ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಕ್ಕೆ ಕಾರು ಡಿಕ್ಕಿಯಾಗಿ ಹೊತ್ತಿಕೊಂಡ ಬೆಂಕಿ: ಚಾಲಕ ಸಜೀವ ದಹನ

Last Updated 20 ಫೆಬ್ರುವರಿ 2021, 12:13 IST
ಅಕ್ಷರ ಗಾತ್ರ

ರಾಯಚೂರು: ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಕಾರು ಜಮೀನೊಂದಕ್ಕೆ ನುಗ್ಗಿ ಬೆಂಕಿಯಲ್ಲಿ ಬೆಂದುಹೋಗಿದ್ದು, ಅದರಲ್ಲಿದ್ದ ಚಾಲಕ ಸಜೀವ ದಹನವಾದ ಘಟನೆ ರಾಯಚೂರು ತಾಲ್ಲೂಕಿನ ಕಲ್ಮಲಾ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.

ಸಿರವಾರ ತಾಲ್ಲೂಕು ಮಲ್ಲಟ ಗ್ರಾಮದ ಸದಾನಂದಗೌಡ ಮಾಲಿಪಾಟೀಲ (60) ದಹನಗೊಂಡಿದ್ದು, ರಾಯಚೂರಿನತ್ತ ಬರುವಾಗ ಈ ಅನಾಹುತ ಸಂಭವಿಸಿದೆ. ಕೂಡಲೇ ಸ್ಥಳಕ್ಕೆ ಗ್ರಾಮಸ್ಥರು ಧಾವಿಸಿದರೂ ಬೆಂಕಿ ಕೆನ್ನಾಲಿಗೆ ನೋಡಿ ನಿಸ್ಸಹಾಯಕರಾಗಿದ್ದಾರೆ.

ಅಗ್ನಿಶಾಮಕ ದಳದವರು ಧಾವಿಸಿ ಬೆಂಕಿ ಬೇರೆ ಕಡೆಗೆ ಚಾಚಿಕೊಳ್ಳದಂತೆ ನಂದಿಸಿದರು. ಬೆಂಕಿ ಉರಿಯುವ ವಿಡಿಯೋ ವೈರಲ್‌ ಆಗಿದೆ. ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT