ಪುಸ್ತಕ ವಿತರಣೆ ಮಾಡಿದ ಪ್ರಭಾರಿ ಮುಖ್ಯ ಶಿಕ್ಷಕ ಮುರಳೀಧರ ಕುಲಕರ್ಣಿ ಮಾತನಾಡಿ, ಸರ್ಕಾರ ನೀಡಿರುವ ಉಚಿತ ಪುಸ್ತಕಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಉಚಿತ ಪುಸ್ತಕವೆಂದು ಅಸಡ್ಡೆ ತೋರದೆ ಸಂರಕ್ಷಣೆ ಮಾಡಿ, ಶೈಕ್ಷಣಿಕ ವರ್ಷ ಮುಗಿದ ನಂತರ ಶಾಲೆಯ ಗ್ರಂಥಾಲಯಕ್ಕೆ ನೀಡಿ ಸಹಕರಿಸಬೇಕು ಎಂದು ಹೇಳಿದರು.