ನಾರಾಯಣಪೂರ ಜಲಾಶಯದಿಂದ ಕೃಷ್ಣ ನದಿಗೆ ಹೆಚ್ಚುವರಿ ನೀರನ್ನು ಬಿಡುಗಡೆಮಾಡಿದ್ದರಿಂದ ಕೃಷ್ಣ ನದಿತೀರ ಪ್ರಾಂತಗಳು ಜಲಾವೃತಗೊಂಡಿದ್ದು, ಗುರ್ಜಾಪುರದ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ ಎಂದರು.ದೇವದುರ್ಗ ತಾಲ್ಲೂಕಿನ ಚಿಂಚೋಡಿ ಗ್ರಾಮದಲ್ಲಿ ಬಾಲಕ ಸಂತೋಷ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದು, ಬಾಲಕನ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್, ಸಹಾಯಕ ಆಯುಕ್ತ ಸಂತೋಷ, ರಾಯಚೂರು ತಾಲ್ಲೂಕು ತಹಶಿಲ್ದಾರ ಹಂಪಣ್ಣ ಇದ್ದರು.