<p><strong>ಜಾಲಹಳ್ಳಿ:</strong> ನರೇಗಾ ಯೋಜನೆ ಅಡಿ ದುಡಿಯುತ್ತಿರುವ ಕೂಲಿಕಾರರಿಗೆ ಕನಿಷ್ಟ ₹ 600 ಕೂಲಿ ನೀಡಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆಯ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ ಹೊಸಕೇರ ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ರಾಜ್ಯದಲ್ಲಿ ಬರಗಾಲ ಇರುವುದರಿಂದ ಗ್ರಾಮೀಣ ಭಾಗದ ಕೃಷಿ ಕೂಲಿಕಾರರಿಗೆ ಜೀವನ ಸಾಗಿಸುವುದು ತುಂಬಾ ಕಷ್ಟವಾಗಿದೆ. ಅರ್ಥಿಕ ತೊಂದರೆ ನಿವಾರಣೆಗೆ ಸರ್ಕಾರ ನರೇಗಾ ಯೋಜನೆಯಡಿ ಒಂದು ಕುಟುಂಬಕ್ಕೆ ಕನಿಷ್ಟ 200 ಮಾನವ ದಿನ ಕೆಲಸ ಹಾಗೂ ₹600 ಕೂಲಿ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಈ ಹಿಂದೆ 2005 ರಲ್ಲಿ ನರೇಗಾ ಯೋಜನೆ ಪ್ರಾರಂಭಿಸಿದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ₹70 ಸಾವಿರ ಕೋಟಿ ಅನುದಾನ ಮೀಸಲಿಟ್ಟು, ಪ್ರತಿ ದಿನಕ್ಕೆ ₹ 62 ಕೂಲಿ ನೀಡಲಾಗುತ್ತಿತ್ತು. ಶೇ 90 ರಷ್ಟು ಅನುದಾನ ಕೂಲಿಗಾಗಿಯೇ ಬಳಕೆ ಮಾಡಲಾಗುತ್ತಿತ್ತು. ಅದರೆ, ಪ್ರಸಕ್ತ ವರ್ಷ ನರೇಗಾ ಯೋಜನೆಗೆ ₹60 ಸಾವಿರ ಕೋಟಿ ಮೀಸಲಿಟ್ಟು, ದಿನಕ್ಕೆ ₹316 ಕೂಲಿ ನೀಡಲಾಗುತ್ತಿದೆ. ಕೂಲಿಕಾರರ ಸಂಖ್ಯೆ ಕೂಡ ಹೆಚ್ಚಾಗಿದೆ. ಕೂಲಿಗಾಗಿ ಅನುದಾನದ ಶೇ 60 ರಷ್ಟನ್ನು ಮಾತ್ರ ಬಳಕೆ ಮಾಡಿಕೊಳ್ಳಬೇಕು ಎಂದರು.</p>.<p>ಕೂಲಿಕಾರರಿಗೆ ಕನಿಷ್ಟ 2 ಎಕರೆ ಸರ್ಕಾರಿ ಜಮೀನನ್ನು ಕೃಷಿಗಾಗಿ ಹಂಚಿಕೆ ಮಾಡಬೇಕು. ರೈತರಿಗೆ ಅನುಕೂಲವಾಗಿರುವ ಎಂ.ಎಸ್ ಸ್ವಾಮಿನಾಥನ್ ವರದಿ ಜಾರಿ ಮಾಡಬೇಕು. ವಿದ್ಯುತ್ ಕಾಯ್ದೆಯನ್ನು ವಾಪಸ್ ಪಡೆಯಬೇಕು. ಕಾರ್ಮಿಕರಿಗೆ ಕನಿಷ್ಟ ₹31,000 ವೇತನ ಕೊಡಬೇಕು ಎಂದು ಒತ್ತಾಯಿಸಿ ಮುಂದಿನ ತಿಂಗಳು ನವೆಂಬರ್ 26ರಿಂದ 28 ರವರೆಗೆ ಬೆಂಗಳೂರಿನಲ್ಲಿರುವ ರಾಜಭವನದ ಮುಂದೆ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ರಕ್ಷಣೆ ಮಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಉತ್ತರ ಭಾರತದಲ್ಲಿ ದಲಿತರ ಮೇಲೆ ನಿರಂತರವಾಗಿ ದಬ್ಬಾಳಿಕೆ ಮುಂದುವರಿದಿದೆ. ದಲಿತರಿಗೆ ರಕ್ಷಣೆ ನೀಡಬೇಕು. ಅವರಿಗಾಗಿ ಮೀಸಲಿಟ್ಟ ಅನುದಾನವನ್ನು ಸರಿಯಾಗಿ ಬಳಕೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ರಾಜ್ಯ ಸಮಿತಿ ಉಪಾಧ್ಯಕ್ಷ ದಾವಲ್ ಸಾಬ್, ಮುಖಂಡರಾದ ಕರಿಯಪ್ಪ ಅಚ್ಚೋಳ್ಳಿ, ಸಂಗಮೇಶ ಮೂಲಿಮನಿ, ಬಿ.ಲಿಂಗಪ್ಪ ಸಿಂಧನೂರು ಹಾಗೂ ನಿಂಗಣ್ಣ ನಾಯಕ ಮಕಾಶಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಾಲಹಳ್ಳಿ:</strong> ನರೇಗಾ ಯೋಜನೆ ಅಡಿ ದುಡಿಯುತ್ತಿರುವ ಕೂಲಿಕಾರರಿಗೆ ಕನಿಷ್ಟ ₹ 600 ಕೂಲಿ ನೀಡಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆಯ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ ಹೊಸಕೇರ ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ರಾಜ್ಯದಲ್ಲಿ ಬರಗಾಲ ಇರುವುದರಿಂದ ಗ್ರಾಮೀಣ ಭಾಗದ ಕೃಷಿ ಕೂಲಿಕಾರರಿಗೆ ಜೀವನ ಸಾಗಿಸುವುದು ತುಂಬಾ ಕಷ್ಟವಾಗಿದೆ. ಅರ್ಥಿಕ ತೊಂದರೆ ನಿವಾರಣೆಗೆ ಸರ್ಕಾರ ನರೇಗಾ ಯೋಜನೆಯಡಿ ಒಂದು ಕುಟುಂಬಕ್ಕೆ ಕನಿಷ್ಟ 200 ಮಾನವ ದಿನ ಕೆಲಸ ಹಾಗೂ ₹600 ಕೂಲಿ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಈ ಹಿಂದೆ 2005 ರಲ್ಲಿ ನರೇಗಾ ಯೋಜನೆ ಪ್ರಾರಂಭಿಸಿದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ₹70 ಸಾವಿರ ಕೋಟಿ ಅನುದಾನ ಮೀಸಲಿಟ್ಟು, ಪ್ರತಿ ದಿನಕ್ಕೆ ₹ 62 ಕೂಲಿ ನೀಡಲಾಗುತ್ತಿತ್ತು. ಶೇ 90 ರಷ್ಟು ಅನುದಾನ ಕೂಲಿಗಾಗಿಯೇ ಬಳಕೆ ಮಾಡಲಾಗುತ್ತಿತ್ತು. ಅದರೆ, ಪ್ರಸಕ್ತ ವರ್ಷ ನರೇಗಾ ಯೋಜನೆಗೆ ₹60 ಸಾವಿರ ಕೋಟಿ ಮೀಸಲಿಟ್ಟು, ದಿನಕ್ಕೆ ₹316 ಕೂಲಿ ನೀಡಲಾಗುತ್ತಿದೆ. ಕೂಲಿಕಾರರ ಸಂಖ್ಯೆ ಕೂಡ ಹೆಚ್ಚಾಗಿದೆ. ಕೂಲಿಗಾಗಿ ಅನುದಾನದ ಶೇ 60 ರಷ್ಟನ್ನು ಮಾತ್ರ ಬಳಕೆ ಮಾಡಿಕೊಳ್ಳಬೇಕು ಎಂದರು.</p>.<p>ಕೂಲಿಕಾರರಿಗೆ ಕನಿಷ್ಟ 2 ಎಕರೆ ಸರ್ಕಾರಿ ಜಮೀನನ್ನು ಕೃಷಿಗಾಗಿ ಹಂಚಿಕೆ ಮಾಡಬೇಕು. ರೈತರಿಗೆ ಅನುಕೂಲವಾಗಿರುವ ಎಂ.ಎಸ್ ಸ್ವಾಮಿನಾಥನ್ ವರದಿ ಜಾರಿ ಮಾಡಬೇಕು. ವಿದ್ಯುತ್ ಕಾಯ್ದೆಯನ್ನು ವಾಪಸ್ ಪಡೆಯಬೇಕು. ಕಾರ್ಮಿಕರಿಗೆ ಕನಿಷ್ಟ ₹31,000 ವೇತನ ಕೊಡಬೇಕು ಎಂದು ಒತ್ತಾಯಿಸಿ ಮುಂದಿನ ತಿಂಗಳು ನವೆಂಬರ್ 26ರಿಂದ 28 ರವರೆಗೆ ಬೆಂಗಳೂರಿನಲ್ಲಿರುವ ರಾಜಭವನದ ಮುಂದೆ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ರಕ್ಷಣೆ ಮಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಉತ್ತರ ಭಾರತದಲ್ಲಿ ದಲಿತರ ಮೇಲೆ ನಿರಂತರವಾಗಿ ದಬ್ಬಾಳಿಕೆ ಮುಂದುವರಿದಿದೆ. ದಲಿತರಿಗೆ ರಕ್ಷಣೆ ನೀಡಬೇಕು. ಅವರಿಗಾಗಿ ಮೀಸಲಿಟ್ಟ ಅನುದಾನವನ್ನು ಸರಿಯಾಗಿ ಬಳಕೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ರಾಜ್ಯ ಸಮಿತಿ ಉಪಾಧ್ಯಕ್ಷ ದಾವಲ್ ಸಾಬ್, ಮುಖಂಡರಾದ ಕರಿಯಪ್ಪ ಅಚ್ಚೋಳ್ಳಿ, ಸಂಗಮೇಶ ಮೂಲಿಮನಿ, ಬಿ.ಲಿಂಗಪ್ಪ ಸಿಂಧನೂರು ಹಾಗೂ ನಿಂಗಣ್ಣ ನಾಯಕ ಮಕಾಶಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>