ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕಗಳಾದರೂ ಬಡತನ, ನಿರುದ್ಯೋಗ, ಸಾಮಾಜಿಕ ಅನ್ಯಾಯ, ಭ್ರಷ್ಟಾಚಾರ, ಕೋಮುವಾದ, ಅಸ್ಪೃಶ್ಯತೆ, ಲಿಂಗ ತಾರತಮ್ಯ ಸೇರಿದಂತೆ ಜ್ವಲಂತ ಮೂಲಸೌಕರ್ಯಗಳ ಕೊರತೆ ಜೀವಂತ ಉಳಿದಿವೆ. ಆಳುವ ವರ್ಗದ ಸರ್ಕಾರಗಳು ಸಂವಿಧಾನದ ಮೂಲ ಆಶಯಗಳನ್ನು ಅಳವಡಿಸಿಕೊಂಡಿದ್ದರೆ ದೇಶದಲ್ಲಿ ಅನೇಕ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತಿತ್ತು. ಅಂಬೇಡ್ಕರ್ ಅವರು ದೈಹಿಕವಾಗಿ ಇಲ್ಲದೆ ಇರಬಹುದು. ಆದರೆ ಅವರು ತಮ್ಮ ಸಿದ್ದಾಂತ, ವಿಚಾರಧಾರೆಗಳ ಮೂಲಕ ನಮ್ಮನ್ನು ಸದಾ ಎಚ್ಚರಿಸುತ್ತಾ ಮಾರ್ಗದರ್ಶನ ಮಾಡುತ್ತಿದ್ದಾರೆಂಬ ಪರಿಕಲ್ಪನೆಯನ್ನು ಯಾರೂ ಮರೆಯಬಾರದು’ ಎಂದು ಹೇಳಿದರು.