<p><strong>ರಾಯಚೂರು:</strong> ಸಾಮಾಜಿಕ ಚಿಂತನೆಗೆ ಶಿಕ್ಷಣ ಅತ್ಯಂತ ಅವಶ್ಯಕವಾಗಿದ್ದು, ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಾರಿದ ಮಹಾನ್ ವ್ಯಕ್ತಿಗಳಲ್ಲಿ ಬಾಬು ಜಗಜೀವನರಾಮ್ ಕೂಡ ಒಬ್ಬರಾಗಿದ್ದಾರೆ ಎಂದು ಫರಹತಾಬಾದ್ ಸರ್ಕಾರಿ ಕಾಲೇಜು, ಸ್ನಾತಕೋತ್ತರ ಕೇಂದ್ರದ ಮುಖ್ಯಸ್ಥ ಶರಣಪ್ಪ ಎಸ್.ಮಾಳಗಿ ಹೇಳಿದರು.</p>.<p>ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಬಾಬು ಜಗಜೀವನರಾಮ್ 112ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸಮಾಜದ ಪರವಾಗಿ ಕಾಳಜಿಯೊಂದಿಗೆ ದೇಶದ ಉದ್ಧಾರ, ಮನುಕುಲ ಹಾಗೂ ದಲಿತರಿಗಾಗಿ ಹಗಲಿರಳು ಹೋರಾಡಿದ ಕೀರ್ತಿ ಬಾಬು ಜಗಜೀವನರಾಮ್ ಅವರಿಗೆ ಸಲ್ಲುತ್ತದೆ. ಅವರು ವ್ಯಕ್ತಿ ಮಾತ್ರವಲ್ಲದೇ ಒಂದು ಶಕ್ತಿಯಾಗಿದ್ದರು ಎಂದರು.</p>.<p>ಜಾತಿಯತೆ ಸಮಾಜದ ಕುಂಠಿತಕ್ಕೆ ಪೂರಕವಾಗಿದ್ದು, ಭಾವಕ್ಯತೆಯನ್ನು ಹಾಳು ಮಾಡುತ್ತದೆ. ಇದರ ಪರಿಣಾಮದಿಂದ ಸಮೃದ್ಧ ರಾಷ್ಟ್ರ ನಿರ್ಮಾಣವಾಗದು. ವರ್ಗ, ಜಾತಿ, ತಾರತಮ್ಯವನ್ನು ನಿವಾರಿಸುವಂತಹ ಶಿಕ್ಷಣ ಅಗತ್ಯವಾಗಿದೆ. ದುಶ್ಚಟಗಳಿಂದ ದೂರವಿದ್ದು, ಶಾಂತಿಯಿಂದ ಕ್ರಾಂತಿ ಮಾಡಲು ಸಾಧ್ಯವಾಗಲಿದೆ ಎಂದು ತಿಳಿಸಿದರು.</p>.<p>ಬಸವಣ್ಣ, ಬಾಬು ಜಗಜೀವನರಾಮ್, ಅಂಬೇಡ್ಕರ್, ಕಬೀರದಾಸ್, ಕನಕದಾಸ ಸೇರಿದಂತೆ ಇನ್ನಿತರ ಮಹನೀಯರ ಜಯಂತಿ ಆಚರಣೆ ಮಾಡುವುದರ ಜೊತೆಗೆ ಅವರ ಇತಿಹಾಸ ಹಾಗೂ ಅವರ ಬಗೆಗಿನ ಗ್ರಂಥಗಳನ್ನು ತೆರೆದ ಮನಸ್ಸಿನಿಂದ ನೋಡಬೇಕಾಗಿದೆ ಎಂದರು.</p>.<p>ಹಲವು ಚಿಂತಕರು ಬಾಬು ಜಗಜೀವನರಾಮ್ ಕುರಿತು ಗ್ರಂಥಗಳನ್ನು ರಚಿಸಿದ್ದಾರೆ. ಮಹನೀಯರ ಬಗ್ಗೆ ಪುಸ್ತಕಗಳನ್ನು ಓದಿ ತಿಳಿದುಕೊಳ್ಳುವುದು ಆಧುನಿಕ ಯುಗದಲ್ಲಿ ಬಹಳ ಕಡಿಮೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಲಿನ್ ಅತುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಕಿಶೋರಬಾಬು ಹಾಗೂ ಇತರರು ಇದ್ದರು.</p>.<p class="Subhead"><strong>ಮೆರವಣಿಗೆ:</strong></p>.<p>ನಗರದ ಸ್ಟೇಷನ್ ವೃತ್ತದಲ್ಲಿ ಬಾಬು ಜಗಜೀವನರಾಮ್ ಪುತ್ಥಳಿಗೆ ಮಾಲಾರ್ಪಣೆಯ ನಂತರ ನಡೆದ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾಧಿಕಾರಿ ಬಿ.ಶರತ್ ಚಾಲನೆ ನೀಡಿದರು. ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದವರೆಗೆ ಮೆರವಣಿಗೆ ನಡೆಯಿತು.</p>.<p>ಉಪ ವಿಭಾಗಾಧಿಕಾರಿ ಶಿಲ್ಪಾ ಶರ್ಮಾ, ಪೌರಾಯುಕ್ತ ರಮೇಶ ನಾಯಕ, ಅಧಿಕಾರಿಗಳು ಹಾಗೂ ಜನರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಸಾಮಾಜಿಕ ಚಿಂತನೆಗೆ ಶಿಕ್ಷಣ ಅತ್ಯಂತ ಅವಶ್ಯಕವಾಗಿದ್ದು, ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಾರಿದ ಮಹಾನ್ ವ್ಯಕ್ತಿಗಳಲ್ಲಿ ಬಾಬು ಜಗಜೀವನರಾಮ್ ಕೂಡ ಒಬ್ಬರಾಗಿದ್ದಾರೆ ಎಂದು ಫರಹತಾಬಾದ್ ಸರ್ಕಾರಿ ಕಾಲೇಜು, ಸ್ನಾತಕೋತ್ತರ ಕೇಂದ್ರದ ಮುಖ್ಯಸ್ಥ ಶರಣಪ್ಪ ಎಸ್.ಮಾಳಗಿ ಹೇಳಿದರು.</p>.<p>ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಬಾಬು ಜಗಜೀವನರಾಮ್ 112ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸಮಾಜದ ಪರವಾಗಿ ಕಾಳಜಿಯೊಂದಿಗೆ ದೇಶದ ಉದ್ಧಾರ, ಮನುಕುಲ ಹಾಗೂ ದಲಿತರಿಗಾಗಿ ಹಗಲಿರಳು ಹೋರಾಡಿದ ಕೀರ್ತಿ ಬಾಬು ಜಗಜೀವನರಾಮ್ ಅವರಿಗೆ ಸಲ್ಲುತ್ತದೆ. ಅವರು ವ್ಯಕ್ತಿ ಮಾತ್ರವಲ್ಲದೇ ಒಂದು ಶಕ್ತಿಯಾಗಿದ್ದರು ಎಂದರು.</p>.<p>ಜಾತಿಯತೆ ಸಮಾಜದ ಕುಂಠಿತಕ್ಕೆ ಪೂರಕವಾಗಿದ್ದು, ಭಾವಕ್ಯತೆಯನ್ನು ಹಾಳು ಮಾಡುತ್ತದೆ. ಇದರ ಪರಿಣಾಮದಿಂದ ಸಮೃದ್ಧ ರಾಷ್ಟ್ರ ನಿರ್ಮಾಣವಾಗದು. ವರ್ಗ, ಜಾತಿ, ತಾರತಮ್ಯವನ್ನು ನಿವಾರಿಸುವಂತಹ ಶಿಕ್ಷಣ ಅಗತ್ಯವಾಗಿದೆ. ದುಶ್ಚಟಗಳಿಂದ ದೂರವಿದ್ದು, ಶಾಂತಿಯಿಂದ ಕ್ರಾಂತಿ ಮಾಡಲು ಸಾಧ್ಯವಾಗಲಿದೆ ಎಂದು ತಿಳಿಸಿದರು.</p>.<p>ಬಸವಣ್ಣ, ಬಾಬು ಜಗಜೀವನರಾಮ್, ಅಂಬೇಡ್ಕರ್, ಕಬೀರದಾಸ್, ಕನಕದಾಸ ಸೇರಿದಂತೆ ಇನ್ನಿತರ ಮಹನೀಯರ ಜಯಂತಿ ಆಚರಣೆ ಮಾಡುವುದರ ಜೊತೆಗೆ ಅವರ ಇತಿಹಾಸ ಹಾಗೂ ಅವರ ಬಗೆಗಿನ ಗ್ರಂಥಗಳನ್ನು ತೆರೆದ ಮನಸ್ಸಿನಿಂದ ನೋಡಬೇಕಾಗಿದೆ ಎಂದರು.</p>.<p>ಹಲವು ಚಿಂತಕರು ಬಾಬು ಜಗಜೀವನರಾಮ್ ಕುರಿತು ಗ್ರಂಥಗಳನ್ನು ರಚಿಸಿದ್ದಾರೆ. ಮಹನೀಯರ ಬಗ್ಗೆ ಪುಸ್ತಕಗಳನ್ನು ಓದಿ ತಿಳಿದುಕೊಳ್ಳುವುದು ಆಧುನಿಕ ಯುಗದಲ್ಲಿ ಬಹಳ ಕಡಿಮೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಲಿನ್ ಅತುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಕಿಶೋರಬಾಬು ಹಾಗೂ ಇತರರು ಇದ್ದರು.</p>.<p class="Subhead"><strong>ಮೆರವಣಿಗೆ:</strong></p>.<p>ನಗರದ ಸ್ಟೇಷನ್ ವೃತ್ತದಲ್ಲಿ ಬಾಬು ಜಗಜೀವನರಾಮ್ ಪುತ್ಥಳಿಗೆ ಮಾಲಾರ್ಪಣೆಯ ನಂತರ ನಡೆದ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾಧಿಕಾರಿ ಬಿ.ಶರತ್ ಚಾಲನೆ ನೀಡಿದರು. ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದವರೆಗೆ ಮೆರವಣಿಗೆ ನಡೆಯಿತು.</p>.<p>ಉಪ ವಿಭಾಗಾಧಿಕಾರಿ ಶಿಲ್ಪಾ ಶರ್ಮಾ, ಪೌರಾಯುಕ್ತ ರಮೇಶ ನಾಯಕ, ಅಧಿಕಾರಿಗಳು ಹಾಗೂ ಜನರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>