ಸೋಮವಾರ ಕ್ವಾರಂಟೈನ್ ಕೇಂದ್ರಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಜತೆ ಮಾತನಾಡಿದ ಕ್ವಾರಂಟೈನ್ಗೆ ಒಳಗಾದ ಯುವಕರು, ಸೋಂಕಿತ ವ್ಯಕ್ತಿಯ ಪ್ರಥಮ ಹಾಗೂ ದ್ವಿತೀಯ ಸಂಪರ್ಕದಲ್ಲಿ 40 ಕ್ಕೂ ಹೆಚ್ಚು ಜನರಿದ್ದಾರೆ. ಆದರೆ, ಎಲ್ಲರನ್ನೂ ಬಿಟ್ಟು ನಮ್ಮನ್ನು ಮಾತ್ರ ಸರ್ಕಾರಿ ಕ್ವಾರಂಟೈನ್ ಮಾಡಲಾಗಿದೆ. ಉಳಿದವರನ್ನು ಹೋಂ ಕ್ವಾರಂಟೈನ್ ಮಾಡುವ ಮೂಲಕ ತಾಲ್ಲೂಕು ಆಡಳಿತ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದರು.