<p><strong>ಸಿಂಧನೂರು: </strong>ಲಾಕ್ಡೌನ್ನಿಂದಾಗಿ ದೇವದಾಸಿಯರು ಆರ್ಥಿಕ ಸಂಕಷ್ಟಕ್ಕೆ ತ್ತುತ್ತಾಗಿದ್ದು, ಎಲ್ಲರಿಗೂ ಸರ್ಕಾರವು ಮಾಸಿಕ ₹ 7,500 ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ತಾಲ್ಲೂಕು ಘಟಕ ಮಂಗಳವಾರ ಶಿರಸ್ತೇದಾರ್ ಅಂಬಾದಾಸ್ಗೆ ಮನವಿ ಸಲ್ಲಿಸಿತು.</p>.<p>ಲಾಕ್ಡೌನ್ ವೇಳೆಯಲ್ಲಿ ದೇವದಾಸಿಯರಿಗೆ ಪಡಿತರ ನೀಡಿದೊಂದು ಬಿಟ್ಟರೆ ಮತ್ಯಾವ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸಿಲ್ಲ ಎಂದರು.</p>.<p>ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾರಿಗೆ ತಂದು ಭೂಮಾಲೀಕ ಮತ್ತು ಕಾರ್ಪೋರೇಟ್ ಕಂಪನಿಗಳ ಗುಲಾಮಿತನಕ್ಕೆ ತಳ್ಳಲಿದೆ. ಭೂಸುಧಾರಣಾ ತಿದ್ದುಪಡಿ ಕಾಯ್ದೆ ಮೂಲಕ ಸಿಗಬೇಕಾದ ಜಮೀನುಗಳನ್ನು ಸಿಗದಂತೆ ಮಾಡಲಾಗುತ್ತಿದೆ ಎಂದು ದೂರಿದರು.</p>.<p>ಜನವಿರೋಧಿ ತಿದ್ದುಪಡಿಗಳನ್ನು ವಾಪಾಸ್ ಪಡೆಯಬೇಕು ಮತ್ತು ಸಾರ್ವಜನಿಕ ರಂಗದ ಕೈಗಾರಿಕೆಗಳ ಖಾಸಗೀಕರಣ ನಿಲ್ಲಿಸಬೇಕೆಂದು ಗೌರವಾಧ್ಯಕ್ಷ ನರಸಿಂಹಪ್ಪ ಆಗ್ರಹಿಸಿದರು.</p>.<p>ಪ್ರತಿ ಕುಟುಂಬದ ತಲಾ ಸದಸ್ಯರಿಗೆ ಮಾಸಿಕ ಕನಿಷ್ಠ 10 ಕೆ.ಜಿ ಸಮಗ್ರ ಆಹಾರ ಮತ್ತು ಆರೋಗ್ಯ ಸಾಮಗ್ರಿಗಳ ಕಿಟ್ ಒದಗಿಸಬೇಕು. ಗ್ರಾಮೀಣ ಪ್ರದೇಶದ ಎಲ್ಲಾ ನಾಗರಿಕರ ಉಚಿತ ಆರೋಗ್ಯ ತಪಾಸಣೆಗೆ ಸಾರ್ವಜನಿಕ ಆರೋಗ್ಯ ಇಲಾಖೆಯ ಮೂಲಕ ಕ್ರಮವಹಿಸಬೇಕು.</p>.<p>ಉದ್ಯೋಗ ಖಾತ್ರಿ ಕೂಲಿಯನ್ನು ₹ 600 ಗಳಿಗೆ ಹೆಚ್ಚಿಸಿ, ನಗರ ಪ್ರದೇಶದ ಜನರಿಗೂ ಉದ್ಯೋಗ ಖಾತ್ರಿ ಕೆಲಸವನ್ನು ನೀಡಬೇಕು ಮತ್ತು 200 ದಿನಗಳಿಗೆ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.</p>.<p>ಎಲ್ಲಾ ದೇವದಾಸಿ ಮಹಿಳೆಯರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ತಲಾ ಐದು ಎಕರೆ ಜಮೀನು ಉಚಿತವಾಗಿ ನೀಡಬೇಕೆಂದು ಒತ್ತಾಯಿಸಿದರು.</p>.<p>ದೇವದಾಸಿ ಮಹಿಳೆಯರ ವಿಮೋಚನಾ ಸಂಘ ತಾಲ್ಲೂಕು ಘಟಕದ ಅಧ್ಯಕ್ಷೆ ಯಲ್ಲಮ್ಮ, ಕಾರ್ಯದರ್ಶಿಗಳಾದ ಕರಿಯಮ್ಮ, ಪಾಪಮ್ಮ, ಸದಸ್ಯರಾದ ಶೇಖಮ್ಮ, ಮಾಯಮ್ಮ, ಹುಸೇನಮ್ಮ, ಹಂಪಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು: </strong>ಲಾಕ್ಡೌನ್ನಿಂದಾಗಿ ದೇವದಾಸಿಯರು ಆರ್ಥಿಕ ಸಂಕಷ್ಟಕ್ಕೆ ತ್ತುತ್ತಾಗಿದ್ದು, ಎಲ್ಲರಿಗೂ ಸರ್ಕಾರವು ಮಾಸಿಕ ₹ 7,500 ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ತಾಲ್ಲೂಕು ಘಟಕ ಮಂಗಳವಾರ ಶಿರಸ್ತೇದಾರ್ ಅಂಬಾದಾಸ್ಗೆ ಮನವಿ ಸಲ್ಲಿಸಿತು.</p>.<p>ಲಾಕ್ಡೌನ್ ವೇಳೆಯಲ್ಲಿ ದೇವದಾಸಿಯರಿಗೆ ಪಡಿತರ ನೀಡಿದೊಂದು ಬಿಟ್ಟರೆ ಮತ್ಯಾವ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸಿಲ್ಲ ಎಂದರು.</p>.<p>ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾರಿಗೆ ತಂದು ಭೂಮಾಲೀಕ ಮತ್ತು ಕಾರ್ಪೋರೇಟ್ ಕಂಪನಿಗಳ ಗುಲಾಮಿತನಕ್ಕೆ ತಳ್ಳಲಿದೆ. ಭೂಸುಧಾರಣಾ ತಿದ್ದುಪಡಿ ಕಾಯ್ದೆ ಮೂಲಕ ಸಿಗಬೇಕಾದ ಜಮೀನುಗಳನ್ನು ಸಿಗದಂತೆ ಮಾಡಲಾಗುತ್ತಿದೆ ಎಂದು ದೂರಿದರು.</p>.<p>ಜನವಿರೋಧಿ ತಿದ್ದುಪಡಿಗಳನ್ನು ವಾಪಾಸ್ ಪಡೆಯಬೇಕು ಮತ್ತು ಸಾರ್ವಜನಿಕ ರಂಗದ ಕೈಗಾರಿಕೆಗಳ ಖಾಸಗೀಕರಣ ನಿಲ್ಲಿಸಬೇಕೆಂದು ಗೌರವಾಧ್ಯಕ್ಷ ನರಸಿಂಹಪ್ಪ ಆಗ್ರಹಿಸಿದರು.</p>.<p>ಪ್ರತಿ ಕುಟುಂಬದ ತಲಾ ಸದಸ್ಯರಿಗೆ ಮಾಸಿಕ ಕನಿಷ್ಠ 10 ಕೆ.ಜಿ ಸಮಗ್ರ ಆಹಾರ ಮತ್ತು ಆರೋಗ್ಯ ಸಾಮಗ್ರಿಗಳ ಕಿಟ್ ಒದಗಿಸಬೇಕು. ಗ್ರಾಮೀಣ ಪ್ರದೇಶದ ಎಲ್ಲಾ ನಾಗರಿಕರ ಉಚಿತ ಆರೋಗ್ಯ ತಪಾಸಣೆಗೆ ಸಾರ್ವಜನಿಕ ಆರೋಗ್ಯ ಇಲಾಖೆಯ ಮೂಲಕ ಕ್ರಮವಹಿಸಬೇಕು.</p>.<p>ಉದ್ಯೋಗ ಖಾತ್ರಿ ಕೂಲಿಯನ್ನು ₹ 600 ಗಳಿಗೆ ಹೆಚ್ಚಿಸಿ, ನಗರ ಪ್ರದೇಶದ ಜನರಿಗೂ ಉದ್ಯೋಗ ಖಾತ್ರಿ ಕೆಲಸವನ್ನು ನೀಡಬೇಕು ಮತ್ತು 200 ದಿನಗಳಿಗೆ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.</p>.<p>ಎಲ್ಲಾ ದೇವದಾಸಿ ಮಹಿಳೆಯರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ತಲಾ ಐದು ಎಕರೆ ಜಮೀನು ಉಚಿತವಾಗಿ ನೀಡಬೇಕೆಂದು ಒತ್ತಾಯಿಸಿದರು.</p>.<p>ದೇವದಾಸಿ ಮಹಿಳೆಯರ ವಿಮೋಚನಾ ಸಂಘ ತಾಲ್ಲೂಕು ಘಟಕದ ಅಧ್ಯಕ್ಷೆ ಯಲ್ಲಮ್ಮ, ಕಾರ್ಯದರ್ಶಿಗಳಾದ ಕರಿಯಮ್ಮ, ಪಾಪಮ್ಮ, ಸದಸ್ಯರಾದ ಶೇಖಮ್ಮ, ಮಾಯಮ್ಮ, ಹುಸೇನಮ್ಮ, ಹಂಪಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>