<p><strong>ದೇವದುರ್ಗ:</strong> ಅರಕೇರಾ ತಾಲ್ಲೂಕಿನ ಕೊತ್ತದೊಡ್ಡಿ ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆ ಮಕ್ಕಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ರಾಖಿ ಕಟ್ಟಿಸಿಕೊಂಡಿದ್ದಾರೆ.</p>.<p>ದೆಹಲಿಯಲ್ಲಿ ಬುಡಕಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಸಿಂಧು ಕಾರ್ಯಕ್ರಮದಡಿಯಲ್ಲಿ ನಡೆದ ರಾಷ್ಟ್ರಪತಿಗಳ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದಿಂದ ರಾಯಚೂರು, ಕೊಡಗು, ಬೆಳಗಾವಿ ಮತ್ತು ಕೋಲಾರ ಜಿಲ್ಲೆಯ ಬುಡಕಟ್ಟು ಸಮುದಾಯದ ವಸತಿ ಶಾಲೆಗಳ ಮಕ್ಕಳಿಗೆ ಅವಕಾಶ ಕಲ್ಪಿಸಲಾಗಿತ್ತು.</p>.<p>ವಿದ್ಯಾರ್ಥಿಗಳಾದ ಚನ್ನಬಸವ ಗಲಗ (10ನೇ ತರಗತಿ), ಭರತ್ ಕೊತ್ತದೊಡ್ಡಿ (8ನೇ ತರಗತಿ), ಮಂಜುನಾಥ ದೇವದುರ್ಗ (9ನೇ ತರಗತಿ), ಮಣಿಕಂಠ ಕೊತ್ತದೊಡ್ಡಿ (8ನೇ ತರಗತಿ) ಮತ್ತು ವೀರೇಶ ದೇವತಗಲ್ (9ನೇ ತರಗತಿ) ವಿದ್ಯಾರ್ಥಿಗಳಿಗೆ ರಾಷ್ಟ್ರಪತಿಗಳು ರಾಖಿ ಕಟ್ಟಿದ್ದಾರೆ.</p>.<p>ಬಳಿಕ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಜೊತೆ ಗುಣಮಟ್ಟದ ಶಿಕ್ಷಣ, ಮೂಲಸೌಕರ್ಯ ಮತ್ತು ಅಗತ್ಯತೆಗಳ ಕುರಿತು ಚರ್ಚಿಸಿದರು. ಬುಡಕಟ್ಟು ಜನಾಂಗದವರಲ್ಲಿ ಶಿಕ್ಷಣದ ಕುರಿತು ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವದುರ್ಗ:</strong> ಅರಕೇರಾ ತಾಲ್ಲೂಕಿನ ಕೊತ್ತದೊಡ್ಡಿ ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆ ಮಕ್ಕಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ರಾಖಿ ಕಟ್ಟಿಸಿಕೊಂಡಿದ್ದಾರೆ.</p>.<p>ದೆಹಲಿಯಲ್ಲಿ ಬುಡಕಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಸಿಂಧು ಕಾರ್ಯಕ್ರಮದಡಿಯಲ್ಲಿ ನಡೆದ ರಾಷ್ಟ್ರಪತಿಗಳ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದಿಂದ ರಾಯಚೂರು, ಕೊಡಗು, ಬೆಳಗಾವಿ ಮತ್ತು ಕೋಲಾರ ಜಿಲ್ಲೆಯ ಬುಡಕಟ್ಟು ಸಮುದಾಯದ ವಸತಿ ಶಾಲೆಗಳ ಮಕ್ಕಳಿಗೆ ಅವಕಾಶ ಕಲ್ಪಿಸಲಾಗಿತ್ತು.</p>.<p>ವಿದ್ಯಾರ್ಥಿಗಳಾದ ಚನ್ನಬಸವ ಗಲಗ (10ನೇ ತರಗತಿ), ಭರತ್ ಕೊತ್ತದೊಡ್ಡಿ (8ನೇ ತರಗತಿ), ಮಂಜುನಾಥ ದೇವದುರ್ಗ (9ನೇ ತರಗತಿ), ಮಣಿಕಂಠ ಕೊತ್ತದೊಡ್ಡಿ (8ನೇ ತರಗತಿ) ಮತ್ತು ವೀರೇಶ ದೇವತಗಲ್ (9ನೇ ತರಗತಿ) ವಿದ್ಯಾರ್ಥಿಗಳಿಗೆ ರಾಷ್ಟ್ರಪತಿಗಳು ರಾಖಿ ಕಟ್ಟಿದ್ದಾರೆ.</p>.<p>ಬಳಿಕ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಜೊತೆ ಗುಣಮಟ್ಟದ ಶಿಕ್ಷಣ, ಮೂಲಸೌಕರ್ಯ ಮತ್ತು ಅಗತ್ಯತೆಗಳ ಕುರಿತು ಚರ್ಚಿಸಿದರು. ಬುಡಕಟ್ಟು ಜನಾಂಗದವರಲ್ಲಿ ಶಿಕ್ಷಣದ ಕುರಿತು ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>