ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ಯಾಗದಿಂದ ಜನಸಂಘ ಕಟ್ಟಿದ ಮುಖರ್ಜಿ: ಮಾಜಿ ಶಾಸಕ ಪ್ರತಾಪಗೌಡ ಪಾಟೀಲ

Last Updated 6 ಜುಲೈ 2022, 13:05 IST
ಅಕ್ಷರ ಗಾತ್ರ

ಮಸ್ಕಿ: ‘ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಕಾಂಗ್ರೆಸ್‌ಗೆ ಪರ್ಯಾಯವಾಗಿ ಜನಸಂಘ ಹುಟ್ಟು ಹಾಕಿದರು’ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.

ಪಟ್ಟಣದ ಬಸವೇಶ್ವರ ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ‌ ಜನ್ಮದಿನ ಹಾಗೂ ಡಾ.ಬಾಬು ಜಗಜೀವನರಾಂ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘ಮುಖರ್ಜಿ ಅವರು ತ್ಯಾಗ ಹಾಗೂ ಸಮರ್ಪಣೆಯಿಂದ ಸ್ಥಾಪಿಸಿದ ಜನಸಂಘ ಇಂದು ಭಾರತೀಯ ಜನತಾ ಪಕ್ಷವಾಗಿದೆ. ದೇಶ ಹಾಗೂ ವಿವಿಧ ರಾಜ್ಯಗಳಲ್ಲಿ ಮುಖರ್ಜಿ ಅವರ ಆಶಯದಂತೆ ಆಡಳಿತ ನಡೆಸುತ್ತಿದೆ’ ಎಂದರು.

ಕಾರ್ಯಕರ್ತರು ಸಮರ್ಪಣೆ ಭಾವನೆಯಿಂದ ಪಕ್ಷದ ಕೆಲಸ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದರು.

ಹಿರಿಯ ‌ಮುಖಂಡ ಮಲ್ಲಪ್ಪ ಅಂಕುಶದೊಡ್ಡಿ, ಪಕ್ಷದ ಮುಂಡಲ‌ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ, ಮಹಿಳಾ ಮೋರ್ಚಾದ ಅಧ್ಯಕ್ಷೆ ‌ಪ್ರಮೀಳಾ ದಾಸರ, ಗವಿಸಿದ್ದಪ್ಪ ಸಾಹುಕಾರ, ನಾಗರಾಜ ಯಂಬಲದ, ಜಿ.ವೆಂಕಟೇಶ ನಾಯಕ, ಮೌನೇಶ ಮುರಾರಿ, ಮೌನೇಶ ನಾಯಕ, ಯಮನಪ್ಪ ಭೋವಿ ಸೇರಿ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT