ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಸಿಂಧನೂರು | ಬರಿದಾದ ಕೆರೆ ಒಡಲು: ದಾಹ ತಣಿಸಲು ಪರದಾಟ

ಕಲುಷಿತ ನೀರು ಸೇವನೆಯಿಂದ ರೋಗ ಭೀತಿ: ವಿವಿಧ ಗ್ರಾಮಗಳಲ್ಲಿ ಉಲ್ಬಣಿಸಿದ ಸಮಸ್ಯೆ
Published : 29 ಫೆಬ್ರುವರಿ 2024, 5:07 IST
Last Updated : 29 ಫೆಬ್ರುವರಿ 2024, 5:07 IST
ಫಾಲೋ ಮಾಡಿ
Comments
ಜಾನುವಾರು, ಪ್ರಾಣಿ–ಪಕ್ಷಿಗಳಿಗೆ ನೀರಿನ ಅಭಾವ ಹೈನುಗಾರಿಕೆಯ ಮೇಲೆ ವ್ಯತಿರಿಕ್ತ ಪರಿಣಾಮ ಕುಸಿದ ಅಂತರ್ಜಲ, ತಾಲೂಕಾಡಳಿತಕ್ಕೆ ಸವಾಲು
ಈಗಾಗಲೇ ಎಲ್ಲ ಗ್ರಾ.ಪಂ ಪಿಡಿಒ ಅಧ್ಯಕ್ಷರುಗಳ ಸಭೆ ನಡೆಸಿ ಕೆರೆಗಳಲ್ಲಿರುವ ನೀರಿನ ಲಭ್ಯತೆ ಕುರಿತು ಮಾಹಿತಿ ಪಡೆಯಲಾಗಿದೆ. ಮಾ.5 ರಿಂದ 12 ರವರೆಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ತುಂಗಭದ್ರಾ ಜಲಾಶಯದಿಂದ ಎಡದಂಡೆ ನಾಲೆಗೆ ನೀರು ಹರಿಸಲಾಗುತ್ತಿದ್ದು ಆಗ ಎಲ್ಲ ಕೆರೆಗಳನ್ನು ಭರ್ತಿ ಮಾಡಿಕೊಳ್ಳುವಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ
ಹಂಪನಗೌಡ ಬಾದರ್ಲಿ ಶಾಸಕ ಸಿಂಧನೂರು
ವಾಂತಿ-ಭೇದಿ ಪ್ರಕರಣ ಸಂಭವ ಸಾಧ್ಯತೆ?
ಕೆರೆ ಬತ್ತಿ ಪರ್ಯಾಯ ನೀರಿನ ಮೂಲಗಳ ಕೊರತೆಯಿಂದ ಸಮಸ್ಯೆ ಎದುರಿಸುತ್ತಿರುವ ಗ್ರಾಮಸ್ಥರು ಅಲ್ಲಲ್ಲಿ ಫ್ಲೋರೈಡ್ ಲವಣಾಂಶವುಳ್ಳ ನೀರು ಕುಡಿಯುತ್ತಿದ್ದು ವಾಂತಿ–ಭೇದಿ ಪ್ರಕರಣಗಳು ಸಂಭವಿಸುವ ಸಾಧ್ಯತೆ ಇದೆ. ಈಗಾಗಲೇ ಗ್ರಾಮೀಣ ಪ್ರದೇಶದಲ್ಲಿ ಕಲುಷಿತ ನೀರು ಕುಡಿದು ಅನಾರೋಗ್ಯಕ್ಕೀಡಾಗುತ್ತಿರುವ ವರದಿಗಳಿವೆ. ಕೆಲ ಗ್ರಾಮಗಳಲ್ಲಿ ಬೇರೆ ದಾರಿಯಿಲ್ಲದೇ ಜನರು ಹಳ್ಳದ ವರತೆ ನೀರಿಗೆ ಮೊರೆ ಹೋಗಿದ್ದಾರೆ. ಯಾವುದೇ ರೀತಿಯ ಅನಾಹುತಗಳು ಸಂಭವಿಸುವ ಮುಂಚೆ ತಾಲ್ಲೂಕಾಡಳಿತ ಎಚ್ಚೆತ್ತುಕೊಂಡು ಪರ್ಯಾಯ ಮೂಲಗಳಿಂದ ನೀರಿನ ಸೌಕರ್ಯ ಕಲ್ಪಿಸಬೇಕು ಎನ್ನುವುದು ಗ್ರಾಮಸ್ಥರ ಆಗ್ರಹವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT