<p><strong>ರಾಯಚೂರು:</strong> ಸಾಹಿತಿ ವೀರಹನುಮಾನ ರಚಿಸಿದ ಧಮ್ಮಪದ ಕೃತಿಯ ಲೋಕಾರ್ಪಣೆ ಸಮಾರಂಭವನ್ನು ಜುಲೈ 7ರಂದು ಬೆಳಿಗ್ಗೆ 11.10ಕ್ಕೆ ಕನ್ನಡ ಭವನದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಸುರಭಿ ಸಾಂಸ್ಕೃತಿಕ ಬಳಗದ ಅಧ್ಯಕ್ಷ ಜಿ.ಸುರೇಶ ಹೇಳಿದರು.</p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರ್ಗಿಯ ಸಿದ್ಧಾರ್ಥ ಬುದ್ಧವಿಹಾರದ ಸಂಘಾನಂದ ಭಂತೇಜಿ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಲಬುರ್ಗಿಯ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಎಚ್.ಟಿ.ಪೋತೆ ಕೃತಿಯ ಲೋಕಾಪರ್ಣೆ ಮಾಡಲಿದ್ದಾರೆ. ಸಾಹಿತಿ ಬಸವಲಿಂಗ ಸೊಪ್ಪಿಮಠ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.</p>.<p>ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಮಾದೇನೂರು ನಿಂಗಪ್ಪ ಕೃತಿಯ ಪರಿಚಯ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಲಬುರಗಿಯ ಶ್ರೀಶೈಲ ನಾಗರಾಳ, ಸಾಹಿತಿ ಮಹಾಂತೇಶ ಮಸ್ಕಿ, ಎಚ್.ಎಚ್.ಮ್ಯಾದಾರ ಭಾಗವಹಿಸಲಿದ್ದು, ವೀರ ಹನುಮಾನ ಅವರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.</p>.<p>ವೀರಹನುಮಾನ ಅವರು ಕಥೆ, ಕವನ, ಹೈಕು ಜೀವನ ಸೇರಿದಂತೆ ವಿವಿಧ ಪ್ರಕಾರದಲ್ಲಿ ಸಾಹಿತ್ಯ ರಚನೆ ಮಾಡಿದ್ದಾರೆ. ಅವರು ಬಹಳಷ್ಟು ಕೃತಿಗಳನ್ನು ಸುರಭಿ ಪ್ರಕಾಶನದಿಂದ ಪ್ರಕಟಿಸಲಾಗಿದ್ದು, ಈ ಕೃತಿಯೂ ಪ್ರಕಟಣೆ ಮಾಡಲಾಗುತ್ತಿದೆ ಎಂದು ವಿವರಿಸಿದರು.</p>.<p>ಜಿ.ಬಸವರಾಜ, ಸೈಯದ್ ಹಫಿಜುಲ್ಲಾ, ಈರಣ್ಣ ಬೆಂಗಾಲಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಸಾಹಿತಿ ವೀರಹನುಮಾನ ರಚಿಸಿದ ಧಮ್ಮಪದ ಕೃತಿಯ ಲೋಕಾರ್ಪಣೆ ಸಮಾರಂಭವನ್ನು ಜುಲೈ 7ರಂದು ಬೆಳಿಗ್ಗೆ 11.10ಕ್ಕೆ ಕನ್ನಡ ಭವನದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಸುರಭಿ ಸಾಂಸ್ಕೃತಿಕ ಬಳಗದ ಅಧ್ಯಕ್ಷ ಜಿ.ಸುರೇಶ ಹೇಳಿದರು.</p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರ್ಗಿಯ ಸಿದ್ಧಾರ್ಥ ಬುದ್ಧವಿಹಾರದ ಸಂಘಾನಂದ ಭಂತೇಜಿ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಲಬುರ್ಗಿಯ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಎಚ್.ಟಿ.ಪೋತೆ ಕೃತಿಯ ಲೋಕಾಪರ್ಣೆ ಮಾಡಲಿದ್ದಾರೆ. ಸಾಹಿತಿ ಬಸವಲಿಂಗ ಸೊಪ್ಪಿಮಠ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.</p>.<p>ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಮಾದೇನೂರು ನಿಂಗಪ್ಪ ಕೃತಿಯ ಪರಿಚಯ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಲಬುರಗಿಯ ಶ್ರೀಶೈಲ ನಾಗರಾಳ, ಸಾಹಿತಿ ಮಹಾಂತೇಶ ಮಸ್ಕಿ, ಎಚ್.ಎಚ್.ಮ್ಯಾದಾರ ಭಾಗವಹಿಸಲಿದ್ದು, ವೀರ ಹನುಮಾನ ಅವರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.</p>.<p>ವೀರಹನುಮಾನ ಅವರು ಕಥೆ, ಕವನ, ಹೈಕು ಜೀವನ ಸೇರಿದಂತೆ ವಿವಿಧ ಪ್ರಕಾರದಲ್ಲಿ ಸಾಹಿತ್ಯ ರಚನೆ ಮಾಡಿದ್ದಾರೆ. ಅವರು ಬಹಳಷ್ಟು ಕೃತಿಗಳನ್ನು ಸುರಭಿ ಪ್ರಕಾಶನದಿಂದ ಪ್ರಕಟಿಸಲಾಗಿದ್ದು, ಈ ಕೃತಿಯೂ ಪ್ರಕಟಣೆ ಮಾಡಲಾಗುತ್ತಿದೆ ಎಂದು ವಿವರಿಸಿದರು.</p>.<p>ಜಿ.ಬಸವರಾಜ, ಸೈಯದ್ ಹಫಿಜುಲ್ಲಾ, ಈರಣ್ಣ ಬೆಂಗಾಲಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>