<p><strong>ರಾಯಚೂರು</strong>: ಗ್ರಾಮೀಣ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 28 ಮೀನುಗಾರರಿಗೆ ಸಲಕರಣೆ ಕಿಟ್, ಲೈಫ್ ಜಾಕೆಟ್ ಹಾಗೂ ಮತ್ಸಾಶ್ರಯ ಯೋಜನೆಯ 25 ಫಲಾನುಭವಿಗಳಿಗೆ ಮನೆಗಳನ್ನು ಮಂಜೂರು ಮಾಡಿದ ಕಾರ್ಯಾದೇಶ ಪತ್ರವನ್ನು ಬುಧವಾರ ಇಲ್ಲಿನ ಶಾಸಕರ ಕಚೇರಿಯಲ್ಲಿ ಶಾಸಕ ಬಸನಗೌಡ ದದ್ದಲ್ ವಿತರಿಸಿದರು.</p>.<p>ನಂತರ ಮಾತನಾಡಿ, ‘ಗ್ರಾಮೀಣ ಕ್ಷೇತ್ರದ ಬಡ ರೈತರು ಹಾಗೂ ಮೀನುಗಾರರು ಸರ್ಕಾರದಿಂದ ನೀಡುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಮೀನುಗಾರಿಕೆ ಸಮಯದಲ್ಲಿ ಲೈಫ್ ಜಾಕೆಟ್ ಧರಿಸಿ ಜಾಗೂರುಕರಾಗಿ ಕೆಲಸ ನಿರ್ವಹಿಸಬೇಕು’ ಎಂದು ಹೇಳಿದರು.</p>.<p>‘ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಗಂಗಾಕಲ್ಯಾಣ ಯೋಜನೆಯಡಿ ಆಯ್ಕೆಯಾದ 31 ಫಲಾನುಭವಿಗಳಿಗೆ ಪಂಪ್ ಮೋಟಾರ್ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ’ ಎಂದರು.</p>.<p>ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಬಸನಗೌಡ, ವಾಲ್ಮೀಕಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪ್ರಕಾಶ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ತಲೆಮಾರಿ, ಕಾಂಗ್ರೆಸ್ ಮುಖಂಡರಾದ ನಾಗೇಂದ್ರಪ್ಪ ಮಟಮಾರಿ, ವಕೀಲ ಮಲ್ಲಿಕಾರ್ಜುನ, ಶ್ರೀನಿವಾಸರೆಡ್ಡಿ, ಸೈಯದ್ಸಾಬ್, ರಾಜಶೇಖರ, ಪಂಪಾಪತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಗ್ರಾಮೀಣ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 28 ಮೀನುಗಾರರಿಗೆ ಸಲಕರಣೆ ಕಿಟ್, ಲೈಫ್ ಜಾಕೆಟ್ ಹಾಗೂ ಮತ್ಸಾಶ್ರಯ ಯೋಜನೆಯ 25 ಫಲಾನುಭವಿಗಳಿಗೆ ಮನೆಗಳನ್ನು ಮಂಜೂರು ಮಾಡಿದ ಕಾರ್ಯಾದೇಶ ಪತ್ರವನ್ನು ಬುಧವಾರ ಇಲ್ಲಿನ ಶಾಸಕರ ಕಚೇರಿಯಲ್ಲಿ ಶಾಸಕ ಬಸನಗೌಡ ದದ್ದಲ್ ವಿತರಿಸಿದರು.</p>.<p>ನಂತರ ಮಾತನಾಡಿ, ‘ಗ್ರಾಮೀಣ ಕ್ಷೇತ್ರದ ಬಡ ರೈತರು ಹಾಗೂ ಮೀನುಗಾರರು ಸರ್ಕಾರದಿಂದ ನೀಡುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಮೀನುಗಾರಿಕೆ ಸಮಯದಲ್ಲಿ ಲೈಫ್ ಜಾಕೆಟ್ ಧರಿಸಿ ಜಾಗೂರುಕರಾಗಿ ಕೆಲಸ ನಿರ್ವಹಿಸಬೇಕು’ ಎಂದು ಹೇಳಿದರು.</p>.<p>‘ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಗಂಗಾಕಲ್ಯಾಣ ಯೋಜನೆಯಡಿ ಆಯ್ಕೆಯಾದ 31 ಫಲಾನುಭವಿಗಳಿಗೆ ಪಂಪ್ ಮೋಟಾರ್ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ’ ಎಂದರು.</p>.<p>ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಬಸನಗೌಡ, ವಾಲ್ಮೀಕಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪ್ರಕಾಶ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ತಲೆಮಾರಿ, ಕಾಂಗ್ರೆಸ್ ಮುಖಂಡರಾದ ನಾಗೇಂದ್ರಪ್ಪ ಮಟಮಾರಿ, ವಕೀಲ ಮಲ್ಲಿಕಾರ್ಜುನ, ಶ್ರೀನಿವಾಸರೆಡ್ಡಿ, ಸೈಯದ್ಸಾಬ್, ರಾಜಶೇಖರ, ಪಂಪಾಪತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>