<p><strong>ದೇವದುರ್ಗ</strong>: ತಾಲ್ಲೂಕಿನ ಅಮರಾಪುರ ಹಳ್ಳದ ಬಸವೇಶ್ವರ ರಥೋತ್ಸವ ಸೋಮವಾರ ಸಡಗರ ಸಂಭ್ರಮದಿಂದ ನಡೆಯಿತು.</p>.<p>ದೇವಾಲಯದಲ್ಲಿ ಬೆಳಿಗ್ಗೆ ರುದ್ರಾಭಿಷೇಕ, ವಿಶೇಷ ಪೂಜಾ ಕಾರ್ಯಗಳು ನೆರವೇರಿದವು. ಸುತ್ತಮುತ್ತಲ ಗ್ರಾಮಗಳಿಂದ ಅಪಾರ ಸಂಖ್ಯೆಯಲ್ಲಿ ಬಂದಿದ್ದ ಭಕ್ತರು ದೇವರಿಗೆ ಹಣ್ಣು ಕಾಯಿ ಸಮರ್ಪಿಸಿ ಪೂಜೆ ಸಲ್ಲಿಸಿ ತಮ್ಮ ಪಶು ಸಂಪತ್ತನ್ನು ಸಂರಕ್ಷಿಸುವಂತೆ ಪ್ರಾರ್ಥನೆ ಸಲ್ಲಿಸಿದರು.</p>.<p>ಸಂಜೆ ದೇವಸ್ಥಾನದಿಂದ ಸ್ವಾಮಿಯ ಉತ್ಸವ ಮೂರ್ತಿಯನ್ನು ಭವ್ಯ ಮೆರವಣಿಗೆಯಲ್ಲಿ ಕರೆತಂದು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ರಥಕ್ಕೆ ವಿಶೇಷ ಪೂಜೆ ನೆರವೇರಿಸುತ್ತಿದ್ದಂತೆ ‘ಹರ ಹರ ಮಹಾದೇವ’ ಎಂಬ ಭಕ್ತರ ಜಯಘೋಷ, ಹರ್ಷೋದ್ಘಾರದೊಂದಿಗೆ ರಥೋತ್ಸವ ಪ್ರಾರಂಭವಾಯಿತು.</p>.<p>ರಥ ಬೀದಿಯಲ್ಲಿ ನೆರೆದಿದ್ದ ಭಕ್ತ ಸಮೂಹ ಬಾಳೆಹಣ್ಣು, ಉತ್ತತ್ತಿ ಎಸೆದು ಭಕ್ತಿ ಸಮರ್ಪಿಸಿತು. ರಥವು ಪಾದಗಟ್ಟೆವರೆಗೂ ತೆರಳಿ ಮೂಲ ಸ್ಥಳಕ್ಕೆ ಹಿಂತಿರುಗಿತು. ಸಮಾಳ, ಡೋಲು, ಹಲಗೆ ಮಂಗಳ ವಾದ್ಯಗಳು ರಥೋತ್ಸವಕ್ಕೆ ಮೆರುಗು ತಂದವು.</p>.<p>ನೆರೆಯ ಗ್ರಾಮಗಳಾದ ಹದ್ದಿನಾಳ, ಸುಂಕೇಶ್ವರಹಾಳ, ರಾಮದುರ್ಗ, ಮಲದಕಲ್, ಗಬ್ಬೂರು ಮತ್ತು ಜಿನ್ನಾಪುರ ಗ್ರಾಮದ ಭಕ್ತರು ರಥೋತ್ಸವ ದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವದುರ್ಗ</strong>: ತಾಲ್ಲೂಕಿನ ಅಮರಾಪುರ ಹಳ್ಳದ ಬಸವೇಶ್ವರ ರಥೋತ್ಸವ ಸೋಮವಾರ ಸಡಗರ ಸಂಭ್ರಮದಿಂದ ನಡೆಯಿತು.</p>.<p>ದೇವಾಲಯದಲ್ಲಿ ಬೆಳಿಗ್ಗೆ ರುದ್ರಾಭಿಷೇಕ, ವಿಶೇಷ ಪೂಜಾ ಕಾರ್ಯಗಳು ನೆರವೇರಿದವು. ಸುತ್ತಮುತ್ತಲ ಗ್ರಾಮಗಳಿಂದ ಅಪಾರ ಸಂಖ್ಯೆಯಲ್ಲಿ ಬಂದಿದ್ದ ಭಕ್ತರು ದೇವರಿಗೆ ಹಣ್ಣು ಕಾಯಿ ಸಮರ್ಪಿಸಿ ಪೂಜೆ ಸಲ್ಲಿಸಿ ತಮ್ಮ ಪಶು ಸಂಪತ್ತನ್ನು ಸಂರಕ್ಷಿಸುವಂತೆ ಪ್ರಾರ್ಥನೆ ಸಲ್ಲಿಸಿದರು.</p>.<p>ಸಂಜೆ ದೇವಸ್ಥಾನದಿಂದ ಸ್ವಾಮಿಯ ಉತ್ಸವ ಮೂರ್ತಿಯನ್ನು ಭವ್ಯ ಮೆರವಣಿಗೆಯಲ್ಲಿ ಕರೆತಂದು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ರಥಕ್ಕೆ ವಿಶೇಷ ಪೂಜೆ ನೆರವೇರಿಸುತ್ತಿದ್ದಂತೆ ‘ಹರ ಹರ ಮಹಾದೇವ’ ಎಂಬ ಭಕ್ತರ ಜಯಘೋಷ, ಹರ್ಷೋದ್ಘಾರದೊಂದಿಗೆ ರಥೋತ್ಸವ ಪ್ರಾರಂಭವಾಯಿತು.</p>.<p>ರಥ ಬೀದಿಯಲ್ಲಿ ನೆರೆದಿದ್ದ ಭಕ್ತ ಸಮೂಹ ಬಾಳೆಹಣ್ಣು, ಉತ್ತತ್ತಿ ಎಸೆದು ಭಕ್ತಿ ಸಮರ್ಪಿಸಿತು. ರಥವು ಪಾದಗಟ್ಟೆವರೆಗೂ ತೆರಳಿ ಮೂಲ ಸ್ಥಳಕ್ಕೆ ಹಿಂತಿರುಗಿತು. ಸಮಾಳ, ಡೋಲು, ಹಲಗೆ ಮಂಗಳ ವಾದ್ಯಗಳು ರಥೋತ್ಸವಕ್ಕೆ ಮೆರುಗು ತಂದವು.</p>.<p>ನೆರೆಯ ಗ್ರಾಮಗಳಾದ ಹದ್ದಿನಾಳ, ಸುಂಕೇಶ್ವರಹಾಳ, ರಾಮದುರ್ಗ, ಮಲದಕಲ್, ಗಬ್ಬೂರು ಮತ್ತು ಜಿನ್ನಾಪುರ ಗ್ರಾಮದ ಭಕ್ತರು ರಥೋತ್ಸವ ದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>