ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ಆರತಿ ಮಾತನಾಡಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಕಲಿ ದಾಖಲಾತಿ ಸೃಷ್ಟಿಸಿ ಹಾಗೂ ಅನರ್ಹವಾದ ಕಾರ್ಮಿಕರು ಕಟ್ಟಡ ಕಾರ್ಮಿಕರೆಂದು ನೋಂದಣಿ ಮಾಡಿಸಿಕೊಂಡಿರುವ ಕೆಲವೊಂದು ಪತ್ತೆಯಾಗಿವೆ. ಇದೀಗ ಖುದ್ದಾಗಿ ಗುರುತಿನ ಚೀಟಿ ಹಿಂತಿರುಗಿಸಲು ಅವಕಾಶ ಮಾಡಲಾಗಿದೆ ಎಂದು ಹೇಳಿದರು.