ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕರಾವಳಿಯಲ್ಲಿ ಧರ್ಮದ ಆಧಾರದಲ್ಲಿ ಧ್ರುವೀಕರಣ ಮಾಡಿ, ಮತೀಯ ದ್ವೇಷ ಬಿತ್ತುವ ಕೆಲಸ ಆರ್ಎಸ್ಎಸ್ ಮತ್ತು ಬಿಜೆಪಿಯಿಂದ ನಡೆಯುತ್ತಿದೆ. ಅದು ವಿಭಿನ್ನ ಧರ್ಮದ ಜನರ ನಡುವೆ ಘರ್ಷಣೆಗೆ ಕಾರಣವಾಗಿ ಕೊಲೆಗಳಿಗೆ ದಾರಿ ಮಾಡುತ್ತಿದೆ' ಎಂದರು.