<p><strong>ಮಾನ್ವಿ: </strong>ತಾಲ್ಲೂಕಿನಲ್ಲಿ ಯೂರಿಯಾ ರಸಗೊಬ್ಬರದ ಕೊರತೆ ಹಾಗೂ ಅಧಿಕಾರಿಗಳ ವೈಫಲ್ಯ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಶುಕ್ರವಾರ ಪಟ್ಟಣದ ಕೃಷಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿದೆ. ತಾಲ್ಲೂಕಿನಲ್ಲಿ ಭತ್ತ, ಹತ್ತಿ, ಸೂರ್ಯಕಾಂತಿ, ತೊಗರಿ, ಸಜ್ಜೆ ಬೆಳೆ ಚೆನ್ನಾಗಿ ಬೆಳೆಯಲಾಗಿದೆ. ಆದರೆ ಬೆಳೆಗಳ ಬೆಳವಣಿಗೆಗೆ ಸಹಕಾರಿಯಾಗುವ ಯೂರಿಯಾ ಕೊರತೆಯಿಂದ ರೈತರು ಆತಂಕ ಅನುಭವಿಸುವಂತಾಗಿದೆ ಎಂದು ಪ್ರತಿಭಟನಾನಿರತ ರೈತರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿಗೆ 20ಸಾವಿರ ಟನ್ ಯೂರಿಯಾ ಬೇಡಿಕೆ ಇದೆ. ಆದರೆ ಕೇವಲ 7 ಸಾವಿರ ಟನ್ ಮಾತ್ರ ಪೂರೈಸಲಾಗಿದೆ. ಕಾರಣ ರೈತ ಸಂಪರ್ಕ ಕೇಂದ್ರಗಳಲ್ಲಿ ಔಷಧಿಗಳ ಕೊರತೆ ಇದೆ. ವರ್ತಕರು ದುಬಾರಿ ದರಕ್ಕೆ ಯೂರಿಯಾ ಹಾಗೂ ಇತರ ಔಷಧಿಗಳನ್ನು ಮಾರಾಟ ಮಾಡುವ ಮೂಲಕ ರೈತರನ್ನು ವಂಚಿಸುತ್ತಿದ್ದಾರೆ ಎಂದು ರೈತ ಸಂಘದ ಮುಖಂಡರು ದೂರಿದರು.</p>.<p>ಸರ್ಕಾರ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ತಕ್ಷಣ ಅಗತ್ಯ ಪ್ರಮಾಣದ ಯೂರಿಯಾ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಔಷಧಿ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಸಜ್ಜೆ ಹಾಗೂ ಹತ್ತಿ ಖರೀದಿ ಕೇಂದ್ರ ಆರಂಭಿಸಬೇಕು.</p>.<p>ತಾಲ್ಲೂಕಿಗೆ 10ಸಾವಿರ ಟನ್ ಯೂರಿಯಾ ಸರಬರಾಜು ಮಾಡಬೇಕು. 2020-21ನೇ ಸಾಲಿನ ಕೃಷಿ ಉಪಕರಣಗಳ ಸಹಾಯ ಧನ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.</p>.<p>ಸಹಾಯಕ ಕೃಷಿ ನಿರ್ದೇಶಕ ಹುಸೇನ ಸಾಹೇಬ್ ಮಾತನಾಡಿ, ‘ಮುಂದಿನ ಬುಧವಾರದ ಒಳಗೆ ತಾಲ್ಲೂಕಿಗೆ ಅಗತ್ಯವಿರುವ ಪ್ರಮಾಣದ ಯೂರಿಯಾ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<p>ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ವೈ.ಬಸವರಾಜ ನಾಯಕ, ಮುಖಂಡರಾದ ಶರಣಪ್ಪ ಮರಳಿ, ತಿಮ್ಮಣ್ಣ ಭೋವಿ, ಅಚ್ಯುತರಾಯ ಉದ್ಬಾಳ, ಸಿ.ಎಚ್.ರವಿಕುಮಾರ, ಉಮಾದೇವಿ ನಾಯಕ, ರಾಜಾ ಸಾಬ್, ಶಿವರಾಜ ಮಾಲಿಪಾಟೀಲ್, ಶಿವಕುಮಾರ ಸ್ವಾಮಿ, ಮಲ್ಲಿಕಾರ್ಜುನರೆಡ್ಡಿ, ಕೃಷ್ಣ, ವೀರೇಶನಾಯಕ, ಶಿವಪುತ್ರಪ್ಪ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ: </strong>ತಾಲ್ಲೂಕಿನಲ್ಲಿ ಯೂರಿಯಾ ರಸಗೊಬ್ಬರದ ಕೊರತೆ ಹಾಗೂ ಅಧಿಕಾರಿಗಳ ವೈಫಲ್ಯ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಶುಕ್ರವಾರ ಪಟ್ಟಣದ ಕೃಷಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿದೆ. ತಾಲ್ಲೂಕಿನಲ್ಲಿ ಭತ್ತ, ಹತ್ತಿ, ಸೂರ್ಯಕಾಂತಿ, ತೊಗರಿ, ಸಜ್ಜೆ ಬೆಳೆ ಚೆನ್ನಾಗಿ ಬೆಳೆಯಲಾಗಿದೆ. ಆದರೆ ಬೆಳೆಗಳ ಬೆಳವಣಿಗೆಗೆ ಸಹಕಾರಿಯಾಗುವ ಯೂರಿಯಾ ಕೊರತೆಯಿಂದ ರೈತರು ಆತಂಕ ಅನುಭವಿಸುವಂತಾಗಿದೆ ಎಂದು ಪ್ರತಿಭಟನಾನಿರತ ರೈತರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿಗೆ 20ಸಾವಿರ ಟನ್ ಯೂರಿಯಾ ಬೇಡಿಕೆ ಇದೆ. ಆದರೆ ಕೇವಲ 7 ಸಾವಿರ ಟನ್ ಮಾತ್ರ ಪೂರೈಸಲಾಗಿದೆ. ಕಾರಣ ರೈತ ಸಂಪರ್ಕ ಕೇಂದ್ರಗಳಲ್ಲಿ ಔಷಧಿಗಳ ಕೊರತೆ ಇದೆ. ವರ್ತಕರು ದುಬಾರಿ ದರಕ್ಕೆ ಯೂರಿಯಾ ಹಾಗೂ ಇತರ ಔಷಧಿಗಳನ್ನು ಮಾರಾಟ ಮಾಡುವ ಮೂಲಕ ರೈತರನ್ನು ವಂಚಿಸುತ್ತಿದ್ದಾರೆ ಎಂದು ರೈತ ಸಂಘದ ಮುಖಂಡರು ದೂರಿದರು.</p>.<p>ಸರ್ಕಾರ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ತಕ್ಷಣ ಅಗತ್ಯ ಪ್ರಮಾಣದ ಯೂರಿಯಾ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಔಷಧಿ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಸಜ್ಜೆ ಹಾಗೂ ಹತ್ತಿ ಖರೀದಿ ಕೇಂದ್ರ ಆರಂಭಿಸಬೇಕು.</p>.<p>ತಾಲ್ಲೂಕಿಗೆ 10ಸಾವಿರ ಟನ್ ಯೂರಿಯಾ ಸರಬರಾಜು ಮಾಡಬೇಕು. 2020-21ನೇ ಸಾಲಿನ ಕೃಷಿ ಉಪಕರಣಗಳ ಸಹಾಯ ಧನ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.</p>.<p>ಸಹಾಯಕ ಕೃಷಿ ನಿರ್ದೇಶಕ ಹುಸೇನ ಸಾಹೇಬ್ ಮಾತನಾಡಿ, ‘ಮುಂದಿನ ಬುಧವಾರದ ಒಳಗೆ ತಾಲ್ಲೂಕಿಗೆ ಅಗತ್ಯವಿರುವ ಪ್ರಮಾಣದ ಯೂರಿಯಾ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<p>ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ವೈ.ಬಸವರಾಜ ನಾಯಕ, ಮುಖಂಡರಾದ ಶರಣಪ್ಪ ಮರಳಿ, ತಿಮ್ಮಣ್ಣ ಭೋವಿ, ಅಚ್ಯುತರಾಯ ಉದ್ಬಾಳ, ಸಿ.ಎಚ್.ರವಿಕುಮಾರ, ಉಮಾದೇವಿ ನಾಯಕ, ರಾಜಾ ಸಾಬ್, ಶಿವರಾಜ ಮಾಲಿಪಾಟೀಲ್, ಶಿವಕುಮಾರ ಸ್ವಾಮಿ, ಮಲ್ಲಿಕಾರ್ಜುನರೆಡ್ಡಿ, ಕೃಷ್ಣ, ವೀರೇಶನಾಯಕ, ಶಿವಪುತ್ರಪ್ಪ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>