ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು ನೂತನ ಜಿಲ್ಲಾಧಿಕಾರಿ ಡಾ.ಸತೀಶ ಅಧಿಕಾರ ಸ್ವೀಕಾರ

Last Updated 23 ಜುಲೈ 2021, 8:34 IST
ಅಕ್ಷರ ಗಾತ್ರ

ರಾಯಚೂರು: ನೂತನ ಜಿಲ್ಲಾಧಿಕಾರಿಯಾಗಿ ಡಾ.ಸತೀಶ ಬಿ.ಸಿ. ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.

ಆನಂತರ ಮಾತನಾಡಿದ ‌ಅವರು, ‘ಜಿಲ್ಲಾಧಿಕಾರಿಯಾಗಿ ಮೊದಲ ಸಲ ನಿಯೋಜನೆ ಆಗಿರುವುದರಿಂದ ಈಗಲೇ ಏನೇನು ಕೆಲಸ ಮಾಡುತ್ತೇನೆ ಎಂದು ಹೇಳುವುದಿಲ್ಲ. ಆದರೆ, ಸರ್ಕಾರದ ನಿಯಮಾನುಸಾರ ವಹಿಸಿದ ಕೆಲಸವನ್ನು ಶ್ರದ್ಧೆ, ನಿಷ್ಠೆಯಿಂದ ಮಾಡುತ್ತೇನೆ’ ಎಂದರು.

2012 ರ ಬ್ಯಾಚ್ ಕೆಎಎಸ್ ಅಧಿಕಾರಿಯಾಗಿದ್ದು, 2017 ರಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದರು.‌ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆಯುಕ್ತರಾಗಿದ್ದ ಅವರನ್ನು ಮೊದಲಬಾರಿ ಜಿಲ್ಲಾಧಿಕಾರಿ ಹುದ್ದೆಗೆ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಆರ್. ವೆಂಕಟೇಶ ಕುಮಾರ್ ಅವರನ್ನು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT