<p><strong>ರಾಯಚೂರು:</strong> ಆಧುನಿಕ ಯುಗದಲ್ಲಿ ಲಭ್ಯವಾಗುವ ಅವಕಾಶಗಳನ್ನು ಮಹಿಳೆಯರು ಸಮರ್ಥವಾಗಿ ನಿಭಾಯಿಸಬೇಕು. ಇದರಿಂದ ಮಹಿಳಾ ಮೀಸಲಾತಿಗೆ ಗೌರವ ಬರುತ್ತದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಹೇಳಿದರು.</p>.<p>ನಗರದ ಬಿ.ಅರ್.ಬಿ. ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸೇಠ್ ಚುನಿಲಾಲ ಅಮರಚಂದ ಬೋಹರಾ) ಕಾನೂನು ಮಹಾವಿದ್ಯಾಲಯ ಬುಧವಾರ ಏರ್ಪಡಿಸಿದ್ದ ’ಒಂದು ದಿನದ ಮಹಿಳಾ ಸಾಂಸ್ಕೃತಿಕ ಉತ್ಸವ-2019’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದು ತುಂಬಾ ಮುಖ್ಯ. ಬರೀ ಪಠ್ಯಪುಸ್ತಕ ಓದುವುದಕ್ಕೆ ಸಿಮೀತವಾಗಬಾರದು ಎಂದರು.</p>.<p>ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಇರಬೇಕು. ಸೋಲು ಮತ್ತು ಗೆಲುವು ಎರಡನ್ನೂ ಸಮಾನವಾಗಿ ತೆಗೆದುಕೊಳ್ಳಬೇಕು, ಸೋತವರನ್ನು ಪ್ರೋತ್ಸಾಹಿಸುವ ಕೆಲಸವನ್ನು ಎಲ್ಲರೂ ಮಾಡಬೇಕು ಎಂದು ಹೇಳಿದರು.</p>.<p>ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಓದುವ ಆಸಕ್ತಿ ಉಳಿಯುವುದಕ್ಕೆ ಇದು ಅಗತ್ಯ ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿಯ ಕಾರ್ಯದರ್ಶಿ ವಿಜಯಕುಮಾರ್ ಮಟಮಾರಿ ಮಾತನಾಡಿ, ಮಹಿಳಾ ಸಾಂಸ್ಕೃತಿಕ ಉತ್ಸವದ ಉದ್ದೇಶವನ್ನು ವಿವರಿಸಿದರು.</p>.<p>ಎಸ್.ಸಿ.ಎ.ಬಿ. ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಬಿ.ವೀರಭದ್ರಪ್ಪ, ಎಸ್.ಸಿ.ಎ.ಬಿ. ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಪದ್ಮಾ ಜಾಗೀರದಾರ್, ಬಿ.ಅರ್.ಬಿ. ವಾಣಿಜ್ಯ ಮಹಾವಿದ್ಯಾಲಯದ ಪ್ರಭಾರಿ ಪ್ರಾಚಾರ್ಯ ಚನ್ನಬಸಯ್ಯ ಹುನಕುಂಟಿಮಠ, ಡಾ.ಜಯಲಕ್ಷ್ಮೀ ಮಂಗಳಮೂರ್ತಿ ಇದ್ದರು.</p>.<p>ಮಹಾಲಕ್ಷ್ಮೀ ಪ್ರಾರ್ಥಿಸಿದರು, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಬಿ. ನೀಲಮ್ಮ ಸ್ವಾಗತಿಸಿದರು. ಎಸ್.ಸಿ.ಎ.ಬಿ. ಕಾನೂನು ಮಹಾವಿದ್ಯಾಲಯದ ಸಹ-ಪ್ರಾಧ್ಯಾಪಕಿ ವಸುಂಧರಾ ಪಾಟೀಲ ನಿರೂಪಿಸಿದರು. ಬಿ.ಅರ್.ಬಿ. ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಸಹ-ಪಾಧ್ಯಾಪಕ ಡಾ.ಚನ್ನಬಸಯ್ಯ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಆಧುನಿಕ ಯುಗದಲ್ಲಿ ಲಭ್ಯವಾಗುವ ಅವಕಾಶಗಳನ್ನು ಮಹಿಳೆಯರು ಸಮರ್ಥವಾಗಿ ನಿಭಾಯಿಸಬೇಕು. ಇದರಿಂದ ಮಹಿಳಾ ಮೀಸಲಾತಿಗೆ ಗೌರವ ಬರುತ್ತದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಹೇಳಿದರು.</p>.<p>ನಗರದ ಬಿ.ಅರ್.ಬಿ. ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸೇಠ್ ಚುನಿಲಾಲ ಅಮರಚಂದ ಬೋಹರಾ) ಕಾನೂನು ಮಹಾವಿದ್ಯಾಲಯ ಬುಧವಾರ ಏರ್ಪಡಿಸಿದ್ದ ’ಒಂದು ದಿನದ ಮಹಿಳಾ ಸಾಂಸ್ಕೃತಿಕ ಉತ್ಸವ-2019’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದು ತುಂಬಾ ಮುಖ್ಯ. ಬರೀ ಪಠ್ಯಪುಸ್ತಕ ಓದುವುದಕ್ಕೆ ಸಿಮೀತವಾಗಬಾರದು ಎಂದರು.</p>.<p>ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಇರಬೇಕು. ಸೋಲು ಮತ್ತು ಗೆಲುವು ಎರಡನ್ನೂ ಸಮಾನವಾಗಿ ತೆಗೆದುಕೊಳ್ಳಬೇಕು, ಸೋತವರನ್ನು ಪ್ರೋತ್ಸಾಹಿಸುವ ಕೆಲಸವನ್ನು ಎಲ್ಲರೂ ಮಾಡಬೇಕು ಎಂದು ಹೇಳಿದರು.</p>.<p>ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಓದುವ ಆಸಕ್ತಿ ಉಳಿಯುವುದಕ್ಕೆ ಇದು ಅಗತ್ಯ ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿಯ ಕಾರ್ಯದರ್ಶಿ ವಿಜಯಕುಮಾರ್ ಮಟಮಾರಿ ಮಾತನಾಡಿ, ಮಹಿಳಾ ಸಾಂಸ್ಕೃತಿಕ ಉತ್ಸವದ ಉದ್ದೇಶವನ್ನು ವಿವರಿಸಿದರು.</p>.<p>ಎಸ್.ಸಿ.ಎ.ಬಿ. ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಬಿ.ವೀರಭದ್ರಪ್ಪ, ಎಸ್.ಸಿ.ಎ.ಬಿ. ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಪದ್ಮಾ ಜಾಗೀರದಾರ್, ಬಿ.ಅರ್.ಬಿ. ವಾಣಿಜ್ಯ ಮಹಾವಿದ್ಯಾಲಯದ ಪ್ರಭಾರಿ ಪ್ರಾಚಾರ್ಯ ಚನ್ನಬಸಯ್ಯ ಹುನಕುಂಟಿಮಠ, ಡಾ.ಜಯಲಕ್ಷ್ಮೀ ಮಂಗಳಮೂರ್ತಿ ಇದ್ದರು.</p>.<p>ಮಹಾಲಕ್ಷ್ಮೀ ಪ್ರಾರ್ಥಿಸಿದರು, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಬಿ. ನೀಲಮ್ಮ ಸ್ವಾಗತಿಸಿದರು. ಎಸ್.ಸಿ.ಎ.ಬಿ. ಕಾನೂನು ಮಹಾವಿದ್ಯಾಲಯದ ಸಹ-ಪ್ರಾಧ್ಯಾಪಕಿ ವಸುಂಧರಾ ಪಾಟೀಲ ನಿರೂಪಿಸಿದರು. ಬಿ.ಅರ್.ಬಿ. ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಸಹ-ಪಾಧ್ಯಾಪಕ ಡಾ.ಚನ್ನಬಸಯ್ಯ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>