ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆಗೆ ಕ್ರಮ: ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್

ಕೋವಿಡ್-19 ಎರಡನೇ ಅಲೆ ನಿಯಂತ್ರಣ ಕುರಿತ ಸಭೆ
Last Updated 20 ಏಪ್ರಿಲ್ 2021, 16:34 IST
ಅಕ್ಷರ ಗಾತ್ರ

ರಾಯಚೂರು: ಕೋವಿಡ್-19 ಸೋಂಕಿನ ಎರಡನೇ ಅಲೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಜ್ಜಾಗಿದ್ದು, ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ ಅವರನ್ನು ಗುಣಮುಖರಾಗಿಸಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕೋವಿಡ್-19 ಎರಡನೇ ಅಲೆ ನಿಯಂತ್ರಣ ಕುರಿತ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಒಂದು ವಾರದಿಂದ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಈ ಸಂಖ್ಯೆಗಳಲ್ಲಿ ದ್ವಿಗುಣವಾದಲ್ಲೀ ಮುಂಜಾಗ್ರತಾ ಕ್ರಮವಾಗಿ ನಗರದ ರಿಮ್ಸ್‌ ಒಪೆಕ್ ಆಸ್ಪತ್ರೆಗಳಲ್ಲಿ ರೋಗಿಗಳನ್ನು ಉಪಚರಿಸಲು ಮತ್ತಷ್ಟು ಹಾಸಿಗೆಗಳನ್ನು ಸಿದ್ದಪಡಿಸಿಕಟ್ಟುಕೊಳ್ಳಬೇಕು. ಎರಡೂ ಆಸ್ಪತ್ರೆಗಳಲ್ಲಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ದೊರೆಯಬಹುದಾದ ಬೆಡ್‍ಗಳ ಸಂಖ್ಯೆಯನ್ನು ತಿಳಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಒಪೆಕ್‍ನಲ್ಲಿ ಈಗಾಗಲೇ 150 ಆಕ್ಸಿಜನ್ ಹಾಸಿಗೆಗಳು ಲಭ್ಯವಿವೆ. ಅದರಂತೆ ಅಲ್ಲಿನ ಎರಡನೇ ಮಹಡಿಯಲ್ಲಿ 75 ಹಾಸಿಗೆಗಳನ್ನು ಸಿದ್ದಪಡಿಸಿಕೊಳ್ಳಲು ಅಗತ್ಯವಿದೆ. ಇದಕ್ಕಾಗಿ ಅವಶ್ಯಕತೆಗಳನ್ನು ಕೂಡಲೇ ತಿಳಿಸುವಂತೆ ಒಪೆಕ್ ಆಸ್ಪತ್ರೆಯ ಮುಖ್ಯಸ್ಥ ಡಾ.ನಾಗರಾಜ ಗದ್ವಾಲ್ ಅವರಿಗೆ ಸೂಚಿಸಿದರು.

ರಿಮ್ಸ್‌ ಮೂರನೇ ಮಹಡಿಯಲ್ಲಿ 150 ಹಾಗೂ ಐದನೇ ಮಹಡಿಯಲ್ಲಿ 120 ಹಾಸಿಗೆಗಳ ಸೌಲಭ್ಯ ಕಲ್ಪಿಸಲು ಸಾದ್ಯತೆಗಳಿದ್ದು, ಅದಕ್ಕೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ರಿಮ್ಸ್ ನಿರ್ದೇಶಕ ಡಾ.ಬಸವರಾಜ ಪೀರಾಪುರ ಅವರಿಗೆ ನಿರ್ದೇಶನ ನೀಡಿದರು.

ಕೋವಿಡ್ ಸೋಂಕಿನ ಅತಿ ಗಂಭೀರ ಪ್ರಕರಣಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಂತೆ ಒಪೆಕ್ ಆಸ್ಪತ್ರೆಗೆ ಚಿಕಿತ್ಸೆಗೆ ಕಳುಹಿಸಿಕೊಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿಯೂ ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡುವಂತೆ ಸೂಚಿಸಲಾಗುವುದು. ರೋಗಿಗಳ ಚಿಕಿತ್ಸೆಯಲ್ಲಿ ಅತಿ ಪ್ರಮುಖ ಪಾತ್ರ ವಹಿಸುವ ಆಕ್ಸಿಜನ್ ಸಿಲಿಂಡರ್ ಪೂರೈಕೆಗೆ ಅತಿ ಹೆಚ್ಚಿನ ಗಮನ ನೀಡಬೇಕು. ಆಕ್ಸಿಜನ್ ಸಿಲಿಂಡರ್‌ಗಳು ಸದಾ ತುಂಬಿ ಇರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಕೊರೊನಾ ನಿಯಂತ್ರಿಸುವಲ್ಲಿ ಪ್ರಮುಖವಾಗಿ ರೆಮೆಡಿಸ್‍ವಿಯಾರ್ ಎಂಜಕ್ಷನ್‍ಗೆ ಅತಿ ಹೆಚ್ಚು ಬೇಡಿಕೆಯಿದೆ. ಸರ್ಕಾರಿ ಮಳಿಗೆಗಳಲ್ಲಿ ಕೊರೊನಾ ಔಷಧ ಲಭ್ಯವಿಲ್ಲದಿದ್ದಲ್ಲೀ ಖಾಸಗಿಯಾಗಿ ಖರೀದಿಸಿಟ್ಟುಕೊಳ್ಳಬೇಕು. ಇದಕ್ಕೆ ಹಣಕಾಸಿನ ಸಮಸ್ಯೆಯಿಲ್ಲ ಎಂದರು.

ಪ್ರತಿ ತಾಲ್ಲೂಕು ಆಸ್ಪತ್ರೆಗೆ 50 ಸಿಲಿಂಡರ್ ಆಕ್ಸಿಜನ್ ಪೂರೈಕೆ ಮಾಡಬೇಕು. ಆಂಬುಲೆನ್ಸ್ ಸದಾ ಸಿದ್ದವಾಗಿರಬೇಕು. ಅಗತ್ಯಕ್ಕೆ ತಕ್ಕ ಔಷಧಿಗಳನ್ನು ಖರೀದಿಸಿಟ್ಟುಕೊಳ್ಳಬೇಕು. ಆಸ್ಪತ್ರೆಗಳಲ್ಲಿ ಸ್ಪಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.

ಲಿಂಗಸೂಗೂರು ತಾಲ್ಲೂಕಿನಲ್ಲಿ ಬಾಕಿಯಿರುವ ಆಂಬುಲೆನ್ಸ್ ರಿಪೇರಿ ಕೂಡಲೇ ಆಗಬೇಕು. ಯರಮರಸ್ ಕೋವಿಡ್ ಕೇರ್ ಕೇಂದ್ರಗಳಲ್ಲಿ ದಿನಕ್ಕೆ 10 ರಿಂದ 13 ಜನ ದಾಖಲಾಗುತ್ತಿದ್ದಾರೆ. ಅಲ್ಲಿ ನಗರಸಭೆಯಿಂದ ಸ್ಪಚ್ಛತಾ ಕಾರ್ಯವನ್ನು ನಿರ್ವಹಿಸಬೇಕು. ಅಲ್ಲಿ ಮನೋರಂಜನೆಗಾಗಿ ಟಿವಿ, ಚೆಸ್ ಬೋರ್ಡ್ ಸೇರಿದಂತೆ ಇತರೆ ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು ಎಂದು ಹೇಳಿದರು.

ಕೋವಿಡ್ ಲ್ಯಾಬ್ ಸಿದ್ಧತೆ, ಹೋಂ ಐಸೋಲೇಷನ್ ಮತ್ತು ಕೋವಿಡ್ ದಂಡ ವಿಧಿಸಿದ ಪ್ರಗತಿ ಬಗ್ಗೆ ಸಂಬಂಧಪಟ್ಟ ಅಧಿಕಾರಗಳೊಂದಿಗೆ ಚರ್ಚೆ ನಡೆಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್, ಅಪರ ಜಿಲ್ಲಾಧಿಕಾರಿ ಕೆ.ಎಚ್. ದುರುಗೇಶ್, ಲಿಂಗಸೂಗೂರು ಉಪವಿಭಾಗಾಧಿಕಾರಿ ರಾಜಶೇಖರ ಡಂಬಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ, ರಿಮ್ಸ್ ನಿರ್ದೇಶಕ ಡಾ. ಬಸವರಾಜ ಪೀರಾಪುರ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಸುರೇಂದ್ರ ಬಾಬು, ಆರ್.ಸಿ.ಎಚ್ ಅಧಿಕಾರಿ ಡಾ. ವಿಜಯ ಸೇರಿದಂತೆ ಆರೋಗ್ಯ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT