಕಾರ್ಮಿಕರು ಗುರುವಾರ ತಾಲ್ಲೂಕಿನ ಯಾಪಲದಿನ್ನಿ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು.<br><br> ಪಂಚಾಯಿತಿ ಪಿಡಿಒ ದತ್ತು ಅವರು ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತನಾಡಿ, ‘ಮಸಣ ಕಾರ್ಮಿಕರಿಗೆ ಕುಣಿ ತೆಗೆಯಲು ಹಾಗೂ ಮುಚ್ಚಲಿಕ್ಕೆ ಬೇಕಾದ ಅಗತ್ಯ ಸಲಕರಣೆಗಳು ಹಾಗೂ ದೃಢೀಕರಣ ಪತ್ರವನ್ನು ಗ್ರಾಮ ಸಭೆಯಲ್ಲಿ ತಿರ್ಮಾನಿಸಿ ಕೊಡಲಾಗುವುದು’ ಎಂದು ಭರವಸೆ ನೀಡಿದರು. <br><br> ವಡ್ಡೆಪಲ್ಲಿ ಮತ್ತು ನಾಗನದೂಡ್ಡಿ ಗ್ರಾಮಗಳಲ್ಲಿ ಸಶ್ಮಾನ ಭೂಮಿ ಮಂಜೂರು ಮಾಡುವಂತೆ ತಹಶೀಲ್ದಾರ್ ಕಚೇರಿಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.<br><br> ಕೆ.ಜಿ.ವೀರೇಶ, ಚಂದ್ರಪ್ಪ, ಶ್ರೀನಿವಾಸ, ನರಸಪ್ಪ, ದಸ್ತಗರಿ, ಮಲ್ಲಿಕಾರ್ಜುನ, ಜರ್ನಾಧನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಮಸಣ ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮಸಣ ಕಾರ್ಮಿಕರು ಗುರುವಾರ ತಾಲ್ಲೂಕಿನ ಯಾಪಲದಿನ್ನಿ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು.<br><br> ಪಂಚಾಯಿತಿ ಪಿಡಿಒ ದತ್ತು ಅವರು ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತನಾಡಿ, ‘ಮಸಣ ಕಾರ್ಮಿಕರಿಗೆ ಕುಣಿ ತೆಗೆಯಲು ಹಾಗೂ ಮುಚ್ಚಲಿಕ್ಕೆ ಬೇಕಾದ ಅಗತ್ಯ ಸಲಕರಣೆಗಳು ಹಾಗೂ ದೃಢೀಕರಣ ಪತ್ರವನ್ನು ಗ್ರಾಮ ಸಭೆಯಲ್ಲಿ ತಿರ್ಮಾನಿಸಿ ಕೊಡಲಾಗುವುದು’ ಎಂದು ಭರವಸೆ ನೀಡಿದರು. <br><br> ವಡ್ಡೆಪಲ್ಲಿ ಮತ್ತು ನಾಗನದೂಡ್ಡಿ ಗ್ರಾಮಗಳಲ್ಲಿ ಸಶ್ಮಾನ ಭೂಮಿ ಮಂಜೂರು ಮಾಡುವಂತೆ ತಹಶೀಲ್ದಾರ್ ಕಚೇರಿಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.<br><br> ಕೆ.ಜಿ.ವೀರೇಶ, ಚಂದ್ರಪ್ಪ, ಶ್ರೀನಿವಾಸ, ನರಸಪ್ಪ, ದಸ್ತಗರಿ, ಮಲ್ಲಿಕಾರ್ಜುನ, ಜರ್ನಾಧನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>