<p><strong>ಜಾಲಹಳ್ಳಿ: ‘</strong>ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಜನತೆ ಸಹಕಾರ ನೀಡುವ ಮೂಲಕ ಗುಣಮಟ್ಟದ ಕಾಮಗಾರಿಗಳು ನಡೆಯುವಂತೆ ಗಮನ ಹರಿಸಬೇಕು ಎಂದು ಶಾಸಕಿ ಕರೆಮ್ಮ ಜಿ.ನಾಯಕ ಹೇಳಿದರು.</p>.<p>ಸಮೀಪದ ಚಿಂಚೋಡಿ ಗ್ರಾಮದಲ್ಲಿ ಗುರುವಾರ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡಿ ಮಾತನಾಡಿದರು.</p>.<p>‘ಯರಗುಡ್ಡ ಗ್ರಾಮದಲ್ಲಿ ₹ 30 ಲಕ್ಷ, ಲಿಂಗದಹಳ್ಳಿ ಗ್ರಾಮದಲ್ಲಿ ₹ 20 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ, ಮುದ್ದಗೋಟ ಗ್ರಾಮದಲ್ಲಿ ₹ 36 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಹಾಗೂ ಅಂಗನವಾಡಿ ಕೇಂದ್ರ ಕಟ್ಟಡ ನಿರ್ಮಾಣ, ಹಾಗೂ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ರಂಗನಾಥ ದೇವಸ್ಥಾನದ ಮುಖ್ಯ ರಸ್ತೆಗೆ ಸಿ.ಸಿ ಹಾಗೂ ಚರಂಡಿ ನಿರ್ಮಾಣಕ್ಕೆ ₹ 1 ಕೋಟಿ ಅನುದಾನ ನೀಡಲಾಗಿದೆ’ ಎಂದು ಹೇಳಿದರು.</p>.<p>‘ಸರ್ಕಾರಿ ಕನ್ಯಾ ಪ್ರೌಢ ಶಾಲಾ ಕೋಣೆ ನಿರ್ಮಾಣಕ್ಕೆ ₹58 ಲಕ್ಷ ಮತ್ತು ತಿಂಪೂರ ದೊಡ್ಡಿ ಪ್ರಾಥಮಿಕ ಶಾಲಾ ಕೋಣೆ ನಿರ್ಮಾಣಕ್ಕೆ ₹29 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ. ಅಲ್ಲದೇ ಉತ್ತಿನ ಎಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ₹ 5 ಲಕ್ಷ ನೀಡಲಾಗಿದೆ. ಕರಿಗುಡ್ಡ ಗ್ರಾಮದಲ್ಲಿ ಶಾಲಾ ಕೋಣೆ ನಿರ್ಮಾಣಕ್ಕೆ ₹1.16 ಕೋಟಿ ಮಂಜೂರಾಗಿದೆ’ ಎಂದು ತಿಳಿಸಿದರು.</p>.<p>‘ಯಾವುದೇ ಕಾರಕ್ಕೂ ಕಳಪೆ ಗುಣಮಟ್ಟದ ಕಾಮಗಾರಿ ಅವಕಾಶ ನೀಡದೇ ಜನತೆ ಕಾಮಗಾರಿ ಬಗ್ಗೆ ಕಾಳಜಿ ವಹಿಸಬೇಕು. ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿ ಸ್ಥಳದಲ್ಲಿಯೇ ಇದ್ದು ಕಾಮಗಾರಿಗಳ ನಿರ್ವಹಣೆ ಮಾಡಬೇಕು’ ಎಂದು ತಾಕೀತು ಮಾಡಿದರು.</p>.<p>ಚಿಂಚೋಡಿ ಗ್ರಾಮದಲ್ಲಿ ₹50 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಿದರು.</p>.<p>ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಜಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಾದೇವಯ್ಯ, ಬಿಆರ್ ಸಿ ಶಿವರಾಜ ಪೂಜಾರಿ, ಮುಖಂಡರಾದ ಸಿದ್ದನಗೌಡ ಪಾಟೀಲ, ಗೋವಿಂದ ರಾಜ ನಾಯಕ, ಇಸಾಕ್ ಮೇಸ್ತ್ರಿ, ದಾವುದ್ ಔಂಟಿ, ಪ್ರಭು ದೊರೆ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಾಲಹಳ್ಳಿ: ‘</strong>ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಜನತೆ ಸಹಕಾರ ನೀಡುವ ಮೂಲಕ ಗುಣಮಟ್ಟದ ಕಾಮಗಾರಿಗಳು ನಡೆಯುವಂತೆ ಗಮನ ಹರಿಸಬೇಕು ಎಂದು ಶಾಸಕಿ ಕರೆಮ್ಮ ಜಿ.ನಾಯಕ ಹೇಳಿದರು.</p>.<p>ಸಮೀಪದ ಚಿಂಚೋಡಿ ಗ್ರಾಮದಲ್ಲಿ ಗುರುವಾರ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡಿ ಮಾತನಾಡಿದರು.</p>.<p>‘ಯರಗುಡ್ಡ ಗ್ರಾಮದಲ್ಲಿ ₹ 30 ಲಕ್ಷ, ಲಿಂಗದಹಳ್ಳಿ ಗ್ರಾಮದಲ್ಲಿ ₹ 20 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ, ಮುದ್ದಗೋಟ ಗ್ರಾಮದಲ್ಲಿ ₹ 36 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಹಾಗೂ ಅಂಗನವಾಡಿ ಕೇಂದ್ರ ಕಟ್ಟಡ ನಿರ್ಮಾಣ, ಹಾಗೂ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ರಂಗನಾಥ ದೇವಸ್ಥಾನದ ಮುಖ್ಯ ರಸ್ತೆಗೆ ಸಿ.ಸಿ ಹಾಗೂ ಚರಂಡಿ ನಿರ್ಮಾಣಕ್ಕೆ ₹ 1 ಕೋಟಿ ಅನುದಾನ ನೀಡಲಾಗಿದೆ’ ಎಂದು ಹೇಳಿದರು.</p>.<p>‘ಸರ್ಕಾರಿ ಕನ್ಯಾ ಪ್ರೌಢ ಶಾಲಾ ಕೋಣೆ ನಿರ್ಮಾಣಕ್ಕೆ ₹58 ಲಕ್ಷ ಮತ್ತು ತಿಂಪೂರ ದೊಡ್ಡಿ ಪ್ರಾಥಮಿಕ ಶಾಲಾ ಕೋಣೆ ನಿರ್ಮಾಣಕ್ಕೆ ₹29 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ. ಅಲ್ಲದೇ ಉತ್ತಿನ ಎಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ₹ 5 ಲಕ್ಷ ನೀಡಲಾಗಿದೆ. ಕರಿಗುಡ್ಡ ಗ್ರಾಮದಲ್ಲಿ ಶಾಲಾ ಕೋಣೆ ನಿರ್ಮಾಣಕ್ಕೆ ₹1.16 ಕೋಟಿ ಮಂಜೂರಾಗಿದೆ’ ಎಂದು ತಿಳಿಸಿದರು.</p>.<p>‘ಯಾವುದೇ ಕಾರಕ್ಕೂ ಕಳಪೆ ಗುಣಮಟ್ಟದ ಕಾಮಗಾರಿ ಅವಕಾಶ ನೀಡದೇ ಜನತೆ ಕಾಮಗಾರಿ ಬಗ್ಗೆ ಕಾಳಜಿ ವಹಿಸಬೇಕು. ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿ ಸ್ಥಳದಲ್ಲಿಯೇ ಇದ್ದು ಕಾಮಗಾರಿಗಳ ನಿರ್ವಹಣೆ ಮಾಡಬೇಕು’ ಎಂದು ತಾಕೀತು ಮಾಡಿದರು.</p>.<p>ಚಿಂಚೋಡಿ ಗ್ರಾಮದಲ್ಲಿ ₹50 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಿದರು.</p>.<p>ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಜಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಾದೇವಯ್ಯ, ಬಿಆರ್ ಸಿ ಶಿವರಾಜ ಪೂಜಾರಿ, ಮುಖಂಡರಾದ ಸಿದ್ದನಗೌಡ ಪಾಟೀಲ, ಗೋವಿಂದ ರಾಜ ನಾಯಕ, ಇಸಾಕ್ ಮೇಸ್ತ್ರಿ, ದಾವುದ್ ಔಂಟಿ, ಪ್ರಭು ದೊರೆ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>