<p><strong>ಮಾನ್ವಿ: ಪ</strong>ಟ್ಟಣದಲ್ಲಿ ಹಿರಿಯ ಮುಖಂಡ ಎಂ.ಈರಣ್ಣ ಅವರ 64ನೇ ಜನ್ಮದಿನಾಚರಣೆ ಪ್ರಯುಕ್ತ ಅವರ ಅಭಿಮಾನಿ ಬಳಗ ಶನಿವಾರ ಹಮ್ಮಿಕೊಂಡಿದ್ದ ಶೈಕ್ಷಣಿಕ ಮೇಳ ಎಲ್ಲರ ಗಮನ ಸೆಳೆಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಲ್ಮಠದ ವಿರೂಪಾಕ್ಷ ಪಂಡಿತಾರಾಧ್ಯ ಸ್ವಾಮೀಜಿ, ’ ಹಿರಿಯ ಮುಖಂಡ ಎಂ.ಈರಣ್ಣ ಅವರ ಸಮಾಜಮುಖಿ ಚಟುವಟಿಕೆಗಳು ಹಾಗೂ ಶೈಕ್ಷಣಿಕ ಸೇವೆ ಶ್ಲಾಘನೀಯ. ಜನ್ಮದಿನ ಆಚರಣೆ ಅಂಗವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಮಾರ್ಗದರ್ಶನ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ನಂತರ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಧಾರವಾಡದ ಶಿಕ್ಷಣ ತಜ್ಞ ಡಾ.ನಾಗರಾಜ ಎಚ್.ಎನ್ ಅವರು, ‘ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ನಂತರ ಮುಂದೇನು?’ ಕುರಿತು ವಿಷಯ ಮಂಡಿಸಿದರು.</p>.<p>‘ ಪಾಲಕರು ಮಕ್ಕಳ ಕಾಲೇಜು ಪ್ರವೇಶ, ಕೋರ್ಸ್ಗಳ ಆಯ್ಕೆ ವಿಚಾರದಲ್ಲಿ ಸ್ವಯಂ ನಿರ್ಧಾರ ಕೈಗೊಳ್ಳದೆ ಮಕ್ಕಳ ಆಸಕ್ತಿಗನುಗುಣವಾಗಿ ಉನ್ನತ ವ್ಯಾಸಂಗದ ಅವಕಾಶ ಕಲ್ಪಿಸಬೇಕು’ ಎಂದು ಅವರು ಸಲಹೆ ನೀಡಿದರು.</p>.<p>ಉಪನ್ಯಾಸಕ ರಮೇಶಬಾಬು ಯಾಳಗಿ ಅವರು, ‘ ವಿದ್ಯಾರ್ಥಿಗಳ ಶಿಕ್ಷಣ ಹಾಗೂ ಪ್ರೇರಣೆ’ ಕುರಿತು ವಿಷಯ ಮಂಡಿಸಿದರು. ಕಾರ್ಯಕ್ರಮದಲ್ಲಿ ಮಾನ್ವಿ ಹಾಗೂ ಸಿರವಾರ ತಾಲ್ಲೂಕಿನಲ್ಲಿ 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ 600ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ಶೇ90ರಷ್ಟು ಫಲಿತಾಂಶ ಪಡೆದ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.</p>.<p>ವಿವಿಧ ರಾಜಕೀಯ ಪಕ್ಷಗಳ ಗಣ್ಯರು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಎಂ.ಈರಣ್ಣ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.</p>.<p>ಚೀಕಲಪರ್ವಿ ಸುಕ್ಷೇತ್ರದ ಸದಾಶಿವ ಸ್ವಾಮೀಜಿ, ಫಾದರ್ ಟಿ.ಜ್ಞಾನಪ್ರಕಾಶಂ, ಮೌಲಾನಾ ಮುಫ್ತಿ ಜಿಶಾನ್ ಖಾದ್ರಿ, ಗಂಗಾಧರಸ್ವಾಮಿ ಸುವರ್ಣಗಿರಿಮಠ ಸಾನ್ನಿಧ್ಯವಹಿಸಿದ್ದರು. ಮುಖಂಡರಾದ ಎಂ.ಪ್ರವೀಣಕುಮಾರ, ಜಾಕೀರ್ ಮೋಹಿನುದ್ದೀನ್ ಮತ್ತು ಎಂ.ಈರಣ್ಣ ಅಭಿಮಾನಿ ಬಳಗದ ಪದಾಧಿಕಾರಿಗಳು ಇದ್ದರು. ಕೆ.ಅಜೇಯಕುಮಾರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ: ಪ</strong>ಟ್ಟಣದಲ್ಲಿ ಹಿರಿಯ ಮುಖಂಡ ಎಂ.ಈರಣ್ಣ ಅವರ 64ನೇ ಜನ್ಮದಿನಾಚರಣೆ ಪ್ರಯುಕ್ತ ಅವರ ಅಭಿಮಾನಿ ಬಳಗ ಶನಿವಾರ ಹಮ್ಮಿಕೊಂಡಿದ್ದ ಶೈಕ್ಷಣಿಕ ಮೇಳ ಎಲ್ಲರ ಗಮನ ಸೆಳೆಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಲ್ಮಠದ ವಿರೂಪಾಕ್ಷ ಪಂಡಿತಾರಾಧ್ಯ ಸ್ವಾಮೀಜಿ, ’ ಹಿರಿಯ ಮುಖಂಡ ಎಂ.ಈರಣ್ಣ ಅವರ ಸಮಾಜಮುಖಿ ಚಟುವಟಿಕೆಗಳು ಹಾಗೂ ಶೈಕ್ಷಣಿಕ ಸೇವೆ ಶ್ಲಾಘನೀಯ. ಜನ್ಮದಿನ ಆಚರಣೆ ಅಂಗವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಮಾರ್ಗದರ್ಶನ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ನಂತರ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಧಾರವಾಡದ ಶಿಕ್ಷಣ ತಜ್ಞ ಡಾ.ನಾಗರಾಜ ಎಚ್.ಎನ್ ಅವರು, ‘ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ನಂತರ ಮುಂದೇನು?’ ಕುರಿತು ವಿಷಯ ಮಂಡಿಸಿದರು.</p>.<p>‘ ಪಾಲಕರು ಮಕ್ಕಳ ಕಾಲೇಜು ಪ್ರವೇಶ, ಕೋರ್ಸ್ಗಳ ಆಯ್ಕೆ ವಿಚಾರದಲ್ಲಿ ಸ್ವಯಂ ನಿರ್ಧಾರ ಕೈಗೊಳ್ಳದೆ ಮಕ್ಕಳ ಆಸಕ್ತಿಗನುಗುಣವಾಗಿ ಉನ್ನತ ವ್ಯಾಸಂಗದ ಅವಕಾಶ ಕಲ್ಪಿಸಬೇಕು’ ಎಂದು ಅವರು ಸಲಹೆ ನೀಡಿದರು.</p>.<p>ಉಪನ್ಯಾಸಕ ರಮೇಶಬಾಬು ಯಾಳಗಿ ಅವರು, ‘ ವಿದ್ಯಾರ್ಥಿಗಳ ಶಿಕ್ಷಣ ಹಾಗೂ ಪ್ರೇರಣೆ’ ಕುರಿತು ವಿಷಯ ಮಂಡಿಸಿದರು. ಕಾರ್ಯಕ್ರಮದಲ್ಲಿ ಮಾನ್ವಿ ಹಾಗೂ ಸಿರವಾರ ತಾಲ್ಲೂಕಿನಲ್ಲಿ 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ 600ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ಶೇ90ರಷ್ಟು ಫಲಿತಾಂಶ ಪಡೆದ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.</p>.<p>ವಿವಿಧ ರಾಜಕೀಯ ಪಕ್ಷಗಳ ಗಣ್ಯರು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಎಂ.ಈರಣ್ಣ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.</p>.<p>ಚೀಕಲಪರ್ವಿ ಸುಕ್ಷೇತ್ರದ ಸದಾಶಿವ ಸ್ವಾಮೀಜಿ, ಫಾದರ್ ಟಿ.ಜ್ಞಾನಪ್ರಕಾಶಂ, ಮೌಲಾನಾ ಮುಫ್ತಿ ಜಿಶಾನ್ ಖಾದ್ರಿ, ಗಂಗಾಧರಸ್ವಾಮಿ ಸುವರ್ಣಗಿರಿಮಠ ಸಾನ್ನಿಧ್ಯವಹಿಸಿದ್ದರು. ಮುಖಂಡರಾದ ಎಂ.ಪ್ರವೀಣಕುಮಾರ, ಜಾಕೀರ್ ಮೋಹಿನುದ್ದೀನ್ ಮತ್ತು ಎಂ.ಈರಣ್ಣ ಅಭಿಮಾನಿ ಬಳಗದ ಪದಾಧಿಕಾರಿಗಳು ಇದ್ದರು. ಕೆ.ಅಜೇಯಕುಮಾರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>