ಹಟ್ಟಿ ಚಿನ್ನದ ಗಣಿ: ಪಟ್ಟಣದ ವಿಜಯನಗರ ಬಳಿ ಇರುವ ಕೊಂಡವಾಡ ಸ್ಧಳದಲ್ಲಿ ರೈತ ಭವನ ನಿರ್ಮಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಹಟ್ಟಿ ಘಟಕದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಕೊಂಡವಾಡ ಸ್ಥಳವನ್ನು ಬೇರೆಯವರು ಅತಿಕ್ರಮಣ ಮಾಡಿಕೊಳ್ಳುತ್ತಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಆ ಸ್ಧಳದಲ್ಲಿ ರೈತ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಮನವಿಯನ್ನು ನಿರ್ಲಕ್ಷ್ಯ ಮಾಡಿದರೆ ಪಟ್ಟಣ ಪಂಚಾಯಿತಿ ಮುತ್ತಿಗೆ ಹಾಕಿ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಮನವಿ ಪತ್ರದ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಭರವಸೆ: ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಮ್ಮ ಜೇರಬಂಡಿ ಅವರು, ಸ್ಧಳಕ್ಕೆ ಆಗಮಿಸಿ ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಅವರು, ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾಹಿತಿ ಪಡೆದು ರೈತ ಭವನ ನಿರ್ಮಾಣಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದೆರು.
ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ವೀರನಗೌಡ ಆನ್ವರಿ, ಹಟ್ಟಿ ಘಟಕದ ಅಧ್ಯಕ್ಷ ನಿಂಗಪ್ಪ ನಾಯಕ ಗೌಡನಭಾವಿ, ಮಾಳಿಂಗರಾಯ, ಷಣ್ಣುಖಯ್ಯ, ಸ್ವಾಮಿ, ಬಾಗನಗೌಡ, ಮಂಜುನಾಥ, ರಮೇಶ, ಹನುಮಂತ ನಾಯಕ, ಬಾಗಪ್ಪ, ರಮೇಶ ಜಾಗೀರದಾರ ಸೇರಿದಂತೆ ಇತರರು ಇದ್ದರು.