ವಾಂತಿ-ಭೇದಿ ಪ್ರಕರಣ ಸಂಭವ ಸಾಧ್ಯತೆ?
ಕೆರೆ ಬತ್ತಿ ಪರ್ಯಾಯ ನೀರಿನ ಮೂಲಗಳ ಕೊರತೆಯಿಂದ ಸಮಸ್ಯೆ ಎದುರಿಸುತ್ತಿರುವ ಗ್ರಾಮಸ್ಥರು ಅಲ್ಲಲ್ಲಿ ಫ್ಲೋರೈಡ್ ಲವಣಾಂಶವುಳ್ಳ ನೀರು ಕುಡಿಯುತ್ತಿದ್ದು ವಾಂತಿ–ಭೇದಿ ಪ್ರಕರಣಗಳು ಸಂಭವಿಸುವ ಸಾಧ್ಯತೆ ಇದೆ. ಈಗಾಗಲೇ ಗ್ರಾಮೀಣ ಪ್ರದೇಶದಲ್ಲಿ ಕಲುಷಿತ ನೀರು ಕುಡಿದು ಅನಾರೋಗ್ಯಕ್ಕೀಡಾಗುತ್ತಿರುವ ವರದಿಗಳಿವೆ. ಕೆಲ ಗ್ರಾಮಗಳಲ್ಲಿ ಬೇರೆ ದಾರಿಯಿಲ್ಲದೇ ಜನರು ಹಳ್ಳದ ವರತೆ ನೀರಿಗೆ ಮೊರೆ ಹೋಗಿದ್ದಾರೆ. ಯಾವುದೇ ರೀತಿಯ ಅನಾಹುತಗಳು ಸಂಭವಿಸುವ ಮುಂಚೆ ತಾಲ್ಲೂಕಾಡಳಿತ ಎಚ್ಚೆತ್ತುಕೊಂಡು ಪರ್ಯಾಯ ಮೂಲಗಳಿಂದ ನೀರಿನ ಸೌಕರ್ಯ ಕಲ್ಪಿಸಬೇಕು ಎನ್ನುವುದು ಗ್ರಾಮಸ್ಥರ ಆಗ್ರಹವಾಗಿದೆ.