<p><strong>ರಾಯಚೂರು:</strong> ‘ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಹಾಗೂ ಪರೀಕ್ಷಾ ಫಲಿತಾಂಶದಲ್ಲಿ ಸುಧಾರಣೆ ತರುವ ದಿಸೆಯಲ್ಲಿ ಮುಖ್ಯ ಶಿಕ್ಷಕರು ಕೆಲವು ಯೋಜನೆಗಳನ್ನು ರೂಪಿಸಿಕೊಳ್ಳಬೇಕು’ ಎಂದು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ ಸಲಹೆ ನೀಡಿದರು.</p><p>ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕಾರಿಗಳು ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಶೇ 40ಕ್ಕಿಂತ ಕಡಿಮೆ ಸಾಧನೆ ಮಾಡಿದ 62 ಶಾಲೆಗಳ ಮುಖ್ಯ ಶಿಕ್ಷಕರೊಂದಿಗೆ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.</p><p>‘ಶಾಲೆಯಿಂದ ಹೊರಗುಳಿದವರ ವರದಿ ಮತ್ತು ಪ್ರತಿ ಶಾಲೆಯಲ್ಲಿನ ಮೂಲ ಸೌಲಭ್ಯಗಳು ಮತ್ತು ಅಸ್ತಿತ್ವದಲ್ಲಿರುವ ನ್ಯೂನತೆಗಳ ಪಟ್ಟಿ ಮಾಡಬೇಕು. ಅದನ್ನು ಶಿಕ್ಷಣ ಇಲಾಖೆ ಆಯುಕ್ತರಿಗೆ ಸಲ್ಲಿಸಬೇಕು’ ಎಂದು ಹೇಳಿದರು.</p><p>‘ಎರಡು ವಾರಗಳ ನಂತರ ನಿಗದಿಪಡಿಸಲಾಗುವ ಮುಂದಿನ ಸಭೆಗೆ ಅಗತ್ಯವಿರುವ ಎಲ್ಲ ಮಾಹಿತಿಯೊಂದಿಗೆ ಮುಖ್ಯೋಪಾಧ್ಯಾಯರು ಸಭೆಗೆ ಹಾಜರಾಗಬೇಕು’ ಎಂದು ಸೂಚಿಸಿದರು.</p><p>‘ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸಲು ಜಿಲ್ಲಾಧಿಕಾರಿ ಅವರು ಈ ಹಿಂದೆ ವಿವಿಧ ಸಮಿತಿಗಳನ್ನು ರಚಿಸಿದ್ದರು. ನಗರಕ್ಕೆ ಮಹಾನಗರಪಾಲಿಕೆ ಆಯುಕ್ತರ ನೇತೃತ್ವದಲ್ಲಿಐವರು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ’ ಎಂದು ತಿಳಿಸಿದರು.</p><p>‘ಕಳಪೆ ಸಾಧನೆ ತೋರಿರುವ ಶಾಲೆಗಳಿಗೆ ನಗರ ಮಟ್ಟದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಇದೇ ರೀತಿಯ ಉಪ ಸಮಿತಿಗಳನ್ನು ರಚಿಸಲಾಗುವುದು’ ಎಂದು ತಿಳಿಸಿದರು.</p><p>‘ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಕೇವಲ ಅಂಕಗಣಿತದ ಸಂಖ್ಯೆಯಲ್ಲ; ಇದು ಭವಿಷ್ಯದ ಕೌಶಲಪೂರ್ಣ, ಬೌದ್ಧಿಕವಾಗಿ ಪ್ರತಿಭಾನ್ವಿತ ಮತ್ತು ಸಮರ್ಥ ಮಾನವ ಸಂಪನ್ಮೂಲಗಳ ಅಸ್ತಿತ್ವಕ್ಕೆ ಅಡಿಪಾಯವಾಗಿದೆ. ಉತ್ತಮ ಶಿಕ್ಷಣವು ರಾಷ್ಟ್ರ ಮತ್ತು ನಗರಕ್ಕೆ ಬಲವಾದ ಮಾನವ ಬಂಡವಾಳವನ್ನು ನಿರ್ಮಿಸಲು ಅಡಿಪಾಯವಾಗಿದೆ’ ಎಂದರು.</p><p>‘ಶಿಕ್ಷಕರು ವಿದ್ಯಾರ್ಥಿಗಳ ಹಾಜರಾತಿಯ ಮೇಲೆ ನಿಗಾ ಇಡಬೇಕು. ಕಲಿಕೆ ಮಟ್ಟವನ್ಕು ಗ್ರಹಿಸಬೇಕು. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ವಿಶೇಷ ಮಾರ್ಗದರ್ಶನ ನೀಡುವ ಕೆಲಸವಾಗಬೇಕು. ಈ ಕ್ರಮವು ಜಿಲ್ಲೆಯ ಶೈಕ್ಷಣಿಕ ನೆಲೆಯನ್ನು ಬಲಪಡಿಸುವ ಮತ್ತು ವಿದ್ಯಾರ್ಥಿಗಳ ಜೀವನಕ್ಕೆ ಹೊಸ ದಿಕ್ಕನ್ನು ನೀಡುವ ನಿರೀಕ್ಷೆಯಿದೆ’ ಎಂದು ತಿಳಿಸಿದರು.</p><p>ತಹಶೀಲ್ದಾರ್ ಸುರೇಶ ವರ್ಮಾ ಹಾಗೂ ಮಹಾನಗರಪಾಲಿಕೆ ಉಪ ಆಯುಕ್ತೆ ಸಂತೋಷರಾಣಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.</p>.<p><strong>ಶೇ40ಕ್ಕಿಂತ ಕಡಿಮೆ ಸಾಧನೆ ಮಾಡಿದ ಮುಖ್ಯ ಶಿಕ್ಷಕರೊಂದಿಗೆ ಸಭೆ</strong></p><p><strong>ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಅಂಕಗಣಿತದ ಸಂಖ್ಯೆಯಲ್ಲ</strong></p><p><strong>ಶಿಕ್ಷಕರು ವಿದ್ಯಾರ್ಥಿಗಳ ಹಾಜರಾತಿಯ ಮೇಲೆ ನಿಗಾ ಇಡಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಹಾಗೂ ಪರೀಕ್ಷಾ ಫಲಿತಾಂಶದಲ್ಲಿ ಸುಧಾರಣೆ ತರುವ ದಿಸೆಯಲ್ಲಿ ಮುಖ್ಯ ಶಿಕ್ಷಕರು ಕೆಲವು ಯೋಜನೆಗಳನ್ನು ರೂಪಿಸಿಕೊಳ್ಳಬೇಕು’ ಎಂದು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ ಸಲಹೆ ನೀಡಿದರು.</p><p>ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕಾರಿಗಳು ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಶೇ 40ಕ್ಕಿಂತ ಕಡಿಮೆ ಸಾಧನೆ ಮಾಡಿದ 62 ಶಾಲೆಗಳ ಮುಖ್ಯ ಶಿಕ್ಷಕರೊಂದಿಗೆ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.</p><p>‘ಶಾಲೆಯಿಂದ ಹೊರಗುಳಿದವರ ವರದಿ ಮತ್ತು ಪ್ರತಿ ಶಾಲೆಯಲ್ಲಿನ ಮೂಲ ಸೌಲಭ್ಯಗಳು ಮತ್ತು ಅಸ್ತಿತ್ವದಲ್ಲಿರುವ ನ್ಯೂನತೆಗಳ ಪಟ್ಟಿ ಮಾಡಬೇಕು. ಅದನ್ನು ಶಿಕ್ಷಣ ಇಲಾಖೆ ಆಯುಕ್ತರಿಗೆ ಸಲ್ಲಿಸಬೇಕು’ ಎಂದು ಹೇಳಿದರು.</p><p>‘ಎರಡು ವಾರಗಳ ನಂತರ ನಿಗದಿಪಡಿಸಲಾಗುವ ಮುಂದಿನ ಸಭೆಗೆ ಅಗತ್ಯವಿರುವ ಎಲ್ಲ ಮಾಹಿತಿಯೊಂದಿಗೆ ಮುಖ್ಯೋಪಾಧ್ಯಾಯರು ಸಭೆಗೆ ಹಾಜರಾಗಬೇಕು’ ಎಂದು ಸೂಚಿಸಿದರು.</p><p>‘ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸಲು ಜಿಲ್ಲಾಧಿಕಾರಿ ಅವರು ಈ ಹಿಂದೆ ವಿವಿಧ ಸಮಿತಿಗಳನ್ನು ರಚಿಸಿದ್ದರು. ನಗರಕ್ಕೆ ಮಹಾನಗರಪಾಲಿಕೆ ಆಯುಕ್ತರ ನೇತೃತ್ವದಲ್ಲಿಐವರು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ’ ಎಂದು ತಿಳಿಸಿದರು.</p><p>‘ಕಳಪೆ ಸಾಧನೆ ತೋರಿರುವ ಶಾಲೆಗಳಿಗೆ ನಗರ ಮಟ್ಟದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಇದೇ ರೀತಿಯ ಉಪ ಸಮಿತಿಗಳನ್ನು ರಚಿಸಲಾಗುವುದು’ ಎಂದು ತಿಳಿಸಿದರು.</p><p>‘ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಕೇವಲ ಅಂಕಗಣಿತದ ಸಂಖ್ಯೆಯಲ್ಲ; ಇದು ಭವಿಷ್ಯದ ಕೌಶಲಪೂರ್ಣ, ಬೌದ್ಧಿಕವಾಗಿ ಪ್ರತಿಭಾನ್ವಿತ ಮತ್ತು ಸಮರ್ಥ ಮಾನವ ಸಂಪನ್ಮೂಲಗಳ ಅಸ್ತಿತ್ವಕ್ಕೆ ಅಡಿಪಾಯವಾಗಿದೆ. ಉತ್ತಮ ಶಿಕ್ಷಣವು ರಾಷ್ಟ್ರ ಮತ್ತು ನಗರಕ್ಕೆ ಬಲವಾದ ಮಾನವ ಬಂಡವಾಳವನ್ನು ನಿರ್ಮಿಸಲು ಅಡಿಪಾಯವಾಗಿದೆ’ ಎಂದರು.</p><p>‘ಶಿಕ್ಷಕರು ವಿದ್ಯಾರ್ಥಿಗಳ ಹಾಜರಾತಿಯ ಮೇಲೆ ನಿಗಾ ಇಡಬೇಕು. ಕಲಿಕೆ ಮಟ್ಟವನ್ಕು ಗ್ರಹಿಸಬೇಕು. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ವಿಶೇಷ ಮಾರ್ಗದರ್ಶನ ನೀಡುವ ಕೆಲಸವಾಗಬೇಕು. ಈ ಕ್ರಮವು ಜಿಲ್ಲೆಯ ಶೈಕ್ಷಣಿಕ ನೆಲೆಯನ್ನು ಬಲಪಡಿಸುವ ಮತ್ತು ವಿದ್ಯಾರ್ಥಿಗಳ ಜೀವನಕ್ಕೆ ಹೊಸ ದಿಕ್ಕನ್ನು ನೀಡುವ ನಿರೀಕ್ಷೆಯಿದೆ’ ಎಂದು ತಿಳಿಸಿದರು.</p><p>ತಹಶೀಲ್ದಾರ್ ಸುರೇಶ ವರ್ಮಾ ಹಾಗೂ ಮಹಾನಗರಪಾಲಿಕೆ ಉಪ ಆಯುಕ್ತೆ ಸಂತೋಷರಾಣಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.</p>.<p><strong>ಶೇ40ಕ್ಕಿಂತ ಕಡಿಮೆ ಸಾಧನೆ ಮಾಡಿದ ಮುಖ್ಯ ಶಿಕ್ಷಕರೊಂದಿಗೆ ಸಭೆ</strong></p><p><strong>ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಅಂಕಗಣಿತದ ಸಂಖ್ಯೆಯಲ್ಲ</strong></p><p><strong>ಶಿಕ್ಷಕರು ವಿದ್ಯಾರ್ಥಿಗಳ ಹಾಜರಾತಿಯ ಮೇಲೆ ನಿಗಾ ಇಡಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>