ರಾಯಚೂರು: ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಭಾನುವಾರ ಆಯೋಜಿಸಿದ್ದ ಕೋವಿಡ್–19 ಮುಂಜಾಗ್ರತಾ ಕ್ರಮಗಳ ಪರಿಶೀಲನೆ ಸಭೆಯಲ್ಲಿ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ ಅವರು ಪಾಲ್ಗೊಂಡು ಶಿಷ್ಟಾಚಾರ ಉಲ್ಲಂಘನೆ ಮಾಡಿದರು
ಸಭೆಯ ವೇದಿಕೆಯಲ್ಲಿ ಆಸೀನರಾದರೂ ಯಾರು ಆಕ್ಷೇಪ ವ್ಯಕ್ತಪಡಿಸಲಿಲ್ಲ. ಸಾಮಾಜಿಕ ಅಂತರ ಕಾಪಾಡುವುದಕ್ಕೆ ವೇದಿಕೆಯಲ್ಲಿ ಸ್ಥಳದ ಅಭಾವ ಇತ್ತಾದರೂ, ಪ್ರತಾಪಗೌಡ ಪಾಟೀಲರು ಇತರೆ ಶಾಸಕರೊಂದಿಗೆ ವೇದಿಕೆ ಹಂಚಿಕೊಂಡು ಗಮನ ಸೆಳೆದರು. ಉಸ್ತುವಾರಿ ಸಚಿವರು ಈ ಬಗ್ಗೆ ಮೌನ ವಹಿಸಿದ್ದರು.
ಪ್ರತಾಪಗೌಡ ಪಾಟೀಲ ಮಾತನಾಡಿ, ಮಸ್ಕಿ ಕ್ಷೇತ್ರದಲ್ಲಿ ಫೀವರ್ ಸೆಂಟರ್ ತೆರೆಯಬೇಕು. ಮಾಸ್ಕ್ ವಿತರಿಸಬೇಕು. ತುಂಗಭದ್ರಾ ಎಡದಂಡೆ ನಾಲೆಗೆ ಸಮರ್ಪಕವಾಗಿ ನೀರು ಹರಿಸಲು ಕೋರಿದರು.