ದಲಿತರ ಮೇಲೆ ಹಲ್ಲೆಗಳಂಥ ಘಟನೆಗಳು ನಡೆಯುತ್ತಿದ್ದರೂ ಸರ್ಕಾರ, ಪೊಲೀಸ್ ಇಲಾಖೆ ಮೌನ ವಹಿಸುವ ಮೂಲಕ ಬೇಜವಾಬ್ದಾರಿ ತೋರುತ್ತಿದೆ. ಇಂಥ ಘಟನೆಗಳು ಮರುಕಳಿಸಿದರೆ ರಾಜ್ಯಾದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು. ಸಂಘಟನೆಯ ಜಿಲ್ಲಾ ಘಟಕದ ಗೌರವಾಧ್ಯಕ್ಷ ಮಲ್ಲಯ್ಯ ಬಳ್ಳಾ, ತಾಲ್ಲೂಕು ಸಂಚಾಲಕ ಶರಣಪ್ಪ ಕಟ್ಟಮನಿ, ಮೌನೇಶ ಸುಲ್ತಾನಪೂರ, ಸಿದ್ದು ಮುರಾರಿ, ಸೋಮನಾಥ ಬಸವರಾಜ ಉದ್ಬಾಳ, ದೊಡ್ಡಮೌನೇಶ, ಹುಲಗಪ್ಪ ಬೆಲ್ಲದಮರಡಿ ಸೇರಿದಂತೆ ಪದಾಧಿಕಾರಿಗಳು, ಕಾರ್ಯಕರ್ತರು ಈ ಸಂದರ್ಭದಲ್ಲಿ ಇದ್ದರು.