<p>ಪ್ರಜಾವಾಣಿ ವಾರ್ತೆ</p>.<p><strong>ರಾಯಚೂರು</strong>: ‘ಈಡಿಗ ಸಮಾಜವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಬೇಕು. ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ₹500 ಕೋಟಿ ಅನುದಾನ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜನವರಿ 26ರಿಂದ ಚಿತ್ತಾಪುರದ ಕರದಾಳ ಗ್ರಾಮದಿಂದ ಬೆಂಗಳೂರಿವನರೆಗೂ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ’ ಎಂದು ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ತಿಳಿಸಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಎಲ್ಲಾ ಸಮಾಜಗಳಿಗೂ ಸಾಮಾಜಿಕ ನ್ಯಾಯ ಒದಗಿಸಬೇಕು. ಈಡಿಗ ಸಮಾಜಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಅನ್ಯಾಯ ಮಾಡಿವೆ. ಸಚಿವ ಸ್ಥಾನ ಸೇರಿದಂತೆ ನಿಗಮ ಮಂಡಳಿಗಳ ನೇಮಕಾತಿಯಲ್ಲಿ ತಾರತಮ್ಯ ಮಾಡಿವೆ’ ಎಂದು ಆರೋಪಿಸಿದರು.</p>.<p>‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಮೂರು ವರ್ಷ ಸಮೀಪಿಸಿದರೂ ಈಡಿಗ ಸಮಾಜಕ್ಕೆ ನ್ಯಾಯ ಒದಗಿಸಿಲ್ಲ. ನಿಗಮಕ್ಕೆ ₹10 ಕೋಟಿ ಹೊರತುಪಡಿಸಿ ಬೇರೆ ಅನುದಾನ ನೀಡಿಲ್ಲ. ಸಚಿವ ಸಂಪುಟ ಪುನರ್ ರಚನೆಯಲ್ಲಿ ಬಿ.ಕೆ.ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದರು.</p>.<p>‘ಸೇಂದಿ, ಸಾರಾಯಿ ಮಾರಾಟ ನಿಷೇಧ ಮಾಡಿರುವುದರಿಂದ ಸಿ.ಎಚ್.ಪೌಡರ್ ಹಾವಳಿ ಹೆಚ್ಚಿದೆ. ತೆಲಂಗಾಣ, ಕೇರಳ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಇಂದಿಗೂ ಸೇಂದಿ ಮಾರಾಟ ಮಾಡಲಾಗುತ್ತಿದೆ. ಮದ್ಯ ಮಾರಾಟ ಪರವಾನಗಿಯಲ್ಲಿ ಈಡಿಗ ಸಮಾಜಕ್ಕೆ ಮೀಸಲಾತಿ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ಪಾದಯಾತ್ರೆಯಲ್ಲಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು’ ಎಂದು ಆಗ್ರಹಿಸಿದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಜಿ.ಶ್ರೀನಾಥ ಮಾತನಾಡಿದರು.</p>.<p>ಮುಖಂಡರಾದ ಭೀಮನಗೌಡ, ಅಶೋಕ ಸಿರವಾರ, ಮಹೇಶ ಗೌಡ, ಸತ್ಯನಾರಾಯಣ ಗೌಡ ಹಾಗೂ ಸುರೇಶಗೌಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ರಾಯಚೂರು</strong>: ‘ಈಡಿಗ ಸಮಾಜವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಬೇಕು. ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ₹500 ಕೋಟಿ ಅನುದಾನ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜನವರಿ 26ರಿಂದ ಚಿತ್ತಾಪುರದ ಕರದಾಳ ಗ್ರಾಮದಿಂದ ಬೆಂಗಳೂರಿವನರೆಗೂ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ’ ಎಂದು ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ತಿಳಿಸಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಎಲ್ಲಾ ಸಮಾಜಗಳಿಗೂ ಸಾಮಾಜಿಕ ನ್ಯಾಯ ಒದಗಿಸಬೇಕು. ಈಡಿಗ ಸಮಾಜಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಅನ್ಯಾಯ ಮಾಡಿವೆ. ಸಚಿವ ಸ್ಥಾನ ಸೇರಿದಂತೆ ನಿಗಮ ಮಂಡಳಿಗಳ ನೇಮಕಾತಿಯಲ್ಲಿ ತಾರತಮ್ಯ ಮಾಡಿವೆ’ ಎಂದು ಆರೋಪಿಸಿದರು.</p>.<p>‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಮೂರು ವರ್ಷ ಸಮೀಪಿಸಿದರೂ ಈಡಿಗ ಸಮಾಜಕ್ಕೆ ನ್ಯಾಯ ಒದಗಿಸಿಲ್ಲ. ನಿಗಮಕ್ಕೆ ₹10 ಕೋಟಿ ಹೊರತುಪಡಿಸಿ ಬೇರೆ ಅನುದಾನ ನೀಡಿಲ್ಲ. ಸಚಿವ ಸಂಪುಟ ಪುನರ್ ರಚನೆಯಲ್ಲಿ ಬಿ.ಕೆ.ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದರು.</p>.<p>‘ಸೇಂದಿ, ಸಾರಾಯಿ ಮಾರಾಟ ನಿಷೇಧ ಮಾಡಿರುವುದರಿಂದ ಸಿ.ಎಚ್.ಪೌಡರ್ ಹಾವಳಿ ಹೆಚ್ಚಿದೆ. ತೆಲಂಗಾಣ, ಕೇರಳ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಇಂದಿಗೂ ಸೇಂದಿ ಮಾರಾಟ ಮಾಡಲಾಗುತ್ತಿದೆ. ಮದ್ಯ ಮಾರಾಟ ಪರವಾನಗಿಯಲ್ಲಿ ಈಡಿಗ ಸಮಾಜಕ್ಕೆ ಮೀಸಲಾತಿ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ಪಾದಯಾತ್ರೆಯಲ್ಲಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು’ ಎಂದು ಆಗ್ರಹಿಸಿದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಜಿ.ಶ್ರೀನಾಥ ಮಾತನಾಡಿದರು.</p>.<p>ಮುಖಂಡರಾದ ಭೀಮನಗೌಡ, ಅಶೋಕ ಸಿರವಾರ, ಮಹೇಶ ಗೌಡ, ಸತ್ಯನಾರಾಯಣ ಗೌಡ ಹಾಗೂ ಸುರೇಶಗೌಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>