<p><strong>ಸಿಂಧನೂರು: </strong>ಎಲ್ಲ ದೇವದಾಸಿಯರಿಗೆ ಸಹಾಯಧನ ಹೆಚ್ಚಳ, ಮನೆ ನಿರ್ಮಿಸಿ ಕೊಡುವುದು, ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ತಾಲ್ಲೂಕು ಘಟಕದಿಂದ ಬುಧವಾರ ಇಲ್ಲಿನ ಮಿನಿವಿಧಾಸೌಧ ಕಚೇರಿಗೆ ಮುತ್ತಿಗೆ ಹಾಕಲಾಯಿತು.</p>.<p>ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಗರ ಸೇರಿ ವಿವಿಧ ಗ್ರಾಮಗಳ ದೇವದಾಸಿಯರು ಜಮಾಯಿಸಿದ್ದರು. ನಂತರ ಆರಂಭಗೊಂಡ ಮೆರವಣಿಗೆಯು ಅಪ್ನಾಮಂಡಿ ಮಾರುಕಟ್ಟೆ, ಮಹಾತ್ಮಗಾಂಧಿ ವೃತ್ತದ ಮೂಲಕ ಮಿನಿವಿಧಾನಸೌಧ ತಲುಪಿತು.</p>.<p>ಮಹಿಳೆಯರು ಘೋಷಣೆಗಳನ್ನು ಕೂಗುತ್ತಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು.</p>.<p>ದೇವದಾಸಿಯರಿಗೆ ಮಾಸಿಕ ₹5 ಸಾವಿರ ಸಹಾಯಧನ ನೀಡಬೇಕು. ದೇವದಾಸಿಯರ ಮಕ್ಕಳು ಮತ್ತು ಕುಟುಂಬದ ಸದಸ್ಯರನ್ನು ತಕ್ಷಣ ಗಣತಿ ಮಾಡಿ ಅವರಿಗೂ ಪುನರ್ವಸತಿ ಕಲ್ಪಿಸಬೇಕು. ದೇವದಾಸಿ ಮಕ್ಕಳಿಗೆ ಉನ್ನತ ಶಿಕ್ಷಣದವರೆಗೆ ತಗುಲುವ ಶುಲ್ಕವನ್ನು ಸರ್ಕಾರವೇ ಭರಿಸಬೇಕು. ವಿವಾಹಕ್ಕೆ ₹5 ಲಕ್ಷ ನೆರವು ನೀಡಬೇಕು. ದೇವದಾಸಿಯರು ಸ್ತ್ರೀಶಕ್ತಿ ಹಾಗೂ ಸ್ವಸಹಾಯ ಸಂಘಗಳಲ್ಲಿ ಪಡೆದ ಸಾಲ ಮನ್ನಾ ಮಾಡಬೇಕು ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಎಚ್.ಪದ್ಮಾ ಒತ್ತಾಯಿಸಿದರು.</p>.<p>ದೇವದಾಸಿಯರು ಕೃಷಿ ಚಟುವಟಿಕೆಯಲ್ಲಿ ತೊಡಗಲು ತಲಾ 2 ಎಕರೆ ಭೂಮಿ ನೀಡಬೇಕು. ನಿವೇಶನ ರಹಿತರಿಗೆ 80*80 ಚದರ ಅಡಿ ಜಾಗ ನೀಡಿ ಮನೆಗಳನ್ನು ನಿರ್ಮಿಸಿಕೊಡಬೇಕು.</p>.<p>ಸ್ವಯಂ ಉದ್ಯೋಗ ಕೈಗೊಳ್ಳಲು ವೃತ್ತಿ ತರಬೇತಿ ಶಿಬಿರಗಳನ್ನು ಹೋಬಳಿಗೊಂದರಂತೆ ಆರಂಭಿಸಿ, ಪ್ರತಿ ತಿಂಗಳು ಕನಿಷ್ಠ ₹4,000 ಭತ್ಯೆ ಜತೆಗೆ ಊಟ, ವಸತಿ ಸೌಲಭ್ಯ ಕಲ್ಪಿಸಬೇಕು. ಉದ್ಯೋಗ ಖಾತ್ರಿ ಯೋಜನೆ ಅಡಿ ಕನಿಷ್ಠ 200 ದಿನ ಕೆಲಸ ನೀಡಬೇಕು ಎಂದು ಸಂಘದ ಗೌರವಾಧ್ಯಕ್ಷ ನರಸಿಂಹಪ್ಪ ಆಗ್ರಹಿಸಿದರು.</p>.<p>ನಂತರ ತಹಶೀಲ್ದಾರ್ ಶಿವಾನಂದ ಸಾಗರ ಮನವಿ ಪತ್ರ ಸ್ವೀಕರಿಸಿದರು. ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಯಲ್ಲಮ್ಮ, ಕಾರ್ಯದರ್ಶಿ ಕರಿಯಮ್ಮ, ಖಜಾಂಚಿ ಪಾಪಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು: </strong>ಎಲ್ಲ ದೇವದಾಸಿಯರಿಗೆ ಸಹಾಯಧನ ಹೆಚ್ಚಳ, ಮನೆ ನಿರ್ಮಿಸಿ ಕೊಡುವುದು, ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ತಾಲ್ಲೂಕು ಘಟಕದಿಂದ ಬುಧವಾರ ಇಲ್ಲಿನ ಮಿನಿವಿಧಾಸೌಧ ಕಚೇರಿಗೆ ಮುತ್ತಿಗೆ ಹಾಕಲಾಯಿತು.</p>.<p>ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಗರ ಸೇರಿ ವಿವಿಧ ಗ್ರಾಮಗಳ ದೇವದಾಸಿಯರು ಜಮಾಯಿಸಿದ್ದರು. ನಂತರ ಆರಂಭಗೊಂಡ ಮೆರವಣಿಗೆಯು ಅಪ್ನಾಮಂಡಿ ಮಾರುಕಟ್ಟೆ, ಮಹಾತ್ಮಗಾಂಧಿ ವೃತ್ತದ ಮೂಲಕ ಮಿನಿವಿಧಾನಸೌಧ ತಲುಪಿತು.</p>.<p>ಮಹಿಳೆಯರು ಘೋಷಣೆಗಳನ್ನು ಕೂಗುತ್ತಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು.</p>.<p>ದೇವದಾಸಿಯರಿಗೆ ಮಾಸಿಕ ₹5 ಸಾವಿರ ಸಹಾಯಧನ ನೀಡಬೇಕು. ದೇವದಾಸಿಯರ ಮಕ್ಕಳು ಮತ್ತು ಕುಟುಂಬದ ಸದಸ್ಯರನ್ನು ತಕ್ಷಣ ಗಣತಿ ಮಾಡಿ ಅವರಿಗೂ ಪುನರ್ವಸತಿ ಕಲ್ಪಿಸಬೇಕು. ದೇವದಾಸಿ ಮಕ್ಕಳಿಗೆ ಉನ್ನತ ಶಿಕ್ಷಣದವರೆಗೆ ತಗುಲುವ ಶುಲ್ಕವನ್ನು ಸರ್ಕಾರವೇ ಭರಿಸಬೇಕು. ವಿವಾಹಕ್ಕೆ ₹5 ಲಕ್ಷ ನೆರವು ನೀಡಬೇಕು. ದೇವದಾಸಿಯರು ಸ್ತ್ರೀಶಕ್ತಿ ಹಾಗೂ ಸ್ವಸಹಾಯ ಸಂಘಗಳಲ್ಲಿ ಪಡೆದ ಸಾಲ ಮನ್ನಾ ಮಾಡಬೇಕು ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಎಚ್.ಪದ್ಮಾ ಒತ್ತಾಯಿಸಿದರು.</p>.<p>ದೇವದಾಸಿಯರು ಕೃಷಿ ಚಟುವಟಿಕೆಯಲ್ಲಿ ತೊಡಗಲು ತಲಾ 2 ಎಕರೆ ಭೂಮಿ ನೀಡಬೇಕು. ನಿವೇಶನ ರಹಿತರಿಗೆ 80*80 ಚದರ ಅಡಿ ಜಾಗ ನೀಡಿ ಮನೆಗಳನ್ನು ನಿರ್ಮಿಸಿಕೊಡಬೇಕು.</p>.<p>ಸ್ವಯಂ ಉದ್ಯೋಗ ಕೈಗೊಳ್ಳಲು ವೃತ್ತಿ ತರಬೇತಿ ಶಿಬಿರಗಳನ್ನು ಹೋಬಳಿಗೊಂದರಂತೆ ಆರಂಭಿಸಿ, ಪ್ರತಿ ತಿಂಗಳು ಕನಿಷ್ಠ ₹4,000 ಭತ್ಯೆ ಜತೆಗೆ ಊಟ, ವಸತಿ ಸೌಲಭ್ಯ ಕಲ್ಪಿಸಬೇಕು. ಉದ್ಯೋಗ ಖಾತ್ರಿ ಯೋಜನೆ ಅಡಿ ಕನಿಷ್ಠ 200 ದಿನ ಕೆಲಸ ನೀಡಬೇಕು ಎಂದು ಸಂಘದ ಗೌರವಾಧ್ಯಕ್ಷ ನರಸಿಂಹಪ್ಪ ಆಗ್ರಹಿಸಿದರು.</p>.<p>ನಂತರ ತಹಶೀಲ್ದಾರ್ ಶಿವಾನಂದ ಸಾಗರ ಮನವಿ ಪತ್ರ ಸ್ವೀಕರಿಸಿದರು. ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಯಲ್ಲಮ್ಮ, ಕಾರ್ಯದರ್ಶಿ ಕರಿಯಮ್ಮ, ಖಜಾಂಚಿ ಪಾಪಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>