ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ಯೋಜನೆ ಅಡಿಯಲ್ಲಿ ರೈತರ ಮಕ್ಕಳ ಹೆಚ್ಚಿನ ಪ್ರೋತ್ಸಾಹಿಸುವ ಹಾಗೂ ಶಾಲೆ ದೊರೆಯುವುದನ್ನು ತಡೆಯಲು ಇದುವರೆಗೆ 40,487 ವಿದ್ಯಾರ್ಥಿಗಳ ಖಾತೆಗೆ ₹15.40 ಕೋಟಿ ವಿದ್ಯಾರ್ಥಿ ವೇತನವನ್ನು ಜಮಾ ಮಾಡಲಾಗಿದೆ. ರೈತಶಕ್ತಿ ಯೋಜನೆಯಡಿ ರೈತರಿಗೆ ಕೃಷಿ ಯಂತ್ರೋಪಕರಣ ಬಳಿಕೆಯನ್ನು ಪ್ರೋತ್ಸಾಹಿಸುವ ಹಾಗೂ ಇಂಧನ ವೆಚ್ಚ ಭಾರವನ್ನು ಕಡಿಮೆ ಮಾಡಲು ಪ್ರತಿ ಎಕರೆಗೆ 250ಗಳಂತೆ ಗರಿಷ್ಠ ಐದು ಎಕರೆ ಡೀಸೆಲ್ ಸಹಾಯಧನವನ್ನು ನೀಡಲು ರೈತ ಶಕ್ತಿ ಎಂಬ ಹೊಸ ಯೋಜನೆ ಜಾರಿಗೆ ತರಲಾಗಿದ್ದು, ಜಿಲ್ಲೆಯಲ್ಲಿ 2,99,214 ರೈತರಿ ಇಲ್ಲಿವರೆಗೂ 2,77,801 ಶೇ 92.84ರಷ್ಟು ರೈತರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.