ರಾಯಚೂರು:ನಗರದ ಸಿಂಡಿಕೇಟ್ ಬ್ಯಾಂಕ್ ಮುಖ್ಯಶಾಖೆಯಲ್ಲಿ ಸಣ್ಣ ಹಾಗೂ ಮಧ್ಯಮ ಉದ್ದಿಮೆದಾರರೊಂದಿಗೆ ಶುಕ್ರವಾರ ಸಂವಾದಏರ್ಪಡಿಸಲಾಗಿತ್ತು.
ಉದ್ದಿಮೆದಾರರು ಬ್ಯಾಂಕ್ಗೆ ತಮ್ಮ ಬೇಡಿಕೆಗಳನ್ನು ಸಲ್ಲಿಸಬೇಕು. ಈ ಬೇಡಿಕೆಗಳ ಕುರಿತು ಚರ್ಚಿಸಿದ ಬಳಿಕ ಸಾಲ ಪಡೆದುಕೊಂಡು, ಮರುಪಾವತಿ ಮಾಡಬೇಕು ಎಂದು ಸಲಹೆ ನೀಡಲಾಯಿತು.
ಅತಿ ಕಡಿಮೆ ಬಡ್ಡಿದರದಲ್ಲಿ ಉದ್ದಿಮೆಗಳಿಗೆ ಸಾಲ ಸೌಲಭ್ಯ ದೊರೆಯುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು. 27 ರಂದು ಸಾಲ ಮಂಜೂರಾತಿ ಬಗ್ಗೆ ಪರಿಶೀಲಿಸಿ ತಿಳಿಸಲಾಗುವುದು ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದರು.