ಕವಿತಾಳ: ‘ಕಿಸಾನ್ ಸಮ್ಮಾನ್, ಆಯುಷ್ಮಾನ್ ಭಾರತ ಮತ್ತು ಸುಕನ್ಯಾ ಸಮೃದ್ದಿ ಸೇರಿದಂತೆ ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳ ಕುರಿತು ಪಕ್ಷದ ಕಾರ್ಯಕರ್ತರು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು’ ಎಂದು ಬಿಜೆಪಿ ಮುಖಂಡ ಚಂದ್ರಕಾಂತ ಪಾಟೀಲ ಗೂಗೆಬಾಳ ಹೇಳಿದರು.
ಸಮೀಪದ ವಟಗಲ್ ಗ್ರಾಮದಲ್ಲಿ ಶನಿವಾರ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಯ ಪರವಾಗಿ ತಳಮಟ್ಟದಲ್ಲಿ ಶ್ರಮಿಸುವ ಪಕ್ಷದ ಕಾರ್ಯಕರ್ತರು ಪಕ್ಷಕ್ಕೆ ಜೀವಾಳವಿದ್ದಂತೆ’ ಎಂದು ಹೇಳಿದರು.