ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ನಕ್ಸಲ್‌ ಹೋರಾಟಗಾರ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆ

Last Updated 8 ಜನವರಿ 2020, 19:45 IST
ಅಕ್ಷರ ಗಾತ್ರ

ರಾಯಚೂರು: ಶಸ್ತ್ರಾಸ್ತ್ರ ಕಾಯ್ದೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದಮಾಜಿ ನಕ್ಸಲ್‌ ಹೋರಾಟಗಾರ ನರಸಿಂಹಮೂರ್ತಿ ದೊಡ್ಡಿಪಾಳ್ಯ ಬುಧವಾರ ಜಾಮೀನಿನ ಮೇಲೆ ಬಿಡುಗಡೆಗೊಂಡರು.

18 ವರ್ಷಗಳ ಹಿಂದೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಪೊಲೀಸರು ಕಳೆದ ವರ್ಷ ಅಕ್ಟೋಬರ್‌ 24ರಂದು ಇವರನ್ನು ಬಂಧಿಸಿದ್ದರು.ಹೆಚ್ಚುವರಿ ಜೆಎಂಎಫ್‌ಸಿ–3 ನ್ಯಾಯಾಲಯ ಇವರಿಗೆ ಜಾಮೀನು ಮಂಜೂರು ಮಾಡಿತ್ತು.

ಜಿಲ್ಲಾ ಕಾರಾಗೃಹದ ಎದುರು ಸೇರಿದ್ದ ಬೆಂಬಲಿಗರು ಹೂಮಾಲೆ ಹಾಕಿ, ಪ್ರಜಾಪ್ರಭುತ್ವದ ಪರ ಘೋಷಣೆಗಳನ್ನು ಕೂಗಿ ನರಸಿಂದಹಮೂರ್ತಿ ಅವರನ್ನು ಸ್ವಾಗತಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ನರಸಿಂಹಮೂರ್ತಿ, ‘ನನ್ನನ್ನು ಬಂಧಿಸುವ ಮೂಲಕ ಹೋರಾಟದ ದನಿ ಹತ್ತಿಕ್ಕುವ ಪ್ರಯತ್ನ ಮಾಡಲಾಗಿದೆ. ಸಂಘಟಿತ ಅಪರಾಧಿಗಳು ಇಂದು ಸರ್ಕಾರ ನಡೆಸುತ್ತಿದ್ದು, ಈ ರೀತಿ ದಮನಕಾರಿ ಪ್ರಯತ್ನದಿಂದ ಗೆಲ್ಲುವುದಕ್ಕೆ ಸಾಧ್ಯವಿಲ್ಲ. ಬಡವರ ಪರ ಹೋರಾಟ ಮುಂದುವರಿಸುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT