<p><strong>ಮಾನ್ವಿ:</strong> ತಾಲ್ಲೂಕಿನ ಅಂಗವಿಕಲರ ಕುಂದುಕೊರತೆ ಸಭೆ ನಡೆಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವಿಕಲಚೇತನರ ಆರ್ಪಿಡಿ ಟಾಸ್ಕ್ ಫೋರ್ಸ್ ತಾಲ್ಲೂಕು ಸಮಿತಿ ಪದಾಧಿಕಾರಿಗಳು ಉಪತಹಶೀಲ್ದಾರ್ ವಿನಾಯಕರಾವ ಅವರಿಗೆ ಮನವಿ ಸಲ್ಲಿಸಿದರು.</p>.<p>ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಡಿ. ಜಾಫರ್ ಮಾತನಾಡಿ, ‘ತಾಲ್ಲೂಕಿನಲ್ಲಿರುವ ಅಂಗವಿಕಲರು ಹಾಗೂ ಅವರ ಪೋಷಕರ ಸಮಸ್ಯೆಗಳು, ಶೈಕ್ಷಣಿಕ ಸ್ಥಿತಿಗತಿ, ಆರ್ಥಿಕ, ಆರೋಗ್ಯ, ಸಾಮಾಜಿಕ ಭದ್ರತೆ ಹಾಗೂ ಪುನರ್ವಸತಿಗೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳು ಇವೆ. ಈ ಸಮಸ್ಯೆಗಳ ಪರಿಹಾರ ಹಾಗೂ ಸರ್ಕಾರದ ಸೌಲಭ್ಯಗಳನ್ನು ಅಂಗವಿಕಲರು ಪಡೆಯಲು ಸಾಧ್ಯವಾಗದ ಕುರಿತು ಚರ್ಚಿಸಲು ಶೀಘ್ರದಲ್ಲಿ ತಾಲೂಕ ಮಟ್ಟದ ಅಂಗವಿಕಲರ ಕುಂದುಕೊರತೆ ಸಭೆ ಹಮ್ಮಿಕೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಸಮಿತಿಯ ತಾಲ್ಲೂಕು ಅಧ್ಯಕ್ಷ ಹನುಮೇಶ ಕಾತರಕಿ, ಪ್ರಧಾನ ಕಾರ್ಯದರ್ಶಿ ವೆಂಕಟೇಶ, ಸದಸ್ಯರಾದ ಸತ್ತಪ್ಪಯ್ಯ, ದೊಡ್ಡ ನರಸಪ್ಪ, ನರಸಪ್ಪ ಕಾತರಕಿ, ವೀರೇಶ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ:</strong> ತಾಲ್ಲೂಕಿನ ಅಂಗವಿಕಲರ ಕುಂದುಕೊರತೆ ಸಭೆ ನಡೆಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವಿಕಲಚೇತನರ ಆರ್ಪಿಡಿ ಟಾಸ್ಕ್ ಫೋರ್ಸ್ ತಾಲ್ಲೂಕು ಸಮಿತಿ ಪದಾಧಿಕಾರಿಗಳು ಉಪತಹಶೀಲ್ದಾರ್ ವಿನಾಯಕರಾವ ಅವರಿಗೆ ಮನವಿ ಸಲ್ಲಿಸಿದರು.</p>.<p>ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಡಿ. ಜಾಫರ್ ಮಾತನಾಡಿ, ‘ತಾಲ್ಲೂಕಿನಲ್ಲಿರುವ ಅಂಗವಿಕಲರು ಹಾಗೂ ಅವರ ಪೋಷಕರ ಸಮಸ್ಯೆಗಳು, ಶೈಕ್ಷಣಿಕ ಸ್ಥಿತಿಗತಿ, ಆರ್ಥಿಕ, ಆರೋಗ್ಯ, ಸಾಮಾಜಿಕ ಭದ್ರತೆ ಹಾಗೂ ಪುನರ್ವಸತಿಗೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳು ಇವೆ. ಈ ಸಮಸ್ಯೆಗಳ ಪರಿಹಾರ ಹಾಗೂ ಸರ್ಕಾರದ ಸೌಲಭ್ಯಗಳನ್ನು ಅಂಗವಿಕಲರು ಪಡೆಯಲು ಸಾಧ್ಯವಾಗದ ಕುರಿತು ಚರ್ಚಿಸಲು ಶೀಘ್ರದಲ್ಲಿ ತಾಲೂಕ ಮಟ್ಟದ ಅಂಗವಿಕಲರ ಕುಂದುಕೊರತೆ ಸಭೆ ಹಮ್ಮಿಕೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಸಮಿತಿಯ ತಾಲ್ಲೂಕು ಅಧ್ಯಕ್ಷ ಹನುಮೇಶ ಕಾತರಕಿ, ಪ್ರಧಾನ ಕಾರ್ಯದರ್ಶಿ ವೆಂಕಟೇಶ, ಸದಸ್ಯರಾದ ಸತ್ತಪ್ಪಯ್ಯ, ದೊಡ್ಡ ನರಸಪ್ಪ, ನರಸಪ್ಪ ಕಾತರಕಿ, ವೀರೇಶ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>