<p><strong>ರಾಯಚೂರು:</strong> ಸಮಾಜದಲ್ಲಿ ಬದುಕಲು ಶಿಕ್ಷಣಕ್ಕೆ ಒತ್ತು ನೀಡುವುದು ಅಗತ್ಯವಾಗಿದ್ದು, ಶೈಕ್ಷಣಿಕವಾಗಿ ಹಿಂದುಳಿದಿರುವ ಉಪ್ಪಾರ ಸಮಾಜದವರು ಶಿಕ್ಷಣಕ್ಕೆ ಒತ್ತು ನೀಡಿ ಬೆಳವಣಿಗೆ ಹೊಂದಬೇಕು ಎಂದು ದೇವದುರ್ಗ ತಾಲ್ಲೂಕಿನ ಮಲದಕಲ್ ನಿಜಾನಂದ ಯೋಗಾಶ್ರಮದ ಗುರುಬಸವ ರಾಜಗುರು ಹೇಳಿದರು.</p>.<p>ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶನಿವಾರ ಹಮ್ಮಿಕೊಂಡಿದ್ದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.</p>.<p>ರಾಜ್ಯದಲ್ಲಿ 45 ಲಕ್ಷ ಜನಸಂಖ್ಯೆ ಹೊಂದಿರುವ ಉಪ್ಪಾರ ಸಮಾಜದಲ್ಲಿ ಸಂಘಟನೆಯ ಕೊರತೆಯಿದೆ. ಜೀವನದಲ್ಲಿ ಅಸಾಧ್ಯವಾದುದು ಯಾವುದೂ ಇಲ್ಲ. ಸಮಾಜದವರು ಸಂಘಟಿತರಾಗಿ ಅಭಿವದ್ಧಿಯೆಡೆಗೆ ಹೆಜ್ಜೆ ಹಾಕಬೇಕು ಎಂದರು.</p>.<p>ಭಗೀರಥ ಮಹರ್ಷಿ 32 ವರ್ಷಗಳ ಕಾಲ ರಾಜ್ಯವಾಳಿದ್ದಾರೆ ಎಂಬ ಉಲ್ಲೇಖವಿದ್ದು, ಅವರ ಆಚಾರ, ವಿಚಾರ ಹಾಗೂ ತತ್ವ ಅಜರಾಮರವಾಗಿದೆ. ಸರ್ಕಾರದಿಂದ 5ನೇ ವರ್ಷದ ಜಯಂತಿ ಕಾರ್ಯಕ್ರಮ ಆಚರಣೆ ಮಾಡುತ್ತಿರುವುದು ಶ್ಲಾಘನೀಯವಾಗಿದೆ. ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸದಿರುವುದು ಬೇಸರದ ಸಂಗತಿಯಾಗಿದೆ. ಈ ಜಯಂತಿ ಹಳ್ಳಿ ಹಳ್ಳಿಗಳಿಗೆ ವಿಸ್ತಾರವಾಗಲಿ ಎಂದು ತಿಳಿಸಿದರು.</p>.<p>ಯಾವ ವ್ಯಕ್ತಿ ಅವಮಾನ ಸಹಿಸಿಕೊಂಡು ಕಾರ್ಯನಿರ್ವಹಿಸುತ್ತಾನೊ ಅವನು ಒಂದಲ್ಲ ಒಂದು ದಿನ ಸನ್ಮಾನ ಮಾಡಿಸಿಕೊಳ್ಳುತ್ತಾನೆ. ಕಾಯಕದಲ್ಲಿ ತೃಪ್ತಿ ಇರಬೇಕು. ಆತ್ಮತೃಪ್ತಿಗಾಗಿ ಕೆಲಸ ಮಾಡಿದ ವ್ಯಕ್ತಿ ಮಹಾತ್ಮನಾಗುತ್ತಾನೆ ಎಂದರು.</p>.<p>ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷ ವೆಂಕೋಬ ಉಪ್ಪಾರ, ಪ್ರಧಾನ ಕಾರ್ಯದರ್ಶಿ ಗಟ್ಟು ಶ್ರೀನಿವಾಸ, ಮಹಿಳಾ ಅಧ್ಯಕ್ಷೆ ಪಿ.ಸುರೇಖಾ, ಜೂಕುರು ಶ್ರೀನಿವಾಸ, ರೊಟ್ಲ್ ಶ್ರೀನಿವಾಸ, ಬಿ.ಗೀರಣ್ಣ, ಮಿರ್ಜಾಪೂರ ಪಾಗುಂಟಪ್ಪ, ಎಲ್.ಬಿ.ಅಗ್ನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಸಮಾಜದಲ್ಲಿ ಬದುಕಲು ಶಿಕ್ಷಣಕ್ಕೆ ಒತ್ತು ನೀಡುವುದು ಅಗತ್ಯವಾಗಿದ್ದು, ಶೈಕ್ಷಣಿಕವಾಗಿ ಹಿಂದುಳಿದಿರುವ ಉಪ್ಪಾರ ಸಮಾಜದವರು ಶಿಕ್ಷಣಕ್ಕೆ ಒತ್ತು ನೀಡಿ ಬೆಳವಣಿಗೆ ಹೊಂದಬೇಕು ಎಂದು ದೇವದುರ್ಗ ತಾಲ್ಲೂಕಿನ ಮಲದಕಲ್ ನಿಜಾನಂದ ಯೋಗಾಶ್ರಮದ ಗುರುಬಸವ ರಾಜಗುರು ಹೇಳಿದರು.</p>.<p>ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶನಿವಾರ ಹಮ್ಮಿಕೊಂಡಿದ್ದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.</p>.<p>ರಾಜ್ಯದಲ್ಲಿ 45 ಲಕ್ಷ ಜನಸಂಖ್ಯೆ ಹೊಂದಿರುವ ಉಪ್ಪಾರ ಸಮಾಜದಲ್ಲಿ ಸಂಘಟನೆಯ ಕೊರತೆಯಿದೆ. ಜೀವನದಲ್ಲಿ ಅಸಾಧ್ಯವಾದುದು ಯಾವುದೂ ಇಲ್ಲ. ಸಮಾಜದವರು ಸಂಘಟಿತರಾಗಿ ಅಭಿವದ್ಧಿಯೆಡೆಗೆ ಹೆಜ್ಜೆ ಹಾಕಬೇಕು ಎಂದರು.</p>.<p>ಭಗೀರಥ ಮಹರ್ಷಿ 32 ವರ್ಷಗಳ ಕಾಲ ರಾಜ್ಯವಾಳಿದ್ದಾರೆ ಎಂಬ ಉಲ್ಲೇಖವಿದ್ದು, ಅವರ ಆಚಾರ, ವಿಚಾರ ಹಾಗೂ ತತ್ವ ಅಜರಾಮರವಾಗಿದೆ. ಸರ್ಕಾರದಿಂದ 5ನೇ ವರ್ಷದ ಜಯಂತಿ ಕಾರ್ಯಕ್ರಮ ಆಚರಣೆ ಮಾಡುತ್ತಿರುವುದು ಶ್ಲಾಘನೀಯವಾಗಿದೆ. ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸದಿರುವುದು ಬೇಸರದ ಸಂಗತಿಯಾಗಿದೆ. ಈ ಜಯಂತಿ ಹಳ್ಳಿ ಹಳ್ಳಿಗಳಿಗೆ ವಿಸ್ತಾರವಾಗಲಿ ಎಂದು ತಿಳಿಸಿದರು.</p>.<p>ಯಾವ ವ್ಯಕ್ತಿ ಅವಮಾನ ಸಹಿಸಿಕೊಂಡು ಕಾರ್ಯನಿರ್ವಹಿಸುತ್ತಾನೊ ಅವನು ಒಂದಲ್ಲ ಒಂದು ದಿನ ಸನ್ಮಾನ ಮಾಡಿಸಿಕೊಳ್ಳುತ್ತಾನೆ. ಕಾಯಕದಲ್ಲಿ ತೃಪ್ತಿ ಇರಬೇಕು. ಆತ್ಮತೃಪ್ತಿಗಾಗಿ ಕೆಲಸ ಮಾಡಿದ ವ್ಯಕ್ತಿ ಮಹಾತ್ಮನಾಗುತ್ತಾನೆ ಎಂದರು.</p>.<p>ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷ ವೆಂಕೋಬ ಉಪ್ಪಾರ, ಪ್ರಧಾನ ಕಾರ್ಯದರ್ಶಿ ಗಟ್ಟು ಶ್ರೀನಿವಾಸ, ಮಹಿಳಾ ಅಧ್ಯಕ್ಷೆ ಪಿ.ಸುರೇಖಾ, ಜೂಕುರು ಶ್ರೀನಿವಾಸ, ರೊಟ್ಲ್ ಶ್ರೀನಿವಾಸ, ಬಿ.ಗೀರಣ್ಣ, ಮಿರ್ಜಾಪೂರ ಪಾಗುಂಟಪ್ಪ, ಎಲ್.ಬಿ.ಅಗ್ನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>