<p><strong>ಏಗನೂರು (ಶಕ್ತಿನಗರ): </strong>ವಿಮಾನ ಹಾರಾಟ ಮತ್ತು ವಿದ್ಯುತ್ ಉತ್ಪಾದನಾ ಘಟಕಗಳ ಶಬ್ದದಿಂದ ತೊಂದರೆಯನ್ನು ತಪ್ಪಿಸಲು ಗ್ರಾಮ ಸ್ಥಳಾಂತರಕ್ಕೆ ಏಗನೂರು ಗ್ರಾಮಸ್ಥರು ಭಾನುವಾರ ನಡೆದ ಗ್ರಾಮಸಭೆಯಲ್ಲಿ ನಿರ್ಣಯ ತೆಗೆದುಕೊಂಡರು.</p>.<p>ವೈಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕಗಳ ನಿರ್ಮಾಣಕ್ಕಾಗಿ ಏಗನೂರು ಗ್ರಾಮವನ್ನು ಸ್ಥಳಾಂತರಿಸಲು ಜಿಲ್ಲಾಡಳಿತ ಸೂಚನೆ ನೀಡಿತ್ತು. ಕಾರಣಾಂತರಗಳಿಂದ ಗ್ರಾಮವನ್ನು ಸ್ಥಳಾಂತರಿಸಲು ಗ್ರಾಮಸ್ಥರು ಹಿಂದೇಟು ಹಾಕಿದರು.</p>.<p>ಈಗ, ಏಗನೂರು ಸೀಮಾಂತರದ ಜಮೀನುಗಳಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಸರ್ಕಾರ ನಿರ್ಣಯ ತೆಗೆದುಕೊಂಡಿದೆ. ಈಗಾಗಿ, ವಿಮಾನ ಹಾರಾಟ ಮತ್ತು ವಿದ್ಯುತ್ ಉತ್ಪಾದನಾ ಘಟಕಗಳ ಶಬ್ದದಿಂದ ತೊಂದರೆಯನ್ನು ತಪ್ಪಿಸಲು ಗ್ರಾಮವನ್ನು ತೊರೆಯಲು ನಿರ್ಣಯ ಕೈಗೊಳ್ಳಲಾಗಿದೆ. ಯರಮರಸ್ ಕ್ಯಾಂಪ್ ಹತ್ತಿರ ಕೆಐಎಡಿಬಿ ಜಾಗ ಇದೆ. ಆ ಸ್ಥಳದಲ್ಲಿ ಸೂಕ್ತ ಮೂಲಸೌಲಭ್ಯಗಳೊಂದಿಗೆ ಪುನರ್ವಸತಿ ಕೇಂದ್ರ ನಿರ್ಮಿಸಿ, ಜನರಿಗೆ ವಾಸಿಸಲು ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಒತ್ತಾಯ ಮಾಡಲಾಗುವುದು ಎನ್ನುತ್ತಾರೆ ಗ್ರಾಮದ ಮುಖಂಡ ರಾಮನಗೌಡ.</p>.<p>ರಾಜೀವಗಾಂಧಿ ವಸತಿ ಯೋಜನೆಗೆ ಮೀಸಲಿಟ್ಟ ಏಗನೂರು ಸೀಮಾಂತರದ ಸರ್ವೆ ನಂಬರ್ 201, 202 ಮತ್ತು 203 ರ ಜಮೀನುಗಳಲ್ಲಿ ಸೌಳು ಇದೆ. ಅಲ್ಲಿ ಗುಣಮಟ್ಟದ ಮನೆಗಳನ್ನು ನಿರ್ಮಿಸಲು ಅಸಾಧ್ಯ. ಈಗಾಗಿ ರಾಜೀವಗಾಂಧಿ ವಸತಿ ಯೋಜನೆ ಅಡಿ ಮನೆಗಳನ್ನು ನಿರ್ಮಿಸಲು ಜಿಲ್ಲಾಡಳಿತ ಕೈ ಬಿಡಬೇಕು.</p>.<p>ವಿಮಾನ ನಿಲ್ದಾಣಕ್ಕೆ ಏಗನೂರು ವಿಮಾನ ನಿಲ್ದಾಣ ನಾಮಕಾರಣ ಮಾಡಬೇಕು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಾದಯಾತ್ರೆಯೊಂದಿಗೆ ಜಿಲ್ಲಾಡಳಿತಕ್ಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲು ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಗ್ರಾಮದ ಹಿರಿಯ ಮುಖಂಡ ಕೆ.ಸತ್ಯನಾರಾಯಣ ಹೇಳಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯ ಶ್ರೀನಿವಾಸ ಏಗನೂರು, ಅನಿಲ ನಾಯಕ, ಸೂಗಮ್ಮ, ಹನುಮಂತಿ, ಮುಖಂಡರಾದ ಮಲ್ಲಿಕಾರ್ಜುನ ಏಗನೂರು, ವೀರಗಂಗಾಧರ, ಮಹಾದೇವ, ವಿಶ್ವನಾಥ, ವೆಂಕಟೇಶ ಮತ್ತಿತ್ತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಏಗನೂರು (ಶಕ್ತಿನಗರ): </strong>ವಿಮಾನ ಹಾರಾಟ ಮತ್ತು ವಿದ್ಯುತ್ ಉತ್ಪಾದನಾ ಘಟಕಗಳ ಶಬ್ದದಿಂದ ತೊಂದರೆಯನ್ನು ತಪ್ಪಿಸಲು ಗ್ರಾಮ ಸ್ಥಳಾಂತರಕ್ಕೆ ಏಗನೂರು ಗ್ರಾಮಸ್ಥರು ಭಾನುವಾರ ನಡೆದ ಗ್ರಾಮಸಭೆಯಲ್ಲಿ ನಿರ್ಣಯ ತೆಗೆದುಕೊಂಡರು.</p>.<p>ವೈಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕಗಳ ನಿರ್ಮಾಣಕ್ಕಾಗಿ ಏಗನೂರು ಗ್ರಾಮವನ್ನು ಸ್ಥಳಾಂತರಿಸಲು ಜಿಲ್ಲಾಡಳಿತ ಸೂಚನೆ ನೀಡಿತ್ತು. ಕಾರಣಾಂತರಗಳಿಂದ ಗ್ರಾಮವನ್ನು ಸ್ಥಳಾಂತರಿಸಲು ಗ್ರಾಮಸ್ಥರು ಹಿಂದೇಟು ಹಾಕಿದರು.</p>.<p>ಈಗ, ಏಗನೂರು ಸೀಮಾಂತರದ ಜಮೀನುಗಳಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಸರ್ಕಾರ ನಿರ್ಣಯ ತೆಗೆದುಕೊಂಡಿದೆ. ಈಗಾಗಿ, ವಿಮಾನ ಹಾರಾಟ ಮತ್ತು ವಿದ್ಯುತ್ ಉತ್ಪಾದನಾ ಘಟಕಗಳ ಶಬ್ದದಿಂದ ತೊಂದರೆಯನ್ನು ತಪ್ಪಿಸಲು ಗ್ರಾಮವನ್ನು ತೊರೆಯಲು ನಿರ್ಣಯ ಕೈಗೊಳ್ಳಲಾಗಿದೆ. ಯರಮರಸ್ ಕ್ಯಾಂಪ್ ಹತ್ತಿರ ಕೆಐಎಡಿಬಿ ಜಾಗ ಇದೆ. ಆ ಸ್ಥಳದಲ್ಲಿ ಸೂಕ್ತ ಮೂಲಸೌಲಭ್ಯಗಳೊಂದಿಗೆ ಪುನರ್ವಸತಿ ಕೇಂದ್ರ ನಿರ್ಮಿಸಿ, ಜನರಿಗೆ ವಾಸಿಸಲು ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಒತ್ತಾಯ ಮಾಡಲಾಗುವುದು ಎನ್ನುತ್ತಾರೆ ಗ್ರಾಮದ ಮುಖಂಡ ರಾಮನಗೌಡ.</p>.<p>ರಾಜೀವಗಾಂಧಿ ವಸತಿ ಯೋಜನೆಗೆ ಮೀಸಲಿಟ್ಟ ಏಗನೂರು ಸೀಮಾಂತರದ ಸರ್ವೆ ನಂಬರ್ 201, 202 ಮತ್ತು 203 ರ ಜಮೀನುಗಳಲ್ಲಿ ಸೌಳು ಇದೆ. ಅಲ್ಲಿ ಗುಣಮಟ್ಟದ ಮನೆಗಳನ್ನು ನಿರ್ಮಿಸಲು ಅಸಾಧ್ಯ. ಈಗಾಗಿ ರಾಜೀವಗಾಂಧಿ ವಸತಿ ಯೋಜನೆ ಅಡಿ ಮನೆಗಳನ್ನು ನಿರ್ಮಿಸಲು ಜಿಲ್ಲಾಡಳಿತ ಕೈ ಬಿಡಬೇಕು.</p>.<p>ವಿಮಾನ ನಿಲ್ದಾಣಕ್ಕೆ ಏಗನೂರು ವಿಮಾನ ನಿಲ್ದಾಣ ನಾಮಕಾರಣ ಮಾಡಬೇಕು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಾದಯಾತ್ರೆಯೊಂದಿಗೆ ಜಿಲ್ಲಾಡಳಿತಕ್ಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲು ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಗ್ರಾಮದ ಹಿರಿಯ ಮುಖಂಡ ಕೆ.ಸತ್ಯನಾರಾಯಣ ಹೇಳಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯ ಶ್ರೀನಿವಾಸ ಏಗನೂರು, ಅನಿಲ ನಾಯಕ, ಸೂಗಮ್ಮ, ಹನುಮಂತಿ, ಮುಖಂಡರಾದ ಮಲ್ಲಿಕಾರ್ಜುನ ಏಗನೂರು, ವೀರಗಂಗಾಧರ, ಮಹಾದೇವ, ವಿಶ್ವನಾಥ, ವೆಂಕಟೇಶ ಮತ್ತಿತ್ತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>