<p><strong>ದೇವದುರ್ಗ:</strong> ತಾಲ್ಲೂಕಿನ ಗಬ್ಬೂರು ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ ಟಿ.ಡಿ ಹಾಗೂ ಪೊಲೀಸ್ ಕಾನ್ಸ್ಟೆಬಲ್ ರಮೇಶ ₹50 ಸಾವಿರ ಲಂಚ ಪಡೆಯುವ ವೇಳೆ ಶುಕ್ರವಾರ ರಾಯಚೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್ ನೇತೃತ್ವದ ತಂಡದ ಬಲೆಗೆ ಬಿದ್ದಿದ್ದಾರೆ.</p><p>ಗಬ್ಬೂರು ಗ್ರಾಮದ ಫಾರೂಕ್ ಎಂಬ ಯುವಕನಿಂದ ₹50 ಸಾವಿರ ಪಡೆಯುತ್ತಿದ್ದಾಗ ಲೋಕಾಯುಕ್ತ ತಂಡ ದಾಳಿ ನಡೆಸಿ ಬಂಧಿಸಿದೆ. ಮೇ 10ರಂದು ಗಬ್ಬೂರು ಗ್ರಾಮದ ಖಾಸಗಿ ಬ್ಯಾಂಕ್ ಉದ್ಯೋಗಿ ಫಾರೂಕ್ನನ್ನು ಕ್ರಿಕೆಟ್ ಬೆಟ್ಟಿಂಗ್ ಆರೋಪದ ಮೇಲೆ ವಶಕ್ಕೆ ಪಡೆದಿದ್ದರು. ಆದರೆ, ಪ್ರಕರಣ ದಾಖಲಿಸದೆ ಇರಲು<br>₹3 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಫಾರೂಕ್ ತಿಳಿಸಿದ್ದ.</p><p>ಫಾರೂಕ್ ವಿರುದ್ಧ ಕ್ರಿಕೆಟ್ ಬೆಟ್ಟಿಂಗ್ ಕೇಸ್ ದಾಖಲಿಸಿಕೊಳ್ಳದೆ ಇರಲು ಪಿಎಸ್ಐ ಮಂಜುನಾಥ ಕಾನ್ಸ್ಟೆಬಲ್ ರಮೇಶ ಮೂಲಕ ಪ್ರಾರಂಭದಲ್ಲಿ ₹10 ಲಕ್ಷಕ್ಕೆ ಬೇಡಿಕೆ ಇಟ್ಟು, ನಂತರ ₹3 ಲಕ್ಷಕ್ಕೆ ವ್ಯವಹಾರ ಕುದುರಿಸಿದ್ದರು. ಬಳಿಕ ಫಾರೂಕ್ ಲೋಕಾಯುಕ್ತರಿಗೆ ದೂರು ನೀಡಿದ್ದರು. ₹50 ಸಾವಿರ ಹಣ ನೀಡುವಾಗ ಕಾನ್ಸ್ಟೆಬಲ್ ರಮೇಶ ಸಿಕ್ಕಿಬಿದ್ದಿದ್ದಾನೆ. ಲೋಕಾಯುಕ್ತ ತಂಡದಲ್ಲಿ ಡಿವೈಎಸ್ಪಿ ರಘು ಜಿ, ಇನ್ಸ್ಪೆಕ್ಟರ್ಗಳಾದ ಅಮರೇಶ ಹುಬ್ಬಳ್ಳಿ, ಕಾಳಪ್ಪ ಬಡಿಗೇರ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವದುರ್ಗ:</strong> ತಾಲ್ಲೂಕಿನ ಗಬ್ಬೂರು ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ ಟಿ.ಡಿ ಹಾಗೂ ಪೊಲೀಸ್ ಕಾನ್ಸ್ಟೆಬಲ್ ರಮೇಶ ₹50 ಸಾವಿರ ಲಂಚ ಪಡೆಯುವ ವೇಳೆ ಶುಕ್ರವಾರ ರಾಯಚೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್ ನೇತೃತ್ವದ ತಂಡದ ಬಲೆಗೆ ಬಿದ್ದಿದ್ದಾರೆ.</p><p>ಗಬ್ಬೂರು ಗ್ರಾಮದ ಫಾರೂಕ್ ಎಂಬ ಯುವಕನಿಂದ ₹50 ಸಾವಿರ ಪಡೆಯುತ್ತಿದ್ದಾಗ ಲೋಕಾಯುಕ್ತ ತಂಡ ದಾಳಿ ನಡೆಸಿ ಬಂಧಿಸಿದೆ. ಮೇ 10ರಂದು ಗಬ್ಬೂರು ಗ್ರಾಮದ ಖಾಸಗಿ ಬ್ಯಾಂಕ್ ಉದ್ಯೋಗಿ ಫಾರೂಕ್ನನ್ನು ಕ್ರಿಕೆಟ್ ಬೆಟ್ಟಿಂಗ್ ಆರೋಪದ ಮೇಲೆ ವಶಕ್ಕೆ ಪಡೆದಿದ್ದರು. ಆದರೆ, ಪ್ರಕರಣ ದಾಖಲಿಸದೆ ಇರಲು<br>₹3 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಫಾರೂಕ್ ತಿಳಿಸಿದ್ದ.</p><p>ಫಾರೂಕ್ ವಿರುದ್ಧ ಕ್ರಿಕೆಟ್ ಬೆಟ್ಟಿಂಗ್ ಕೇಸ್ ದಾಖಲಿಸಿಕೊಳ್ಳದೆ ಇರಲು ಪಿಎಸ್ಐ ಮಂಜುನಾಥ ಕಾನ್ಸ್ಟೆಬಲ್ ರಮೇಶ ಮೂಲಕ ಪ್ರಾರಂಭದಲ್ಲಿ ₹10 ಲಕ್ಷಕ್ಕೆ ಬೇಡಿಕೆ ಇಟ್ಟು, ನಂತರ ₹3 ಲಕ್ಷಕ್ಕೆ ವ್ಯವಹಾರ ಕುದುರಿಸಿದ್ದರು. ಬಳಿಕ ಫಾರೂಕ್ ಲೋಕಾಯುಕ್ತರಿಗೆ ದೂರು ನೀಡಿದ್ದರು. ₹50 ಸಾವಿರ ಹಣ ನೀಡುವಾಗ ಕಾನ್ಸ್ಟೆಬಲ್ ರಮೇಶ ಸಿಕ್ಕಿಬಿದ್ದಿದ್ದಾನೆ. ಲೋಕಾಯುಕ್ತ ತಂಡದಲ್ಲಿ ಡಿವೈಎಸ್ಪಿ ರಘು ಜಿ, ಇನ್ಸ್ಪೆಕ್ಟರ್ಗಳಾದ ಅಮರೇಶ ಹುಬ್ಬಳ್ಳಿ, ಕಾಳಪ್ಪ ಬಡಿಗೇರ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>