<p><strong>ರಾಯಚೂರು:</strong> ‘ಭಾಷೆ ಮತ್ತು ಶಿಕ್ಷಣ ಒಂದು ನಾಣ್ಯದ ಎರಡು ಮುಖಗಳು ಇದ್ದಂತೆ. ಶೈಕ್ಷಣಿಕ ಸಂಸ್ಕಾರ ಎಲ್ಲಿ ಉತ್ತಮವಾಗಿರುತ್ತದೆಯೋ ಅಲ್ಲಿ ಶಿಕ್ಷಣ ಉತ್ತಮವಾಗಿ ಸಾಗುತ್ತದೆ’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಶಿವಯ್ಯ ಹಿರೇಮಠ ಅವರು ಹೇಳಿದರು.</p><p>ನಗರದ ಜೆ ಎಸ್. ಆರ್. ಕೆ. ಶಿಕ್ಷಣ ಮಹಾವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ, ತಾಲ್ಲೂಕು ಕನ್ನಡ ಘಟಕ ಹಾಗೂ ಎಸ್.ಆರ್.ಕೆ. ಶಿಕ್ಷಣ ಮಹಾವಿದ್ಯಾಲಯದ ಸಹಯೋಗದೊಂದಿಗೆ 2025-26ನೇ ಸಾಲಿನ ದತ್ತಿನಿಧಿಗಳಾದ ಲಿಂಗೈಕ್ಯ ಸಾತ್ವೀರಮ್ಮ ಗುರುಲಿಂಗಪ್ಪ ಸಾವಳಗಿ ದತ್ತಿ, ದಿವಂಗತ ಶಿವಮ್ಮ ಶಿವಶರಣಪ್ಪ ಕಳಸ ದತ್ತಿ, ಚನ್ನಪ್ಪ ಸ್ಮಾರಕದತ್ತಿ ಪ್ರಶಸ್ತಿ ಹಾಗೂ ದೊಮಕುಂಟಿ ಹಂಪಮ್ಮ ನಾರಾಯಣಪ್ಪ ದತ್ತಿ ಕಾರ್ಯಕ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p><p>‘ಭಾಷೆಯನ್ನು ಸರಿಯಾಗಿ ಬಳಕೆ ಮಾಡಬೇಕಾದರೆ ಪದಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರತಿನಿತ್ಯ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಆಗ ಭಾಷೆಯನ್ನು ಸಮೃದ್ಧವಾಗಿ ಬಳಸಬಹುದು ಮತ್ತು ಸಾಹಿತ್ಯವನ್ನು ಸರಿಯಾಗಿ ಅರ್ಥಮಾಡಿಕೊಳ್ಳಬಹುದು’ ಎಂದು ಹೇಳಿದರು.</p><p> ದಿವಂಗತ ಶಿವಮ್ಮ ಶಿವಶರಣಪ್ಪ ಕಳಸ ದತ್ತಿಯ ವಿಷಯವಾದ ಪ್ರಸ್ತುತ ಶೈಕ್ಷಣಿಕ ಸಮಸ್ಯೆಗಳು ಮತ್ತು ಪರಿಹಾರ ಕುರಿತು ಉಪನ್ಯಾಸಕ ಎಸ್. ಪ್ಯಾಟೆಪ್ಪ ಮಾತನಾಡಿ, ‘ಪ್ರಸ್ತುತ ದಿನಗಳಲ್ಲಿ ಮಕ್ಕಳಲ್ಲಿ ಆತ್ಮವಿಶ್ವಾಸದ ಕೊರತೆಗೆ ಎದ್ದು ಕಾಣುತ್ತಿದೆ. ಇಂದು ಪಠ್ಯಕ್ರಮ ಜಾತ್ಯತೀತ, ಪ್ರೇರಣಾತ್ಮಕವಾದ ವಿಷಯಗಳನ್ನು ಪಠ್ಯಕ್ರಮದಲ್ಲಿ ಅಳವಡಿಸಿದರೆ ಇನ್ನು ಚೆನ್ನಾಗಿರುತ್ತದೆ. ಉದ್ಯೋಗ ಆಧಾರಿತ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕಿದೆ‘ ಎಂದರು.</p><p>‘‘ಇಂದು ಶಿಕ್ಷಣ ಪಡೆದವರಿಗೆ ಸರಿಯಾದ ವೃತ್ತಿಗಳು ಸಿಗುತ್ತಿಲ್ಲ ಹಾಗಾಗಿ ಕೌಶಲ್ಯ ಆಧಾರಿತ ಶಿಕ್ಷಣಗಳನ್ನು ನೀಡಬೇಕು. ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಎನ್ನುವುದು ವ್ಯಾಪಾರಿಕರಣವಾಗುತ್ತಿದೆ. ನೈತಿಕ ಮೌಲ್ಯಗಳು ಕಡಿಮೆಯಾಗುತ್ತಿವೆ. ಅಕ್ಷರದ ಶಿಕ್ಷಣಕ್ಕಿಂತ ಬದುಕಿನ ಶಿಕ್ಷಣ ನೀಡಬೇಕು‘ ಎಂದು ತಿಳಿಸಿದರು. </p><p>ಇದೇ ಸಂದರ್ಭದಲ್ಲಿ ಶ್ರೀ ಚನ್ನಪ್ಪ ಸ್ಮಾರಕ ದತ್ತಿ ಪ್ರಶಸ್ತಿಯನ್ನು ರಾಯಚೂರು ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವನಪಲ್ಲಿಯ ಸಹ ಶಿಕ್ಷಕಿ ನಾಗವೇಣಿ ಡಿ. ಅವರಿಗೆ ಪ್ರದಾನ ಮಾಡಲಾಯಿತು.</p><p>ಮುಖ್ಯ ಅತಿಥಿಯಾಗಿದ್ದ ಎಸ್. ಆರ್. ಕೆ. ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ವಿರೂಪಾಕ್ಷಿ ಬಿ. ಎಂ. ಮಾತನಾಡಿದರು. </p><p>ದತ್ತಿ ದಾನಿಗಳಾದ ಬಸವರಾಜ ಕಳಸ ಮಾತನಾಡಿ, ‘ಪ್ರಸ್ತುತ ದಿನಮಾನಗಳಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಒತ್ತು ನೀಡಿ ಭಾಷೆಯ ಅಭಿವೃದ್ಧಿಪಡಿಸಬೇಕಾಗಿದೆ. ಪ್ರಸ್ತುತ ಶಿಕ್ಷಣದಲ್ಲಿ ಅನೇಕ ಸಮಸ್ಯೆಗಳು ಎದುರಿಸುತ್ತಿದ್ದು ಅದಕ್ಕೆ ಸರ್ಕಾರ ಹೆಚ್ಚಿನ ಅನುದಾನವನ್ನು ಮೀಸಲಿಟ್ಟು ಶಿಕ್ಷಣಕ್ಕೆ ಒತ್ತು ನೀಡಿ ಶೈಕ್ಷಣಿಕ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ’ ಎಂದರು. </p><p>ದಾನಮ್ಮ ಸುಭಾಷಚಂದ್ರ, ವೈಶಾಲಿ ಪಾಟೀಲ್, ಲಕ್ಷ್ಮಿಕಾಂತ್ ದೋಮಕುಂಟಿ, ಮಲ್ಲಿಕಾರ್ಜುನ ಸ್ವಾಮಿ ಉಪಸ್ಥಿತರಿದ್ದರು. ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಬಿ. ವಿಜಯ ರಾಜೇಂದ್ರ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಲಕ್ಷ್ಮಿದೇವಿ ಶಾಸ್ತ್ರಿ, ದೇವೇಂದ್ರಮ್ಮ, ವಿಜಯಕುಮಾರಿ, ಅನ್ವರ್ ಸಾಬ್ </p><p>ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ರಾವುತರಾವ್ ಬರೂರ ಸ್ವಾಗತಿಸಿದರು. ಪ್ರಶಿಕ್ಷಣಾರ್ಥಿ ಋತು ನಿರೂಪಿಸಿದರು. ಸವಿತಾ ಬಡಿಗೇರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಭಾಷೆ ಮತ್ತು ಶಿಕ್ಷಣ ಒಂದು ನಾಣ್ಯದ ಎರಡು ಮುಖಗಳು ಇದ್ದಂತೆ. ಶೈಕ್ಷಣಿಕ ಸಂಸ್ಕಾರ ಎಲ್ಲಿ ಉತ್ತಮವಾಗಿರುತ್ತದೆಯೋ ಅಲ್ಲಿ ಶಿಕ್ಷಣ ಉತ್ತಮವಾಗಿ ಸಾಗುತ್ತದೆ’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಶಿವಯ್ಯ ಹಿರೇಮಠ ಅವರು ಹೇಳಿದರು.</p><p>ನಗರದ ಜೆ ಎಸ್. ಆರ್. ಕೆ. ಶಿಕ್ಷಣ ಮಹಾವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ, ತಾಲ್ಲೂಕು ಕನ್ನಡ ಘಟಕ ಹಾಗೂ ಎಸ್.ಆರ್.ಕೆ. ಶಿಕ್ಷಣ ಮಹಾವಿದ್ಯಾಲಯದ ಸಹಯೋಗದೊಂದಿಗೆ 2025-26ನೇ ಸಾಲಿನ ದತ್ತಿನಿಧಿಗಳಾದ ಲಿಂಗೈಕ್ಯ ಸಾತ್ವೀರಮ್ಮ ಗುರುಲಿಂಗಪ್ಪ ಸಾವಳಗಿ ದತ್ತಿ, ದಿವಂಗತ ಶಿವಮ್ಮ ಶಿವಶರಣಪ್ಪ ಕಳಸ ದತ್ತಿ, ಚನ್ನಪ್ಪ ಸ್ಮಾರಕದತ್ತಿ ಪ್ರಶಸ್ತಿ ಹಾಗೂ ದೊಮಕುಂಟಿ ಹಂಪಮ್ಮ ನಾರಾಯಣಪ್ಪ ದತ್ತಿ ಕಾರ್ಯಕ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p><p>‘ಭಾಷೆಯನ್ನು ಸರಿಯಾಗಿ ಬಳಕೆ ಮಾಡಬೇಕಾದರೆ ಪದಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರತಿನಿತ್ಯ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಆಗ ಭಾಷೆಯನ್ನು ಸಮೃದ್ಧವಾಗಿ ಬಳಸಬಹುದು ಮತ್ತು ಸಾಹಿತ್ಯವನ್ನು ಸರಿಯಾಗಿ ಅರ್ಥಮಾಡಿಕೊಳ್ಳಬಹುದು’ ಎಂದು ಹೇಳಿದರು.</p><p> ದಿವಂಗತ ಶಿವಮ್ಮ ಶಿವಶರಣಪ್ಪ ಕಳಸ ದತ್ತಿಯ ವಿಷಯವಾದ ಪ್ರಸ್ತುತ ಶೈಕ್ಷಣಿಕ ಸಮಸ್ಯೆಗಳು ಮತ್ತು ಪರಿಹಾರ ಕುರಿತು ಉಪನ್ಯಾಸಕ ಎಸ್. ಪ್ಯಾಟೆಪ್ಪ ಮಾತನಾಡಿ, ‘ಪ್ರಸ್ತುತ ದಿನಗಳಲ್ಲಿ ಮಕ್ಕಳಲ್ಲಿ ಆತ್ಮವಿಶ್ವಾಸದ ಕೊರತೆಗೆ ಎದ್ದು ಕಾಣುತ್ತಿದೆ. ಇಂದು ಪಠ್ಯಕ್ರಮ ಜಾತ್ಯತೀತ, ಪ್ರೇರಣಾತ್ಮಕವಾದ ವಿಷಯಗಳನ್ನು ಪಠ್ಯಕ್ರಮದಲ್ಲಿ ಅಳವಡಿಸಿದರೆ ಇನ್ನು ಚೆನ್ನಾಗಿರುತ್ತದೆ. ಉದ್ಯೋಗ ಆಧಾರಿತ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕಿದೆ‘ ಎಂದರು.</p><p>‘‘ಇಂದು ಶಿಕ್ಷಣ ಪಡೆದವರಿಗೆ ಸರಿಯಾದ ವೃತ್ತಿಗಳು ಸಿಗುತ್ತಿಲ್ಲ ಹಾಗಾಗಿ ಕೌಶಲ್ಯ ಆಧಾರಿತ ಶಿಕ್ಷಣಗಳನ್ನು ನೀಡಬೇಕು. ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಎನ್ನುವುದು ವ್ಯಾಪಾರಿಕರಣವಾಗುತ್ತಿದೆ. ನೈತಿಕ ಮೌಲ್ಯಗಳು ಕಡಿಮೆಯಾಗುತ್ತಿವೆ. ಅಕ್ಷರದ ಶಿಕ್ಷಣಕ್ಕಿಂತ ಬದುಕಿನ ಶಿಕ್ಷಣ ನೀಡಬೇಕು‘ ಎಂದು ತಿಳಿಸಿದರು. </p><p>ಇದೇ ಸಂದರ್ಭದಲ್ಲಿ ಶ್ರೀ ಚನ್ನಪ್ಪ ಸ್ಮಾರಕ ದತ್ತಿ ಪ್ರಶಸ್ತಿಯನ್ನು ರಾಯಚೂರು ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವನಪಲ್ಲಿಯ ಸಹ ಶಿಕ್ಷಕಿ ನಾಗವೇಣಿ ಡಿ. ಅವರಿಗೆ ಪ್ರದಾನ ಮಾಡಲಾಯಿತು.</p><p>ಮುಖ್ಯ ಅತಿಥಿಯಾಗಿದ್ದ ಎಸ್. ಆರ್. ಕೆ. ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ವಿರೂಪಾಕ್ಷಿ ಬಿ. ಎಂ. ಮಾತನಾಡಿದರು. </p><p>ದತ್ತಿ ದಾನಿಗಳಾದ ಬಸವರಾಜ ಕಳಸ ಮಾತನಾಡಿ, ‘ಪ್ರಸ್ತುತ ದಿನಮಾನಗಳಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಒತ್ತು ನೀಡಿ ಭಾಷೆಯ ಅಭಿವೃದ್ಧಿಪಡಿಸಬೇಕಾಗಿದೆ. ಪ್ರಸ್ತುತ ಶಿಕ್ಷಣದಲ್ಲಿ ಅನೇಕ ಸಮಸ್ಯೆಗಳು ಎದುರಿಸುತ್ತಿದ್ದು ಅದಕ್ಕೆ ಸರ್ಕಾರ ಹೆಚ್ಚಿನ ಅನುದಾನವನ್ನು ಮೀಸಲಿಟ್ಟು ಶಿಕ್ಷಣಕ್ಕೆ ಒತ್ತು ನೀಡಿ ಶೈಕ್ಷಣಿಕ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ’ ಎಂದರು. </p><p>ದಾನಮ್ಮ ಸುಭಾಷಚಂದ್ರ, ವೈಶಾಲಿ ಪಾಟೀಲ್, ಲಕ್ಷ್ಮಿಕಾಂತ್ ದೋಮಕುಂಟಿ, ಮಲ್ಲಿಕಾರ್ಜುನ ಸ್ವಾಮಿ ಉಪಸ್ಥಿತರಿದ್ದರು. ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಬಿ. ವಿಜಯ ರಾಜೇಂದ್ರ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಲಕ್ಷ್ಮಿದೇವಿ ಶಾಸ್ತ್ರಿ, ದೇವೇಂದ್ರಮ್ಮ, ವಿಜಯಕುಮಾರಿ, ಅನ್ವರ್ ಸಾಬ್ </p><p>ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ರಾವುತರಾವ್ ಬರೂರ ಸ್ವಾಗತಿಸಿದರು. ಪ್ರಶಿಕ್ಷಣಾರ್ಥಿ ಋತು ನಿರೂಪಿಸಿದರು. ಸವಿತಾ ಬಡಿಗೇರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>